
ಬೆನೋನಿ: 19 ವರ್ಷದೊಳಗಿನವರ ಯೂತ್ ಏಕದಿನ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ಎ ವಿರುದ್ಧ ಭಾರತ ಕಳಪೆ ಆರಂಭ ಪಡೆದಿದ್ದ ಭಾರತ ಎ ತಂಡವು, ಆ ಬಳಿಕ ಚೇತರಿಸಿಕೊಂಡು ಬೃಹತ್ ಮೊತ್ತ ಕಲೆಹಾಕುವಲ್ಲಿ ಯಶಸ್ವಿಯಾಗಿದೆ.
ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಭಾರತ 19 ವರ್ಷದೊಳಗಿನವರ ತಂಡ, ನಿಗದಿತ 50 ಓವರ್ಗಳಲ್ಲಿ 300 ರನ್ ಕಲೆಹಾಕುವಲ್ಲಿ ಯಶಸ್ವಿಯಾಗಿದೆ. ಭಾರತ ಎ ತಂಡದ ಪರ ಹರ್ವಾನ್ಶ್ ಪಂಗಾಲಿಯಾ(93) ಹಾಗೂ ಆರ್ ಎಸ್ ಅಂಬ್ರಿಶ್(65) ಆಕರ್ಷಕ ಬ್ಯಾಟಿಂಗ್ ನಡೆಸುವ ಮೂಲಕ ತಂಡಕ್ಕೆ ಆಸರೆಯಾದರು.
ಟಾಸ್ ಸೋತು ಕ್ರೀಸ್ಗಿಳಿದ ಭಾರತ, ಎರಡನೇ ಓವರ್ನಲ್ಲೇ ಏಳು ಎಸೆತಗಳಲ್ಲಿ ಐದು ರನ್ ಗಳಿಸಿದ್ದ ಆರೋನ್ ಜಾರ್ಜ್ ವಿಕೆಟ್ ಕಳೆದುಕೊಂಡಿತು. ಏಳನೇ ಓವರ್ನ ಮೊದಲ ಎಸೆತದಲ್ಲಿ 12 ಎಸೆತಗಳಲ್ಲಿ 11 ರನ್ ಗಳಿಸಿದ್ದ ನಾಯಕ ವೈಭವ್ ಸೂರ್ಯವಂಶಿ ಕೂಡ ಔಟಾದಾಗ ಭಾರತ 34-2ಕ್ಕೆ ಕುಸಿಯಿತು. ಆದರೆ, ಮೂರನೇ ವಿಕೆಟ್ಗೆ ಜೊತೆಯಾದ ವೇದಾಂತ್ ತ್ರಿವೇದಿ ಮತ್ತು ಅಭಿಜ್ಞಾನ್ ಕುಂಡು ತಂಡವನ್ನು 50ರ ಗಡಿ ದಾಟಿಸಿದರು. 14ನೇ ಓವರ್ನಲ್ಲಿ ಸ್ಕೋರ್ 67 ಆಗಿದ್ದಾಗ ಅಭಿಜ್ಞಾನ್ ಕುಂಡು (21) ರನೌಟ್ ಆಗಿದ್ದು ಭಾರತಕ್ಕೆ ಹಿನ್ನಡೆಯಾಯಿತು.
ಇನ್ನುಳಿದಂತೆ ಮಧ್ಯಮ ಕ್ರಮಾಂಕದಲ್ಲಿ ಕನಿಷ್ಕ್ ಚೌಹ್ಹಾಣ್(32) ಹಾಗೂ ಖಿಲಾನ್ ಪಟೇಲ್(26) ಸ್ಪೋಟಕ ಬ್ಯಾಟಿಂಗ್ ನಡೆಸುವ ಮೂಲಕ ತಂಡ ಸವಾಲಿನ ಮೊತ್ತ ಕಲೆಹಾಕಲು ನೆರವಾದರು.
ಇತ್ತೀಚಿಗಿನ ದಿನಗಳಲ್ಲಿ ಸ್ಪೋಟಕ ಬ್ಯಾಟಿಂಗ್ ಮೂಲಕ ಭರ್ಜರಿ ಶತಕ ಸಿಡಿಸಿ ಗಮನ ಸೆಳೆಯುತ್ತಾ ಬಂದಿರುವ ವೈಭವ್ ಸೂರ್ಯವಂಶಿ ಇದೇ ಮೊದಲ ಬಾರಿಗೆ ನಾಯಕನಾಗಿ ತಂಡವನ್ನು ಮುನ್ನಡೆಸುತ್ತಿದ್ದಾರೆ. ಹೀಗಾಗಿ ಸೂರ್ಯವಂಶಿ ಮೇಲೆ ಸಾಕಷ್ಟು ನಿರೀಕ್ಷೆಗಳಿದ್ದವು. ಆದರೆ ವೈಭವ್ ಸೂರ್ಯವಂಶಿ ಕೇವಲ 11 ರನ್ ಗಳಿಸಿ ವಿಕೆಟ್ ಒಪ್ಪಿಸುವ ಮೂಲಕ ನಿರಾಸೆ ಮೂಡಿಸಿದರು.
ಆಯುಷ್ ಮಾತ್ರೆ ಬದಲಿಗೆ ಹದಿನಾಲ್ಕು ವರ್ಷದ ವೈಭವ್ ಸೂರ್ಯವಂಶಿಯನ್ನು ಭಾರತದ 19 ವರ್ಷದೊಳಗಿನವರ ತಂಡದ ನಾಯಕರನ್ನಾಗಿ ಮಾಡಲಾಗಿದೆ. ಆಯುಷ್ ಮಾತ್ರೆ ಹೊರತುಪಡಿಸಿ, 19 ವರ್ಷದೊಳಗಿನವರ ಏಷ್ಯಾಕಪ್ನಲ್ಲಿ ಆಡಿದ ಹೆಚ್ಚಿನ ಆಟಗಾರರು ದಕ್ಷಿಣ ಆಫ್ರಿಕಾ ವಿರುದ್ಧದ ಯೂತ್ ಏಕದಿನ ಪಂದ್ಯದಲ್ಲಿ ಆಡುತ್ತಿದ್ದಾರೆ.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗೂ ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.