
ನವದೆಹಲಿ(ನ.27) : ಡಿ.2 ರಿಂದ 8ರ ವರೆಗೆ ನಡೆಯಲಿರುವ ನೇಪಾಳ ವಿರುದ್ಧದ ಸೀಮಿತ ಓವರ್ಗಳ ಸರಣಿಗೆ ಭಾರತೀಯ ಅಂಧರ ಕ್ರಿಕೆಟ್ ಸಂಸ್ಥೆ (ಸಿಎಬಿಐ) ಆಯ್ಕೆ ಸಮಿತಿ, 10 ರಾಜ್ಯಗಳಿಂದ 14 ಸದಸ್ಯರ ಭಾರತ ತಂಡವನ್ನು ಆಯ್ಕೆ ಮಾಡಿದೆ
ಇದನ್ನೂ ಓದಿ: ಬೆಂಗಳೂರಿನಲ್ಲಿ ಅಂಧರ ಕ್ರಿಕೆಟ್ ಅವಾರ್ಡ್ ಸಮಾರಂಭ- ಇಲ್ಲಿದೆ ಪ್ರಶಸ್ತಿ ಗೆದ್ದವರ ಲಿಸ್ಟ್!
ಕರ್ನಾಟಕದ ಸುನಿಲ್ ರಮೇಶ್ರನ್ನು ಏಕದಿನ ತಂಡದ ನಾಯಕರನ್ನಾಗಿ ನೇಮಿಸಿದೆ. ರಾಜ್ಯದ ಆಟಗಾರರಾದ ಲೋಕೇಶ್, ಏಕದಿನ ನಾಯಕ ಸುನಿಲ್, ಏಕದಿನ ಹಾಗೂ ಟಿ20 ಎರಡೂ ತಂಡಗಳಲ್ಲಿ ಸ್ಥಾನ ಪಡೆದಿದ್ದಾರೆ. ಭಾರತ ಅಂಧರ ಟಿ20 ನಾಯಕರಾಗಿ ಹರ್ಯಾಣದ ದೀಪಕ್ ಮಲಿಕ್ ಆಯ್ಕೆ ಆಗಿದ್ದಾರೆ.
ಇದನ್ನೂ ಓದಿ: ಅಂಧರ ಟಿ20: ಲಂಕಾ ವಿರುದ್ಧ ಭಾರತಕ್ಕೆ ಸರಣಿ!
ಡಿ.2ರಿಂದ 4ರ ವರೆಗೆ ಕಾನ್ಪುರದಲ್ಲಿ 3 ಪಂದ್ಯಗಳ ಏಕದಿನ ಸರಣಿ ನಡೆಯಲಿದೆ. ಡಿ.6 ರಿಂದ 8ರ ವರೆಗೆ ಡೆಹ್ರಾಡೂನ್ನಲ್ಲಿ 3 ಪಂದ್ಯಗಳ ಟಿ20 ಸರಣಿ ನಡೆಯಲಿದೆ.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗೂ ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.