ಮಳೆಯದ್ದೇ ದರ್ಬಾರ್, ಒಂದು ಎಸೆತವೂ ಕಾಣದೇ ಇಂಡೋ-ಆಫ್ರಿಕಾ ಮೊದಲ ಪಂದ್ಯ ರದ್ದು..!

Suvarna News   | Asianet News
Published : Mar 12, 2020, 06:30 PM ISTUpdated : Mar 12, 2020, 06:35 PM IST
ಮಳೆಯದ್ದೇ ದರ್ಬಾರ್, ಒಂದು ಎಸೆತವೂ ಕಾಣದೇ ಇಂಡೋ-ಆಫ್ರಿಕಾ ಮೊದಲ ಪಂದ್ಯ ರದ್ದು..!

ಸಾರಾಂಶ

ಇಂಡೋ-ಆಫ್ರಿಕಾ ಮೊದಲ ಏಕದಿನ ಪಂದ್ಯ ಮಳೆಯಿಂದ ರದ್ದಾಗಿದೆ. ಇದೀಗ ಉಳಿದೆರಡು ಪಂದ್ಯಗಳು ಸಾಕಷ್ಟು ಕುತೂಹಲ ಕೆರಳಿಸಿವೆ. ಈ ಕುರಿತಾದ ವಿವರ ಇಲ್ಲಿದೆ ನೋಡಿ.

ಧರ್ಮಶಾಲಾ(ಮಾ.12): ಭಾರತ-ದಕ್ಷಿಣ ಆಫ್ರಿಕಾ ನಡುವಿನ ಮೂರು ಪಂದ್ಯಗಳ ಏಕದಿನ ಸರಣಿಯ ಮೊದಲ ಪಂದ್ಯ ಮಳೆಗೆ ಆಹುತಿಯಾಗಿದೆ. ಧರ್ಮಶಾಲಾದ ಹಿಮಾಚಲ ಪ್ರದೇಶ ಕ್ರಿಕೆಟ್ ಸಂಸ್ಥೆ ಮೈದಾನದಲ್ಲಿ ನಡೆಯಬೇಕಿದ್ದ ಪಂದ್ಯ ವರುಣನ ಅವಕೃಪೆಗೆ ಒಳಗಾಯಿತು. 

ಇಂಡೋ-ಆಫ್ರಿಕಾ ಮೊದಲ ಪಂದ್ಯ ನಡಿಯೋದು ಡೌಟ್..!

ಬುಧವಾರ ಮೈದಾನದಲ್ಲಿ ನಿರಂತರವಾಗಿ ಮಳೆ ಸುರಿದಿತ್ತು. ಇನ್ನು ಪಂದ್ಯದ ದಿನವಾದ ಇಂದು ಕೆಲಕಾಲ ಮಳೆ ನಿಂತಿತ್ತು. ಟೀಂ ಇಂಡಿಯಾ ಆಟಗಾರರು ಮೈದಾನದಲ್ಲೇ ಕೆಲಕಾಲ ಅಭ್ಯಾಸ ನಡೆಸಿದರು. ಆದರೆ ಮಧ್ಯಾಹ್ನದ ವೇಳೆಗೆ ಜಿಟಿಜಿಟಿ ಮಳೆ ಆರಂಭವಾಯಿತು. ಅಂಪೈರ್‌ಗಳ ಮೂರ್ನಾಲ್ಕು ಬಾರಿ ಮೈದಾನಕ್ಕೆ ತೆರಳಿ ಪರಿಶೀಲನೆ ನಡೆಸಿದರು. ಕೊನೆಯದಾಗಿ 6.30ರಿಂದ ಪಂದ್ಯ ಆರಂಭಿಸಲು ಕಟ್ ಆಫ್ ಸಮಯ ನಿಗದಿಪಡಿಸಿದರು. ಆದರೆ ಬಿಟ್ಟು ಬಿಡದೇ ಮಳೆ ಸುರಿದಿದ್ದರಿಂದ ಪಂದ್ಯ ರದ್ದು ಮಾಡುವ ತೀರ್ಮಾನವನ್ನು ಕೈಗೊಳ್ಳಲಾಯಿತು.

INDvsSA ಏಕದಿನ ಪಂದ್ಯಕ್ಕೆ ಮಳೆ ಅಡ್ಡಿ: ಪಂದ್ಯ ನಡೆಯುತ್ತಾ? ಗೊಂದಲಕ್ಕೆ ಇಲ್ಲಿದೆ ಉತ್ತರ!

ಇದೀಗ ಉಭಯ ತಂಡಗಳು ಎರಡನೇ ಪಂದ್ಯವನ್ನಾಡಲು ಲಖನೌಗೆ ತೆರಳಲಿವೆ. ಎರಡನೇ ಪಂದ್ಯವು ಮಾರ್ಚ್ 15ರಂದು ಭಾರತರತ್ನ ಅಟಲ್ ಬಿಹಾರಿ ವಾಜಪೇಯಿ ಮೈದಾನದಲ್ಲಿ ಜರುಗಲಿದೆ. ಇನ್ನು ಮೂರನೇ ಹಾಗೂ ಸರಣಿಯ ಕೊನೆಯ ಪಂದ್ಯವು ಮಾರ್ಚ್ 18ರಂದು ಕೋಲ್ಕತಾದ ಈಡನ್ ಗಾರ್ಡನ್ ಮೈದಾನದಲ್ಲಿ ನಡೆಯಲಿದೆ.

ಶಿಖರ್ ಧವನ್, ಭುವನೇಶ್ವರ್ ಕುಮಾರ್ ಹಾಗೂ ಹಾರ್ದಿಕ್ ಪಾಂಡ್ಯ ತಂಡ ಕೂಡಿಕೊಂಡಿದ್ದಾರೆ. ಇನ್ನು ಐಸಿಸಿ ಏಕದಿನ ವಿಶ್ವಕಪ್ ಬಳಿಕ ಫಾಫ್ ಡು ಪ್ಲೆಸಿಸ್ ಇದೇ ಮೊದಲ ಬಾರಿಗೆ ಏಕದಿನ ತಂಡ ಕೂಡಿಕೊಂಡಿದ್ದಾರೆ. ಹೀಗಾಗಿ ಈ ಆಟಗಾರರು ಯಾವ ರೀತಿಯ ಪ್ರದರ್ಶನ ನೀಡುತ್ತಾರೆ ಎನ್ನುವುದು ಸದ್ಯದ ಕುತೂಹಲವಾಗಿದೆ. 

PREV

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಸಂಕಷ್ಟ ನಿವಾರಣೆಗೆ ಸಿಂಹಾಚಲಂ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿದ ವಿರಾಟ್ ಕೊಹ್ಲಿ
ಕರ್ನಾಟಕ ರಾಜ್ಯ ಕ್ರಿಕೆಟ್‌ ಸಂಸ್ಥೆಗೆ ವೆಂಕಟೇಶ್ ಪ್ರಸಾದ್ ಅಧ್ಯಕ್ಷ, ಚುನಾವಣಾ ಫಲಿತಾಂಶ ಪ್ರಕಟ