ಶ್ರೀಲಂಕಾಗಿಂದು ಧವನ್ ನೇತೃತ್ವದ ಟೀಂ ಇಂಡಿಯಾ ಪ್ರಯಾಣ

Suvarna News   | Asianet News
Published : Jun 28, 2021, 09:50 AM ISTUpdated : Jun 28, 2021, 11:07 AM IST
ಶ್ರೀಲಂಕಾಗಿಂದು ಧವನ್ ನೇತೃತ್ವದ ಟೀಂ ಇಂಡಿಯಾ ಪ್ರಯಾಣ

ಸಾರಾಂಶ

* ಲಂಕಾ ಸರಣಿಗೆ ವಿಮಾನವೇರಲು ಸಜ್ಜಾದ ಧವನ್ ನೇತೃತ್ವದ ಟೀಂ ಇಂಡಿಯಾ * ಲಂಕಾ ಸರಣಿಯಲ್ಲಿ ಸೀಮಿತ ಓವರ್‌ಗಳ ಸರಣಿ ಆಡಲಿರುವ ಭಾರತ * ಲಂಕಾ ವಿರುದ್ದದ ಸೀಮಿತ ಓವರ್‌ಗಳ ಸರಣಿ ಜುಲೈ 13ರಿಂದ ಆರಂಭ  

ಮುಂಬೈ(ಜೂ.28): ಏಕದಿನ ಹಾಗೂ ಟಿ20 ಸರಣಿಗಳನ್ನು ಆಡಲು ಭಾರತ ತಂಡ ಸೋಮವಾರ ಶ್ರೀಲಂಕಾಕ್ಕೆ ಪ್ರಯಾಣಿಸಲಿದೆ. ಬೆಳಗ್ಗೆ 11.30ಕ್ಕೆ ಮುಂಬೈನಿಂದ ವಿಶೇಷ ವಿಮಾನದಲ್ಲಿ ತಂಡ ಕೊಲಂಬೋಗೆ ತೆರಳಲಿದೆ ಎಂದು ತಂಡದ ಮೂಲಗಳು ತಿಳಿಸಿವೆ. 

ಭಾನುವಾರ ಭಾರತ ತಂಡದ ನಾಯಕ ಶಿಖರ್‌ ಧವನ್‌ ಹಾಗೂ ಪ್ರಧಾನ ಕೋಚ್‌ ರಾಹುಲ್‌ ದ್ರಾವಿಡ್‌ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು. ಭಾರತ ಕ್ರಿಕೆಟ್‌ ತಂಡದ ನಾಯಕನಾಗಿರುವುದು ತುಂಬಾ ಗೌರವದ ವಿಚಾರ. ಒಂದು ತಂಡವಾಗಿ ಲಂಕಾ ಸರಣಿಯಲ್ಲಿ ಉತ್ತಮ ಪ್ರದರ್ಶನ ನೀಡಲು ಎದುರು ನೋಡುತ್ತಿರುವುದಾಗಿ ಧವನ್ ಹೇಳಿದ್ದಾರೆ. ‘ಈ ಸರಣಿ ನಮ್ಮ ಆಟಗಾರರಿಗೆ ತಮ್ಮ ಪ್ರತಿಭೆಗಳನ್ನು ಪ್ರದರ್ಶಿಸಲು ಉತ್ತಮ ವೇದಿಕೆಯಾಗಲಿದೆ. ತಂಡ ಅತ್ಯುತ್ತಮವಾಗಿದೆ. ಬಹಳ ಆತ್ಮವಿಶ್ವಾಸದೊಂದಿಗೆ ನಾವು ಆಡಲಿದ್ದೇವೆ’ ಎಂದು ಧವನ್‌ ಹೇಳಿದರು. 

ಶ್ರೀಲಂಕಾ ವಿರುದ್ದದ ಸರಣಿಯಿಂದ ಹೊರಬಿದ್ದ ಜೋಸ್ ಬಟ್ಲರ್

ಇದೇ ವೇಳೆ ರಾಹುಲ್‌ ದ್ರಾವಿಡ್‌ ಮಾತನಾಡಿ, ‘ತಂಡದಲ್ಲಿರುವ ಎಲ್ಲರಿಗೂ ಟಿ20 ವಿಶ್ವಕಪ್‌ಗೆ ಆಯ್ಕೆಯಾಗಬೇಕು ಎನ್ನುವ ಆಸೆಯಿದೆ. ಆದರೆ 3 ಏಕದಿನ, 3 ಟಿ20 ಪಂದ್ಯಗಳ ಸರಣಿಗಳಲ್ಲಿ ಎಲ್ಲಾ ಆಟಗಾರರಿಗೆ ಅವಕಾಶ ಸಿಗುವುದು ಕಷ್ಟ’ ಎಂದರು. 

ಶಿಖರ್ ಧವನ್ ನೇತೃತ್ವದ ಟೀಂ ಇಂಡಿಯಾ ಮೊದಲಿಗೆ 3 ಪಂದ್ಯಗಳ ಸರಣಿ ಆಡಲಿದೆ. ಇದಾದ ಬಳಿಕ 3 ಪಂದ್ಯಗಳ ಟಿ20 ಸರಣಿಯಲ್ಲಿ ಲಂಕಾ ಎದುರು ಯಂಗಿಸ್ತಾನ್‌ ಕಾದಾಟ ನಡೆಸಲಿದೆ. ಏಕದಿನ ಪಂದ್ಯಗಳ ಸರಣಿ ಕ್ರಮವಾಗಿ ಜುಲೈ 13, 16 ಹಾಗೂ 18ರಂದು ನಡೆಯಲಿದೆ. ಇನ್ನು ಟಿ20 ಸರಣಿ ಕ್ರಮವಾಗಿ ಜುಲೈ 21, 23 ಹಾಗೂ 25ರಂದು ನಡೆಯಲಿದ್ದು, ಈ ಎಲ್ಲಾ ಪಂದ್ಯಗಳಿಗೆ ಕೊಲಂಬೊದ ಆರ್ ಪ್ರೇಮದಾಸ ಸ್ಟೇಡಿಯಂ ಆತಿಥ್ಯವನ್ನು ವಹಿಸಲಿದೆ.
 

PREV

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಭಾರತ-ಪಾಕಿಸ್ತಾನ ಟಿ20 ವಿಶ್ವಕಪ್ ಪಂದ್ಯದ ಟಿಕೆಟ್ ಮಾರಾಟ ಆರಂಭ, 450 ರೂಗೆ ಬುಕಿಂಗ್ ಹೇಗೆ?
ಸಂಜು ಸ್ಯಾಮ್ಸನ್ ಔಟ್, ಶುಭ್‌ಮನ್ ಗಿಲ್ ಇನ್: ಅಸಲಿ ಸತ್ಯ ಬಿಚ್ಚಿಟ್ಟ ರವಿಚಂದ್ರನ್ ಅಶ್ವಿನ್!