ಚೆನ್ನೈ ಟೆಸ್ಟ್‌: ಶತಕದತ್ತ ರೋಹಿತ್ ದಾಪುಗಾಲು

Suvarna News   | Asianet News
Published : Feb 13, 2021, 11:48 AM IST
ಚೆನ್ನೈ ಟೆಸ್ಟ್‌: ಶತಕದತ್ತ ರೋಹಿತ್ ದಾಪುಗಾಲು

ಸಾರಾಂಶ

ಟೀಂ ಇಂಡಿಯಾ ಎರಡನೇ ಟೆಸ್ಟ್‌ ಪಂದ್ಯದಲ್ಲಿ ಉತ್ತಮ ಆರಂಭ ಪಡೆಯುವತ್ತ ದಿಟ್ಟ ಹೆಜ್ಜೆಯಿಟ್ಟಿದ್ದು, ರೋಹಿತ್ ಶರ್ಮಾ ಶತಕದತ್ತ ಮುನ್ನುಗ್ಗುತ್ತಿದ್ದಾರೆ. ಈ ಕುರಿತಾದ ಒಂದು ರಿಪೋರ್ಟ್ ಇಲ್ಲಿದೆ ನೋಡಿ.

ಚೆನ್ನೈ(ಫೆ.13): ಹಿಟ್‌ಮ್ಯಾನ್‌ ಖ್ಯಾತಿಯ ರೋಹಿತ್ ಶರ್ಮಾ ಎರಡನೇ ಟೆಸ್ಟ್‌ ಪಂದ್ಯದಲ್ಲಿ ಲಯಕ್ಕೆ ಮರಳಿದ್ದು, ಸೀಮಿತ ಓವರ್‌ಗಳ ಕ್ರಿಕೆಟ್‌ನಂತೆ ಬ್ಯಾಟ್‌ ಬೀಸುತ್ತಿದ್ದಾರೆ. ಲಂಚ್‌ ಬ್ರೇಕ್‌ ವೇಳೆಗೆ ರೋಹಿತ್ ಶರ್ಮಾ 78 ಎಸೆತಗಳನ್ನು ಎದುರಿಸಿ ಅಜೇಯ 80 ರನ್ ಬಾರಿಸಿದ್ದು ಶತಕದತ್ತ ಮುನ್ನುಗ್ಗುತ್ತಿದ್ದಾರೆ. ಊಟದ ವಿರಾಮದ ವೇಳೆಗೆ ಟೀಂ ಇಂಡಿಯಾ 3 ವಿಕೆಟ್ ಕಳೆದುಕೊಂಡು 106 ರನ್‌ ಬಾರಿಸಿದೆ.

ಹೌದು, ಟಾಸ್ ಗೆದ್ದು ಬ್ಯಾಟಿಂಗ್ ಆಯ್ದುಕೊಂಡು ಟೀಂ ಇಂಡಿಯಾ ತನ್ನ ಖಾತೆ ತೆರೆಯುವಷ್ಟರಲ್ಲೇ ಶುಭ್‌ಮನ್‌ ಗಿಲ್‌ ವಿಕೆಟ್ ಕಳೆದುಕೊಂಡು ಆಘಾತಕ್ಕೆ ಒಳಗಾಯಿತು. ಬಳಿಕ ಎರಡನೇ ವಿಕೆಟ್‌ಗೆ ಜತೆಯಾದ ಟೆಸ್ಟ್ ಸ್ಪೆಷಲಿಸ್ಟ್ ಚೇತೇಶ್ವರ್ ಪೂಜಾರ ಜತೆ ಎಚ್ಚರಿಕೆಯ ಜತೆಯಾಟ ನಿಭಾಯಿಸಿದರು. ಈ ಜೋಡಿ ಎರಡನೇ ವಿಕೆಟ್‌ಗೆ 85 ರನ್‌ಗಳ ಜತೆಯಾಟವಾಡುವ ಮೂಲಕ ಆರಂಭಿಕ ಸಂಕಷ್ಟದಿಂದ ತಂಡವನ್ನು ಪಾರು ಮಾಡಿತು. 

