
ಲಂಡನ್: ಭಾರತ ಮತ್ತು ಇಂಗ್ಲೆಂಡ್ ನಡುವೆ ಐದು ಪಂದ್ಯಗಳ ಆಂಡರ್ಸನ್-ತೆಂಡೂಲ್ಕರ್ ಟ್ರೋಫಿ 2025 ಇಂಗ್ಲೆಂಡ್ನಲ್ಲಿ ನಡೆಯುತ್ತಿದೆ, ಮೂರು ಪಂದ್ಯಗಳು ಮುಗಿದಿವೆ. ಇಂಗ್ಲೆಂಡ್ 2-1 ಅಂತರದಿಂದ ಮುನ್ನಡೆಯಲ್ಲಿದೆ ಮತ್ತು ಭಾರತ ತಂಡ ಉಳಿದ ಎರಡು ಪಂದ್ಯಗಳನ್ನು ಗೆದ್ದು ಸರಣಿ ವಶಪಡಿಸಿಕೊಳ್ಳಲು ಎದುರು ನೋಡುತ್ತಿದೆ.
ಇಂಗ್ಲೆಂಡ್ ಎದುರು ಲಾರ್ಡ್ಸ್ ಟೆಸ್ಟ್ ಪಂದ್ಯದಲ್ಲಿ ಟೀಂ ಇಂಡಿಯಾ, 22 ರನ್ ಅಂತರದ ರೋಚಕ ಸೋಲು ಅನುಭವಿಸಿತ್ತು. ಈ ಸೋಲಿನಿಂದ ಪಾಠ ಕಲಿತಿರುವ ಶುಭ್ಮನ್ ಗಿಲ್ ಪಡೆ ನಾಲ್ಕನೇ ಟೆಸ್ಟ್ ಪಂದ್ಯದಲ್ಲಿ ಕೆಲ ಬದಲಾವಣೆಗಳೊಂದಿಗೆ ಕಣಕ್ಕಿಳಿಯುವ ಸಾಧ್ಯತೆಯಿದೆ. ಭಾರತ ಮತ್ತು ಇಂಗ್ಲೆಂಡ್ ನಡುವಿನ ನಾಲ್ಕನೇ ಟೆಸ್ಟ್ ಪಂದ್ಯ ಇದೇ ಜುಲೈ 23 ರಿಂದ 27 ರವರೆಗೆ ಮ್ಯಾಂಚೆಸ್ಟರ್ನ ಓಲ್ಡ್ ಟ್ರಾಫರ್ಡ್ ಮೈದಾನದಲ್ಲಿ ನಡೆಯಲಿದೆ.
ಭಾರತದ ಟಾಪ್ ಆರ್ಡರ್ನಲ್ಲಿ ಬದಲಾವಣೆ ಸಾಧ್ಯತೆ!
ಭಾರತ ಮತ್ತು ಇಂಗ್ಲೆಂಡ್ ನಡುವಿನ ಎರಡನೇ ಟೆಸ್ಟ್ ಪಂದ್ಯದಲ್ಲಿ ಭಾರತದ ಟಾಪ್ ಆರ್ಡರ್ ವೈಫಲ್ಯ ಕಂಡಿತು. ಯಶಸ್ವಿ ಜೈಸ್ವಾಲ್ ಮೊದಲ ಮತ್ತು ಎರಡನೇ ಇನ್ನಿಂಗ್ಸ್ಗಳಲ್ಲಿ 0 ಮತ್ತು 13 ರನ್ ಗಳಿಸಿದರು. ಕರುಣ್ ನಾಯರ್ 14 ರನ್ ಗಳಿಸಿದರು. ಎರಡನೇ ಇನ್ನಿಂಗ್ಸ್ನಲ್ಲಿ 193 ರನ್ಗಳ ಗುರಿಯನ್ನು ಬೆನ್ನಟ್ಟುವಾಗ ಕರುಣ್ ನಾಯರ್ 14 ರನ್ಗಳಿಗೆ ಔಟಾದರು ಮತ್ತು ನಂತರ ಭಾರತದ ವಿಕೆಟ್ಗಳು ಬೀಳುತ್ತಲೇ ಇದ್ದವು. ಹೀಗಾಗಿ ಟಾಪ್ ಆರ್ಡರ್ನಲ್ಲಿ ಬದಲಾವಣೆಗಳಾಗಬಹುದು. ಹೀಗಾದಲ್ಲಿ ಕರುಣ್ ನಾಯರ್ಗೆ ವಿಶ್ರಾಂತಿ ನೀಡಿ ಸಾಯಿ ಸುದರ್ಶನ್ ಇಲ್ಲವೇ ಅಭಿಮನ್ಯು ಈಶ್ವರನ್ಗೆ ಭಾರತ ಟೆಸ್ಟ್ ತಂಡದಲ್ಲಿ ಮೂರನೇ ಕ್ರಮಾಂಕದ ಬ್ಯಾಟರ್ ಆಗಿ ಕಣಕ್ಕಿಳಿಸುವ ಸಾಧ್ಯತೆ ದಟ್ಟವಾಗಿದೆ.
