IPL ಶಾಕ್ ಬೆನ್ನಲ್ಲೇ ಟಿ20 ವಿಶ್ವಕಪ್ ಆತಿಥ್ಯ ಕಳೆದುಕೊಳ್ಳುವ ಭೀತಿಯಲ್ಲಿ ಭಾರತ!

Published : May 04, 2021, 06:38 PM IST
IPL ಶಾಕ್ ಬೆನ್ನಲ್ಲೇ ಟಿ20 ವಿಶ್ವಕಪ್ ಆತಿಥ್ಯ ಕಳೆದುಕೊಳ್ಳುವ ಭೀತಿಯಲ್ಲಿ ಭಾರತ!

ಸಾರಾಂಶ

ಆಟಗಾರರು, ಸಿಬ್ಬಂದಿಗಳಲ್ಲಿ ಕೊರೋನಾ ವೈರಸ್ ಪ್ರಕರಣ ಹೆಚ್ಚಾಗುತ್ತಿರುವ ಕಾರಣ ಐಪಿಎಲ್ ಟೂರ್ನಿಯನ್ನು ರದ್ದು ಮಾಡಿದೆ. ಇದರ ಬೆನ್ನಲ್ಲೇ  ಅಕ್ಟೋಬರ್ ತಿಂಗಳಲ್ಲಿ ಆಯೋಜಿಸಲು ಉದ್ದೇಶಿಸಿರುವ ಟಿ20 ವಿಶ್ವಕಪ್ ಟೂರ್ನಿ ಆತಿಥ್ಯ ಕೂಡ ಭಾರತದ ಕೈತಪ್ಪು ಭೀತಿ ಎದುರಾಗಿದೆ.  

ನವದೆಹಲಿ(ಮೇ.04): ಕೊರೋನಾ ವೈರಸ್ ಇದೀಗ ಸಂಪೂರ್ಣ ಭಾರತವನ್ನೇ ಸ್ಥಬ್ಧ ಮಾಡುತ್ತಿದೆ. ಬಯೋಬಬಲ್ ಸರ್ಕಲ್ ಹಾಗೂ ಕಠಿಣ ಮಾರ್ಗಸೂಚಿ ಮೂಲಕ ನಡೆಯುತ್ತಿದ್ದ ಐಪಿಎಲ್ ಟೂರ್ನಿ ರದ್ದಾಗಿದೆ. ಇದೀಗ ಭಾರತ ಆತಿಥ್ಯ ವಹಿಸಿದ್ದ ಟಿ20 ವಿಶ್ವಕಪ್ ಟೂರ್ನಿ ಕೂಡ ಭಾರತದಿಂದ ಸ್ಥಳಾಂತರಗೊಳ್ಳುವ ಸೂಚನೆಗಳಿವೆ.

ಐಪಿಎಲ್ ರದ್ದು: ಈ ಸಲ ಕಪ್ ಕೊರೋನಾದ್ದು!

ಕೊರೋನಾ ವೈರಸ್ ಕಾರಣ ಕಳೆದ ವರ್ಷ ಆಸ್ಟ್ರೇಲಿಯಾದಲ್ಲಿ ಆಯೋಜನೆಯಾಗಬೇಕಿದ್ದ ಟಿ20 ವಿಶ್ವಕಪ್ ಟೂರ್ನಿ ಮುಂದೂಡಲಾಗಿತ್ತು. ದುಬೈನಲ್ಲಿ ಐಪಿಎಲ್ ಟೂರ್ನಿಯನ್ನು ಯಶಸ್ವಿಯಾಗಿ ಆಯೋಜಿಸಿದ ಬಿಸಿಸಿಐ , 2021ರಲ್ಲಿ ಟಿ20  ವಿಶ್ವಕಪ್ ಆಯೋಜಿಸಲು ಆತಿಥ್ಯ ಪಡೆದಿತ್ತು. ಇದೀಗ ಭಾರತದಲ್ಲಿನ ಕೊರೋನಾ ಪರಿಸ್ಥಿತಿ ಗಂಭೀರವಾಗಿರುವ ಕಾರಣ ಭಾರತದಿಂದ ಟಿ20 ವಿಶ್ವಕಪ್ ಟೂರ್ನಿ ದುಬೈಗೆ ಸ್ಥಳಾಂತರವಾಗುವ ಸಾಧ್ಯತೆ ಹೆಚ್ಚಿದೆ.

IPL 2021: ವೃದ್ಧಿಮಾನ್ ಸಾಹ, ಅಮಿತ್ ಮಿಶ್ರಾಗೆ ಕೊರೋನಾ ಪಾಸಿಟೀವ್!...

ಐಸಿಸಿ ಹಾಗೂ ಬಿಸಿಸಿಐ ಈಗಾಗಲೇ ಈ ಕುರಿತು ಮಾತುಕತೆ ನಡೆಸಿದೆ. ದುಬೈಗೆ ಟಿ20 ವಿಶ್ವಕಪ್ ಟೂರ್ನಿ ಸ್ಥಳಾಂತರಿಸಲು ಐಸಿಸಿ ಉತ್ಸಾಹ ತೋರಿದೆ. ಆದರೆ ಬಿಸಿಸಿಐ ಅಕ್ಟೋಬರ್ ವೇಳೆಗೆ ಭಾರತದಲ್ಲಿ ಪರಿಸ್ಥಿತಿ ಸುಧಾರಿಸಿದರೆ, ಆಯೋಜಿಸುವ ಲೆಕ್ಕಾಚಾರದಲ್ಲಿದೆ. ಆದರೆ ಸದ್ಯದ ಪರಿಸ್ಥಿತಿ ನೋಡಿದರೆ ಭಾರತದಲ್ಲಿ ಟಿ20 ವಿಶ್ವಕಪ್ ಆಯೋಜನೆ ಕಷ್ಟ. ಇನ್ನು ದುಬೈನಲ್ಲಿ ಆಯೋಜನೆಯಾದರೂ, ಟೀಂ ಇಂಡಿಯಾ ಪಾಲ್ಗೊಳ್ಳುವುದು ಕೂಡ ಸವಾಲಾಗಲಿದೆ.

PREV

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ದೇಶದ ಅಗ್ರ ಟಿ20 ಟೂರ್ನಿಯಲ್ಲೇ ಮ್ಯಾಚ್‌ ಫಿಕ್ಸಿಂಗ್‌, ನಾಲ್ವರು ಕ್ರಿಕೆಟಿಗರ ಸಸ್ಪೆಂಡ್‌ ಮಾಡಿ ತನಿಖೆಗೆ ಆದೇಶಿಸಿದ ಬಿಸಿಸಿಐ!
ಹೃತಿಕ್‌ ರೋಶನ್‌ 'ಕ್ರಿಶ್‌' ಸಿನಿಮಾದಲ್ಲಿ ಬಾಲನಟಿಯಾಗಿದ್ರಾ ಧೋನಿ ಪತ್ನಿ ಸಾಕ್ಷಿ?