ಅದರಲ್ಲೂ ಸೀಮಿತ ಓವರ್‌ಗಳ ಕ್ರಿಕೆಟ್‌ನಂತೆ ಬ್ಯಾಟ್‌ ಬೀಸಿದ ಹಿಟ್‌ಮ್ಯಾನ್‌ ಖ್ಯಾತಿಯ ರೋಹಿತ್ ಶರ್ಮಾ ಕೇವಲ 47 ಎಸೆತಗಳಲ್ಲಿ ವೃತ್ತಿಜೀವನದ 12ನೇ ಟೆಸ್ಟ್‌ ಅರ್ಧಶತಕ ಪೂರೈಸಿದರು. ಸದ್ಯ ರೋಹಿತ್‌ ಶರ್ಮಾ78 ಎಸೆತಗಳನ್ನು ಎದುರಿಸಿ 13 ಬೌಂಡರಿ ಹಾಗೂ 1 ಸಿಕ್ಸರ್ ನೆರವಿನಿಂದ 80 ರನ್ ಬಾರಿಸಿ ಅಜೇಯರಾಗುಳಿದಿದ್ದಾರೆ. ರೋಹಿತ್‌ಗೆ ಉತ್ತಮ ಸಾಥ್ ನೀಡಿದ ಪೂಜಾರ 58 ಎಸೆತಗಳನ್ನು ಎದುರಿಸಿ 21 ರನ್‌ ಬಾರಿಸಿದರು.

2ನೇ ಚೆನ್ನೈ ಟೆಸ್ಟ್‌: ಟಾಸ್ ಗೆದ್ದ ಟೀಂ ಇಂಡಿಯಾ ಬ್ಯಾಟಿಂಗ್ ಆಯ್ಕೆ

ಒಂದು ರನ್‌ ಅಂತರದಲ್ಲಿ 2 ವಿಕೆಟ್‌: ಆರಂಭಿಕ ಆಘಾತದ ಹೊರತಾಗಿಯೂ ಪೂಜಾರ ಹಾಗೂ ರೋಹಿತ್ ಉತ್ತಮ ಜತೆಯಾಟದ ಹೊರತಾಗಿಯೂ ಕೇವಲ 1 ರನ್‌ ಅಂತರದಲ್ಲಿ ಭಾರತ ಎರಡು ವಿಕೆಟ್‌ ಕಳೆದುಕೊಂಡು ಆಘಾತಕ್ಕೊಳಗಾಯಿತು. ಪೂಜಾರ ಅವರನ್ನು ಜಾಕ್ ಲೀಗ್ ಬಲಿ ಪಡೆದರೆ, ನಾಯಕ ವಿರಾಟ್ ಕೊಹ್ಲಿಯನ್ನು ಶೂನ್ಯಕ್ಕೆ ಪೆವಿಲಿಯನ್ ಸೇರುವಂತೆ ಮಾಡುವಲ್ಲಿ ಆರ್‌ಸಿಬಿ ಮಾಜಿ ಕ್ರಿಕೆಟಿಗ ಮೋಯಿನ್ ಅಲಿ ಯಶಸ್ವಿಯಾದರು.

PREV

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಸಂಕಷ್ಟ ನಿವಾರಣೆಗೆ ಸಿಂಹಾಚಲಂ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿದ ವಿರಾಟ್ ಕೊಹ್ಲಿ
ಕರ್ನಾಟಕ ರಾಜ್ಯ ಕ್ರಿಕೆಟ್‌ ಸಂಸ್ಥೆಗೆ ವೆಂಕಟೇಶ್ ಪ್ರಸಾದ್ ಅಧ್ಯಕ್ಷ, ಚುನಾವಣಾ ಫಲಿತಾಂಶ ಪ್ರಕಟ