
ಗುವಾಹಟಿ[ಜ.05]: ಭಾರತ-ಶ್ರೀಲಂಕಾ ನಡುವಿನ ಮೊದಲ ಟಿ20 ಪಂದ್ಯದಲ್ಲಿ ಟಾಸ್ ಗೆದ್ದ ಭಾರತ ಫೀಲ್ಡಿಂಗ್ ಆಯ್ದುಕೊಂಡಿದೆ. ಮೂರು ಪಂದ್ಯಗಳ ಟಿ20 ಸರಣಿಯ ಮೊದಲ ಪಂದ್ಯಕ್ಕೆ ಗುವಾಹಟಿಯ ಬರ್ಸಾಪುರ ಮೈದಾನ ಆತಿಥ್ಯ ವಹಿಸಿದೆ.
ಟೀಂ ಇಂಡಿಯಾ ಆಡುತ್ತಿರುವ ವರ್ಷದ ಮೊದಲ ಪಂದ್ಯ ಇದಾಗಿದ್ದು, ಜಸ್ಪ್ರೀತ್ ಬುಮ್ರಾ, ಶಿಖರ್ ಧವನ್ ಕಮ್’ಬ್ಯಾಕ್ ಮಾಡಿದ್ದಾರೆ. ಸಂಜು ಸ್ಯಾಮ್ಸನ್, ಮನೀಶ್ ಪಾಂಡೆ, ಚಹಲ್, ಜಡೇಜಾ ಅವರಿಗೆ ತಂಡದಲ್ಲಿ ಅವಕಾಶ ನೀಡಿಲ್ಲ. ಇನ್ನುಳಿದಂತೆ ವಿರಾಟ್ ಕೊಹ್ಲಿ ತಂಡವನ್ನು ಮುನ್ನಡೆಸಲಿದ್ದು, ಧವನ್-ರಾಹುಲ್ ಆರಂಭಿಕರಾಗಿ ಕಣಕ್ಕಿಳಿಯಲಿದ್ದಾರೆ. ಶ್ರೇಯಸ್ ಅಯ್ಯರ್, ಪಂತ್, ಶಿವಂ ದುಬೆ,ವಾಷಿಂಗ್ಟನ್ ಸುಂದರ್ ಆ ಬಳಿಕ ಕ್ರೀಸ್ಗಿಳಿಯಲಿದ್ದಾರೆ. ವೇಗಿಗಳಾಗಿ ಜಸ್ಪ್ರೀತ್ ಬುಮ್ರಾ, ಶಾರ್ದೂಲ್ ಠಾಕೂರ್ ನವದೀಪ್ ಸೈನಿ ವೇಗದ ಬೌಲರ್ಗಳಾಗಿ ಕಣಕ್ಕಿಳಿಯಲಿದ್ದಾರೆ. ಇನ್ನು ತಜ್ಞ ಸ್ಪಿನ್ನರ್ ಆಗಿ ಕುಲ್ದೀಪ್ ಯಾದವ್ ಕಾಣಿಸಿಕೊಳ್ಳಲಿದ್ದಾರೆ.
ಇನ್ನು ಲಂಕಾ ತಂಡವನ್ನು ಲಸಿತ್ ಮಾಲಿಂಗ ಮುನ್ನಡೆಸುತ್ತಿದ್ದು ಮೂವರು ವೇಗಿಗಳು ಹಾಗೂ ಇಬ್ಬರು ಸ್ಪಿನ್ನರ್ಗಳೊಂದಿಗೆ ಕಣಕ್ಕಿಳಿಸಿದೆ.
ತಂಡಗಳು ಹೀಗಿವೆ:
ಭಾರತ:
ಶ್ರೀಲಂಕಾ:
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗೂ ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.