ಇಂಡೋ-ಆಫ್ರಿಕಾ ಮೊದಲ ಪಂದ್ಯ ನಡಿಯೋದು ಡೌಟ್..!

Suvarna News   | Asianet News
Published : Mar 12, 2020, 12:48 PM IST
ಇಂಡೋ-ಆಫ್ರಿಕಾ ಮೊದಲ ಪಂದ್ಯ ನಡಿಯೋದು ಡೌಟ್..!

ಸಾರಾಂಶ

ಭಾರತ-ದಕ್ಷಿಣ ಆಫ್ರಿಕಾ ನಡುವಿನ ಮೊದಲ ಏಕದಿನ ಪಂದ್ಯ ನಡೆಯುವುದು ಬಹುತೇಕ ಅನುಮಾನ ಎನ್ನುವಂತಹ ಸ್ಥಿತಿ ನಿರ್ಮಾಣವಾಗಿದೆ. ಯಾಕೆ ಹೀಗೆ ಎನ್ನುವ ನಿಮ್ಮ ಕುತೂಹಲಕ್ಕೆ ಇಲ್ಲಿದೆ ನೋಡಿ.

ಧರ್ಮಶಾಲಾ(ಮಾ.12): ಕೊರೋನಾ ವೈರಸ್ ಭೀತಿಯ ನಡುವೆಯೂ ಭಾರತ-ದಕ್ಷಿಣ ಆಫ್ರಿಕಾ ನಡುವಿನ ಮೊದಲ ಪಂದ್ಯಕ್ಕೆ ಕ್ಷಣಗಣನೆ ಆರಂಭವಾಗಿದೆ.  ಹೀಗಿರುವಾಗಲೇ ಮೊದಲ ಏಕದಿನ ನಡೆಯುವುದು ಅನುಮಾನ ಎನಿಸಿದೆ.

ಹೌದು, ಧರ್ಮಶಾಲಾದಲ್ಲಿ ನಡೆಯಲಿರುವ ಮೊದಲ ಪಂದ್ಯಕ್ಕೆ ವರುಣರಾಯ ಅಡ್ಡಿ ಪಡಿಸುವ ಸಾಧ್ಯತೆಯಿದೆ. ಕಳೆದ ವರ್ಷ ಇಲ್ಲಿ ನಡೆಯಬೇಕಿದ್ದ ಭಾರತ-ದ.ಆಫ್ರಿಕಾ ನಡುವಿನ ಟಿ20 ಪಂದ್ಯ ಮಳೆಯಿಂದಾಗಿ ರದ್ದಾಗಿತ್ತು. ಈ ಬಾರಿಯೂ ಪಂದ್ಯಕ್ಕೆ ಮಳೆ ಅಡ್ಡಿಪಡಿಸುವ ಸಾಧ್ಯತೆ ಇದೆ. ಬುಧವಾರ ಮಳೆಯಿಂದಾಗಿ ಪಿಚ್‌ ಹಾಗೂ ಔಟ್‌ಫೀಲ್ಡ್‌ಗೆ ಹೊದಿಕೆ ಹೊದಿಸಲಾಗಿತ್ತು. ಗುರುವಾರ ಇಡೀ ದಿನ ಗುಡುಗು ಸಹಿತ ಭಾರೀ ಮಳೆ ಮುನ್ಸೂಚನೆ ಇದೆ. ಹೀಗಾಗಿ ಪಂದ್ಯ ನಡೆಯುವುದು ಅನುಮಾನವೆನಿಸಿದೆ.

ಧರ್ಮಶಾಲಾದಲ್ಲಿಂದು ಇಂಡೋ-ಆಫ್ರಿಕಾ ಮೊದಲ ಒನ್ ಡೇ ಮ್ಯಾಚ್

ಮಳೆ ಅಡ್ಡಿಪಡಿಸದಂತೆ ನಾಗ ದೇವರಿಗೆ ಮೊರೆ!

ಗುರುವಾರದ ಏಕದಿನ ಪಂದ್ಯಕ್ಕೆ ಮಳೆ ಅಡ್ಡಿಪಡಿಸದಂತೆ ಹಿಮಾಚಲ ಪ್ರದೇಶ ಕ್ರಿಕೆಟ್‌ ಸಂಸ್ಥೆ ಅಧಿಕಾರಿಗಳು ನಾಗ ದೇವರಿಗೆ ಪ್ರಾರ್ಥನೆ ಸಲ್ಲಿಸಿದ್ದಾರೆ. ಇಲ್ಲಿನ ಸ್ಥಳೀಯ ದೇವರಾದ ಇಂದ್ರು ನಾಗ ದೇವಸ್ಥಾನದಲ್ಲಿ ಅಧಿಕಾರಿಗಳು ಪ್ರಾರ್ಥನೆ ಸಲ್ಲಿಸಿರುವುದಾಗಿ ಹಿಮಾಚಲ ಕ್ರಿಕೆಟ್‌ ಸಂಸ್ಥೆ ಕಾರ‍್ಯದರ್ಶಿ ಸುಮಿತ್‌ ಶರ್ಮಾ ಮಾಧ್ಯಮಗಳಿಗೆ ತಿಳಿಸಿದ್ದಾರೆ.

ಕೊರೋನಾ ಭೀತಿ: ಬೌಲರ್‌ಗಳಿಗೆ ಸವಾಲು!

ಕೊರೋನಾ ಸೋಂಕಿನ ಭೀತಿಯಿಂದಾಗಿ ಚೆಂಡಿನ ಹೊಳಪು ಕಾಪಾಡುವುದು ಬೌಲರ್‌ಗಳಿಗೆ ದೊಡ್ಡ ಸವಾಲಾಗಿ ಪರಿಣಮಿಸಲಿದೆ ಎಂದು ಭಾರತ ತಂಡದ ವೇಗಿ ಭುವನೇಶ್ವರ್‌ ಕುಮಾರ್‌ ಬುಧವಾರ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು. ಸೋಂಕು ಹರಡದಿರಲು ಮುನ್ನೆಚ್ಚರಿಕಾ ಕ್ರಮವಾಗಿ, ಚೆಂಡಿನ ಮೇಲೆ ಉಗುಳು ಬಳಸುವುದನ್ನು ಸಾಧ್ಯವಾದಷ್ಟುಕಡಿಮೆ ಮಾಡುವುದಾಗಿ ಹೇಳಿದರು.

PREV

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಏನಿದು ಬಜಾಜ್ ಚೇತಕ್ C25 ವಿಶೇಷತೆ? WPL ಗೆದ್ದ ಆರ್‌ಸಿಬಿ ಗರ್ಲ್ಸ್‌ಗೆ ಸೇರಿದ ಲೇಟೆಸ್ಟ್ ಎಲೆಕ್ಟ್ರಿಕ್ ರೈಡ್ ಸೆನ್ಸೇಷನ್‌!
ರಣಜಿ ಟ್ರೋಫಿ: ಮುಂಬೈ ತಂಡವನ್ನು ಅವರದ್ದೇ ನೆಲದಲ್ಲಿ ಬಗ್ಗುಬಡಿದು ಸೆಮಿಫೈನಲ್‌ಗೆ ಎಂಟ್ರಿ ಕೊಟ್ಟ ಕರ್ನಾಟಕ! ಕೆ.ಎಲ್ ಭರ್ಜರಿ ಶತಕ