
ಕ್ಯಾನ್ಬೆರಾ(ಡಿ.02): ಭಾರತ-ಆಸ್ಟ್ರೇಲಿಯಾ ನಡುವಿನ ಮೂರನೇ ಹಾಗೂ ಕೊನೆಯ ಏಕದಿನ ಪಂದ್ಯದಲ್ಲಿ ಟಾಸ್ ಗೆದ್ದ ನಾಯಕ ವಿರಾಟ್ ಕೊಹ್ಲಿ ಬ್ಯಾಟಿಂಗ್ ಆಯ್ದುಕೊಂಡಿದ್ದು, ಮಹತ್ವದ ಬದಲಾವಣೆಯೊಂದಿಗೆ ತಂಡ ಕಣಕ್ಕಿಳಿದಿದೆ.
ಹೌದು, 3 ಪಂದ್ಯಗಳ ಸರಣಿಯ ಮೊದಲೆರಡು ಪಂದ್ಯಗಳನ್ನು ಸೋತು ಸರಣಿ ಕೈಚೆಲ್ಲಿರುವ ಟೀಂ ಇಂಡಿಯಾ ಕೊನೆಯ ಪಂದ್ಯದಲ್ಲಿ 4 ಬದಲಾವಣೆಯೊಂದಿಗೆ ಕಣಕ್ಕಿಳಿದಿದೆ. ಕೊನೆಯ ಏಕದಿನ ಪಂದ್ಯದಲ್ಲಿ ಶುಭ್ಮನ್ ಗಿಲ್, ಶಾರ್ದೂಲ್ ಠಾಕೂರ್. ಕುಲ್ದೀಪ್ ಯಾದವ್ ಕಮ್ಬ್ಯಾಕ್ ಮಾಡಿದ್ದು, ಟಿ ನಟರಾಜನ್ ಅಂತಾರಾಷ್ಟ್ರೀಯ ಕ್ರಿಕೆಟ್ಗೆ ಪಾದಾರ್ಪಣೆ ಮಾಡಿದ್ದಾರೆ.
ಇನ್ನು ಆಸ್ಟ್ರೇಲಿಯಾ ತಂಡದಲ್ಲಿಯೂ 2 ಬದಲಾವಣೆಗಳಾಗಿದ್ದು, ವಾರ್ನರ್ ಹಾಗೂ ಕಮಿನ್ಸ್ ಬದಲಿಗೆ ಕ್ಯಾಮರೋನ್ ಗ್ರೀನ್ ಹಾಗೂ ಆಸ್ಟನ್ ಅಗರ್ ತಂಡ ಕೂಡಿಕೊಂಡಿದ್ದಾರೆ. ಮಾರ್ನಸ್ ಲಬುಶೇನ್ ಆಸ್ಟ್ರೇಲಿಯಾ ಪರ ಫಿಂಚ್ ಜತೆಗೆ ಇನಿಂಗ್ಸ್ ಆರಂಭಿಸಲಿದ್ದಾರೆ.
ತಂಡಗಳು ಹೀಗಿವೆ:
ಆಸ್ಟ್ರೇಲಿಯಾ:
ಭಾರತ:
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗೂ ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.