
ಮ್ಯಾಂಚೆಸ್ಟರ್ (ಜು.04) ಅಭಿಮಾನಿಗಳ ಕೂಗು, ಮಾಜಿ ಕ್ರಿಕೆಟಿಗರ ಒತ್ತಡಗಳ ನಡುವೆ ಕೊನೆಗೂ ವೈಭವ್ ಸೂರ್ಯವಂಶಿ ಟೀಂ ಇಂಡಿಯಾ ಪದಾರ್ಪಣೆ ಮಾಡಿದ್ದಾರೆ. ಇಂಗ್ಲೆಂಡ್ ವಿರುದ್ಧದ 2ನೇ ಟಿ20 ಪಂದ್ಯದಲ್ಲಿ ವೈಭವ್ ಸೂರ್ಯವಂಶಿಗೆ ಅವಕಾಶ ನೀಡಲಾಗಿತ್ತು. ಆರಂಭಿಕನಾಗಿ ಕಣಕ್ಕಿಳಿದ ವೈಭವ್ ಸೂರ್ಯವಂಶಿ ಸಿಕ್ಸರ್ ಮೂಲಕ ಅಬ್ಬರಿಸಿ ತಮ್ಮ ಬ್ಯಾಟಿಂಗ್ ಅಬ್ಬರ ಅಂತಾರಾಷ್ಟ್ರೀಯ ಪಂದ್ಯದಲ್ಲೂ ಸಾಬೀತು ಪಡಿಸಿದ್ದರು. ಆದರೆ ವೈಭವ್ ಅಬ್ಬರ ಕೇವಲ 2 ಸಿಕ್ಸರ್ಗೆ ಸೀಮಿತವಾಯಿತು.
ವೈಭವ್ ಸೂರ್ಯವಂಶಿ ಜೋಫ್ರಾ ಆರ್ಚರ್ ಎಸೆತದಲ್ಲಿ ಸಿಕ್ಸರ್ ಸಿಡಿಸಿದರು. ಬಳಿಕ ಜೋಶ್ ಟಾಂಗ್ ಎಸೆತದಲ್ಲೂ ಎರಡನೇ ಸಿಕ್ಸರ್ ಸಿಡಿಸಿದರು. ಆದರೆ ವೈಭವ್ ಸೂರ್ಯವಂಶಿ ವಿಲ್ ಜ್ಯಾಕ್ಸ್ ಎಸೆತದಲ್ಲಿ ಔಟಾದರು. ವೈಭವ್ ಸೂರ್ಯವಂಶಿ 10 ಎಸೆತದಲ್ಲಿ 2 ಸಿಕ್ಸರ್ ಮೂಲಕ 14 ರನ್ ಸಿಡಿಸಿದರು.
ವೈಭವ್ ಸೂರ್ಯವಂಶಿ ಸ್ಫೋಟಕ ಆಟಗಾರ, ಆದರೆ ವಿಲ್ ಜ್ಯಾಕ್ಸ್ ಎಸೆತದಲ್ಲಿ ಸ್ಟಂಪ್ ಔಟ್ ಆಗುವ ಮೂಲಕ ನಿರಾಸೆ ಅನುಭವಿಸಿದರು. ಟೀಂ ಇಂಡಿಯಾ ಪರ ಮೊದಲ ಪಂದ್ಯದಲ್ಲೇ ಹಾಫ್ ಸೆಂಚುರಿ ಮೇಲೆ ಕಣ್ಣಿಟ್ಟಿದ್ದರು. ಹೀಗಾಗಿ ಪ್ರತಿ ಬಾಲ್ ಆ್ಯಟಾಕ್ ಮಾಡಲು ಹೋಗಿ ಸ್ಟಂಪ್ ಔಟ್ ಆಗಿದ್ದಾರೆ.
ಇತ್ತೀಚೆಗೆ ವೈಭವ್ ಸೂರ್ಯವಂಶಿ ಭಾರತ ಎ ತಂಡದ ಪರ ತ್ರಿಕೋರಣ ಸರಣಿ ಆಡಿದ್ದರು. ಆರಂಭಿಕ ಪಂದ್ಯಗಳಲ್ಲಿ ವೈಭವ್ ಸೂರ್ಯವಂಶಿ ನಿರೀಕ್ಷಿತ ಪ್ರದರ್ಶನ ನೀಡಲು ಸಾಧ್ಯವಾಗಲಿಲ್ಲ. ಆದರೆ ಟೂರ್ನಿ ರೋಚಕ ಘಟ್ಟ ತಲುಪುತ್ತಿದ್ದಂತೆ ವೈಭವ್ ಸೂರ್ಯವಂಶಿ ಅಬ್ಬರಕ್ಕೆ ಭಾರತ ತ್ರಿಕೋನ ಸರಣಿಯನ್ನು ಭಾರಿ ಅಂತರದಿಂದ ಗೆದ್ದುಕೊಂಡಿತ್ತು.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗೂ ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.