
ನವದೆಹಲಿ: ಫೆ.15ರಂದು ಭಾರತ ವಿರುದ್ಧ ಶ್ರೀಲಂಕಾದ ಕೊಲಂಬೊದಲ್ಲಿ ನಿಗದಿಯಾಗಿರುವ ಟಿ20 ವಿಶ್ವಕಪ್ ಪಂದ್ಯವನ್ನು ಬಹಿಷ್ಕರಿಸುವುದಾಗಿ ಪಾಕಿಸ್ತಾನ ಘೋಷಿಸಿದ ಬೆನ್ನಲ್ಲೇ, ಇದರಿಂದಾಗುವ ಪರಿಣಾಮ ಹಾಗೂ ಆರ್ಥಿಕ ನಷ್ಟವನ್ನು ಅಂದಾಜಿಸಲಾಗುತ್ತಿದೆ. ವರದಿಗಳ ಪ್ರಕಾರ, ಭಾರತ-ಪಾಕ್ ಪಂದ್ಯ ನಡೆಯದಿದ್ದರೆ ಬರೋಬ್ಬರಿ ₹2200 ಕೋಟಿ ನಷ್ಟವಾಗಲಿದೆ ಎಂದು ತಿಳಿದುಬಂದಿದೆ.
ಈ ನಷ್ಟ ಐಸಿಸಿಗೆ ಮಾತ್ರವಲ್ಲದೆ ಪಾಕ್ ಕ್ರಿಕೆಟ್, ಬಿಸಿಸಿಐ, ಶ್ರೀಲಂಕಾ, ಟೂರ್ನಿಯ ಪ್ರಾಯೋಜಕರು, ಜಾಹೀರಾತುದಾರರಿಗೂ ಅನ್ವಯಿಸಲಿದೆ.
ಕ್ರಿಕೆಟ್ನಲ್ಲಿ ಪಂದ್ಯದ ಪ್ರಸಾರ ಹಕ್ಕು, ಜಾಹೀರಾತು, ಪ್ರಾಯೋಜಕತ್ವ, ಟಿಕೆಟ್ ಆದಾಯ ಮತ್ತು ಕಾನೂನುಬದ್ಧ ಬೆಟ್ಟಿಂಗ್(ಭಾರತದ ಹೊರಗಡೆ) ಸೇರಿ ಹಲವು ವಿಧದಲ್ಲಿ ಆದಾಯ ಸಿಗಲಿದೆ. ಒಂದು ವೇಳೆ ಭಾರತ-ಪಾಕ್ ಪಂದ್ಯ ರದ್ದಾದರೆ, ಬರೀ ಜಾಹೀರಾತು ಆದಾಯದಲ್ಲೇ 200ರಿಂದ 250 ಕೋಟಿ ರು. ನಷ್ಟ ಸಂಭವಿಸಬಹುದು ಎಂದು ಅಂದಾಜಿಸಲಾಗಿದೆ. ಈ ಪಂದ್ಯದ ವೇಳೆ ಪ್ರಸಾರವಾಗುವ ಪ್ರತಿ 10 ಸೆಕೆಂಡ್ಗಳ ಜಾಹೀರಾತಿಗೆ ಬ್ರಾಡ್ಕಾಸ್ಟರ್ಗಳು 25ರಿಂದ 40 ಲಕ್ಷ ರು. ಶುಲ್ಕ ವಿಧಿಸುತ್ತಾರೆ. ಅಲ್ಲದೆ, ಭಾರತ-ಪಾಕ್ ದೇಶಗಳ ಕ್ರಿಕೆಟ್ ಮಂಡಳಿಗಳು ನೇರ ಮತ್ತು ಪರೋಕ್ಷ ಆದಾಯದಲ್ಲಿ ತಲಾ ₹200 ಕೋಟಿ ಹಣವನ್ನು ತಕ್ಷಣವೇ ಕಳೆದುಕೊಳ್ಳಲಿದೆ.
ಪಂದ್ಯ ರದ್ದಾದರೆ ಪ್ರಾಯೋಜಕರು, ಪ್ರಸಾರಕರಿಗೆ ಐಸಿಸಿ ನಷ್ಟ ಪರಿಹಾರ ನೀಡಬೇಕಾಗುತ್ತದೆ. ಟಿಕೆಟ್ ಮಾರಾಟದ ಮೂಲಕ ಬರಬೇಕಿದ್ದ ಹಣ ಕೈತಪ್ಪಲಿದೆ. ಪಂದ್ಯ ಆಯೋಜನೆ ಹೊಣೆ ಹೊತ್ತಿದ್ದ ಲಂಕಾ ಕ್ರಿಕೆಟ್ ಮಂಡಳಿ ಐಸಿಸಿ ಬಳಿ ಪರಿಹಾರ ಕೇಳಬಹುದು. ಮತ್ತೊಂದೆಡೆ ಐಸಿಸಿ ಸದಸ್ಯ ದೇಶಗಳಿಗೂ ಇದರ ಪರಿಣಾಮ ತಟ್ಟಲಿದೆ. ವಾರ್ಷಿಕ ಆದಾಯದಲ್ಲಿ ಕಡಿತಗೊಳ್ಳಲಿದ್ದು, ಈ ಆದಾಯವನ್ನೇ ನಂಬಿಕೊಂಡಿರುವ ವಿಂಡೀಸ್, ಸ್ಕಾಟ್ಲೆಂಡ್, ಜಿಂಬಾಬ್ವೆ, ನಮೀಬಿಯಾ, ಆಫ್ಘನ್ ಸೇರಿದಂತೆ ಹಲವು ಮಂಡಳಿಗಳೂ ನಷ್ಟ ಅನುಭವಿಸಲಿದೆ.
ಫೆಬ್ರವರಿ 07: ಪಾಕಿಸ್ತಾನ-ನೆದರ್ಲೆಂಡ್ಸ್
ಫೆಬ್ರವರಿ 10: ಪಾಕಿಸ್ತಾನ - ಯುಎಸ್ಎ
ಫೆಬ್ರವರಿ 15: ಪಾಕಿಸ್ತಾನ- ಭಾರತ
ಫೆಬ್ರವರಿ 18: ಪಾಕಿಸ್ತಾನ- ನಮೀಬಿಯಾ
ಸಲ್ಮಾನ್ ಅಲಿ ಆಘಾ (ನಾಯಕ), ಬಾಬರ್ ಅಜಂ, ಶಾಹೀನ್ ಶಾ ಆಫ್ರಿದಿ, ಫಖರ್ ಜಮಾನ್, ಶಾದಾಬ್ ಖಾನ್, ನಸೀಮ್ ಶಾ, ಅಬ್ರಾರ್ ಅಹ್ಮದ್, ಫಹೀಮ್ ಅಶ್ರಫ್, ಖವಾಜಾ ಮೊಹಮ್ಮದ್ ನಫಯ್ (ವಿಕೆಟ್ ಕೀಪರ್), ಮೊಹಮ್ಮದ್ ನವಾಜ್, ಮೊಹಮ್ಮದ್ ಸಲ್ಮಾನ್ ಮಿರ್ಜಾ, ಸಾಹಿಬ್ಜಾದಾ ಫರ್ಹಾನ್, ಸೈಮ್ ಅಯೂಬ್, ಉಸ್ಮಾನ್ ಖಾನ್, ಉಸ್ಮಾನ್ ತಾರಿಖ್.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗೂ ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.