
ಬೆಂಗಳೂರು(ಫೆ.26): ಭಾರತ ಹಾಗೂ ಆಸ್ಟ್ರೇಲಿಯಾ ನಡುವಿನ 2ನೇ ಟಿ20 ಪಂದ್ಯಕ್ಕೆ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣ ಆತಿಥ್ಯವಹಿಸಿದೆ. ನಾಳೆ(ಫೆ.27) ವಿರಾಟ್ ಕೊಹ್ಲಿ ನೇತೃತ್ವದ ಟೀಂ ಇಂಡಿಯಾ ಗೆಲುವಿಗಾಗಿ ಎಲ್ಲಾ ತಯಾರಿ ಮಾಡಿಕೊಂಡಿದೆ. ಇದೀಗ ಪಂದ್ಯ ವೀಕ್ಷಿಸಲು ಬರುವ ಅಭಿಮಾನಿಗಳಿಗಾಗಿ ಬೆಂಗಳೂರು ಮೆಟ್ರೋ ಸಂಚಾರ ಸಮಯ ವಿಸ್ತರಿಸಿದೆ.
ಇದನ್ನೂ ಓದಿ: ಭದ್ರತಾ ಸಿಬ್ಬಂದಿ ಹುಟ್ಟು ಹಬ್ಬ ಆಚರಿಸಿದ ವಿರಾಟ್ ಕೊಹ್ಲಿ!
ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಟಿ20 ಪಂದ್ಯದಿಂದ ಮೆಟ್ರೋ ಸಂಚಾರ ಟೈಂನ್ನು ಪ್ರಯಾಣಿಕರ ಅನೂಕೂಲಕ್ಕಾಗಿ ರಾತ್ರಿ 11.55 ವರೆಗೆ ವಿಸ್ತರಿಸಲಾಗಿದೆ ಎಂದು ಬಿಎಂಆರ್ಸಿಎಲ್ ಹೇಳಿದೆ. ಬೈಯಪ್ಪನ ಹಳ್ಳಿ ಮೆಟ್ರೋ ನಿಲ್ದಾಣದಿಂದ ಮೈಸೂರು ರಸ್ತೆ ಹಾಗೂ ಯಲಚೇನಹಳ್ಳಿಯಿಂದ ನಾಗಸಂದ್ರ ದವರೆಗೆ ಗ್ರೀನ್ ಲೈನ್ ಹಾಗೂ ಪರ್ಪಲ್ ಲೈನ್ ಸಂಚಾರ ವಿಸ್ತರಿಸಲಾಗಿದೆ.
ಇದನ್ನೂ ಓದಿ: ಇಂಡೋ-ಆಸಿಸ್ ಟಿ20: ಬೆಂಗಳೂರು ಪಂದ್ಯದಲ್ಲಿ ಭಾರತವೇ ಫೇವರಿಟ್!
ಪಂದ್ಯಾವಳಿ ಮುಗಿದ ನಂತರ ಪ್ರಯಾಣಿಕರು ತ್ವರಿತವಾಗಿ ಪ್ರಯಾಣಿಸಲು ಪೇಪರ್ ಟಿಕೆಟ್ ವಿತರಣೆ ಮಾಡಲಾಗುತ್ತಿದೆ. ನಾಳೆ(ಫೆ.27) ಮೂರುಗಂಟೆಯಿಂದ ಏಳು ಗಂಟೆಯವರೆಗೆ ಯಾವುದೇ ಮೆಟ್ರೋ ನಿಲ್ದಾಣಗಳಲ್ಲಿ ಪೇಪರ್ ಟಿಕೆಟ್ ಖರೀದಿಸ ಬಹುದು. ಪ್ರತಿ ಟಿಕೆಟ್ ದರ 50 ರೂಪಾಯಿ. ಈ ಟಿಕೆಟ್ ಪಂದ್ಯಾವಳಿ ಮುಗಿದ ನಂತರ ಮಾತ್ರ ಈ ಪೇಪರ್ ಟಿಕೆಟ್ ಬಳಸಬಹುದು ಎಂದು BMRCL ಹೇಳಿದೆ.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗೂ ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.