ಇನ್ನು ವಿಕೆಟ್ ಕೀಪರ್ ಬ್ಯಾಟರ್ ರಿಷಭ್ ಪಂತ್ ಅವರ ಗಾಯವನ್ನು ಪರಿಶೀಲಿಸಲು ಸ್ಕ್ಯಾನ್ಗೆ ಕಳುಹಿಸಲಾಗಿದೆ. ಅವರು ಸಂಪೂರ್ಣವಾಗಿ ಫಿಟ್ ಆಗಿದ್ದರೆ ನಾಲ್ಕನೇ ಟೆಸ್ಟ್ ಆಡುತ್ತಾರೆ, ಇಲ್ಲದಿದ್ದರೆ ಅವರ ಸ್ಥಾನದಲ್ಲಿ ಧ್ರುವ್ ಜುರೆಲ್ ವಿಕೆಟ್ ಕೀಪರ್-ಬ್ಯಾಟ್ಸ್ಮನ್ ಆಗಿ ಕಾಣಿಸಿಕೊಳ್ಳುವ ಸಾಧ್ಯತೆ ದಟ್ಟವಾಗಿದೆ.
ಕರುಣ್ ನಾಯರ್ ಸ್ಥಾನದಲ್ಲಿ ಯಾರು?
ನಾಲ್ಕನೇ ಟೆಸ್ಟ್ನಲ್ಲಿ ಕರುಣ್ ನಾಯರ್ಗೆ ವಿಶ್ರಾಂತಿ ನೀಡಿದರೆ, ಅವರ ಸ್ಥಾನದಲ್ಲಿ ಅಭಿಮನ್ಯು ಈಶ್ವರನ್ ಅಥವಾ ಸಾಯಿ ಸುದರ್ಶನ್ ಆಡಬಹುದು. ಸಾಯಿ ಸುದರ್ಶನ್ ಮೊದಲ ಟೆಸ್ಟ್ನಲ್ಲಿ ಆಡಿದ್ದರು, ಅಲ್ಲಿ ಅವರು ಮೊದಲ ಇನ್ನಿಂಗ್ಸ್ನಲ್ಲಿ 0 ಮತ್ತು ಎರಡನೇ ಇನ್ನಿಂಗ್ಸ್ನಲ್ಲಿ 30 ರನ್ ಗಳಿಸಿದ್ದರು. ಅಭಿಮನ್ಯು ಈಶ್ವರನ್ ಇನ್ನೂ ಚೊಚ್ಚಲ ಪಂದ್ಯವನ್ನಾಡಿಲ್ಲ. ಅವರು 103 ಪ್ರಥಮ ದರ್ಜೆ ಪಂದ್ಯಗಳಲ್ಲಿ 7841 ರನ್ ಗಳಿಸಿದ್ದಾರೆ.
ಬುಮ್ರಾಗೆ ವಿಶ್ರಾಂತಿ ಸಿಗುತ್ತದೆಯೇ?
ಜಸ್ಪ್ರೀತ್ ಬುಮ್ರಾಗೆ ನಾಲ್ಕನೇ ಟೆಸ್ಟ್ನಲ್ಲಿ ವಿಶ್ರಾಂತಿ ಎಂನೀಡಬಹುದುದು ಹೇಳಲಾಗುತ್ತಿದೆ. ಅವರ ಸ್ಥಾನದಲ್ಲಿ ಅರ್ಶ್ದೀಪ್ ಆಡಬಹುದು. ಅರ್ಶ್ದೀಪ್ ಇತ್ತೀಚಿನ ಐಪಿಎಲ್ನಲ್ಲಿ 17 ಪಂದ್ಯಗಳಲ್ಲಿ 21 ವಿಕೆಟ್ ಪಡೆದಿದ್ದಾರೆ. ಅವರು ಇನ್ನೂ ಭಾರತ ತಂಡಕ್ಕೆ ಟೆಸ್ಟ್ನಲ್ಲಿ ಚೊಚ್ಚಲ ಪಂದ್ಯವನ್ನಾಡಿಲ್ಲ. 9 ಏಕದಿನ ಪಂದ್ಯಗಳಲ್ಲಿ 14 ಮತ್ತು 63 ಟಿ20 ಪಂದ್ಯಗಳಲ್ಲಿ 99 ವಿಕೆಟ್ ಪಡೆದಿದ್ದಾರೆ.
ಇಂಗ್ಲೆಂಡ್ ವಿರುದ್ಧ ನಾಲ್ಕನೇ ಟೆಸ್ಟ್ಗೆ ಭಾರತದ ಸಂಭಾವ್ಯ ಪ್ಲೇಯಿಂಗ್ 11
ಯಶಸ್ವಿ ಜೈಸ್ವಾಲ್, ಕೆ ಎಲ್ ರಾಹುಲ್, ಸಾಯಿ ಸುದರ್ಶನ್, ಶುಭಮನ್ ಗಿಲ್ (ನಾಯಕ), ರವೀಂದ್ರ ಜಡೇಜಾ, ಧ್ರುವ್ ಜುರೆಲ್ (ವಿಕೆಟ್ ಕೀಪರ್), ನೀತೀಶ್ ಕುಮಾರ್ ರೆಡ್ಡಿ, ವಾಷಿಂಗ್ಟನ್ ಸುಂದರ್, ಮೊಹಮ್ಮದ್ ಸಿರಾಜ್, ಆಕಾಶ್ ದೀಪ್ ಮತ್ತು ಅರ್ಶ್ದೀಪ್ ಸಿಂಗ್.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗೂ ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.