ಗಾಲೆಯಲ್ಲಿ ಲಂಕಾ ದಹನ; ಮಾನವ್ ಸ್ಪಿನ್ ಮೋಡಿಗೆ ಶ್ರೀಲಂಕಾ ಧೂಳೀಪಟ, ಗೆದ್ದು ಬೀಗಿದ ಭಾರತ

Published : Aug 19, 2026, 01:41 PM IST
Manav Suthar

ಸಾರಾಂಶ

ಗಾಲೆ ಟೆಸ್ಟ್‌ನಲ್ಲಿ ಭಾರತ ತಂಡವು ಶ್ರೀಲಂಕಾ ವಿರುದ್ಧ 165 ರನ್‌ಗಳ ಭರ್ಜರಿ ಜಯ ಸಾಧಿಸಿದೆ. ಯುವ ಸ್ಪಿನ್ನರ್ ಮಾನವ್ ಸುತಾರ್ ಎರಡನೇ ಇನ್ನಿಂಗ್ಸ್‌ನಲ್ಲಿ 6 ವಿಕೆಟ್ ಪಡೆದು ಗೆಲುವಿನ ರೂವಾರಿಯಾದರು. ಈ ಗೆಲುವಿನೊಂದಿಗೆ ಭಾರತ ಎರಡು ಪಂದ್ಯಗಳ ಸರಣಿಯಲ್ಲಿ 1-0 ಮುನ್ನಡೆ ಕಾಯ್ದುಕೊಂಡಿದೆ.

ಗಾಲೆ: ಪ್ರತಿಭಾನ್ವಿತ ಯುವ ಸ್ಪಿನ್ನರ್ ಮಾನವ್ ಸುತಾರ್ ಮಾರಕ ದಾಳಿಗೆ ತತ್ತರಿಸಿದ ಶ್ರೀಲಂಕಾ ತಂಡವು ಎರಡನೇ ಇನ್ನಿಂಗ್ಸ್‌ನಲ್ಲಿ ಕೇವಲ 206 ರನ್‌ಗಳಿಗೆ ಸರ್ವಪತನ ಕಂಡಿದೆ. ಈ ಮೂಲಕ ಮೊದಲ ಟೆಸ್ಟ್‌ನಲ್ಲಿ ಟೀಂ ಇಂಡಿಯಾ 165 ರನ್‌ಗಳ ಭರ್ಜರಿ ಜಯ ಸಾಧಿಸಿದೆ. ಇದರೊಂದಿಗೆ ಎರಡು ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ಶುಭ್‌ಮನ್ ಗಿಲ್ ನೇತೃತ್ವದ ಭಾರತ ತಂಡವು 1-0 ಅಂತರದ ಮುನ್ನಡೆ ಸಾಧಿಸಿದೆ. ಮಾನವ್ ಸುತಾರ್ 6 ವಿಕೆಟ್ ಕಬಳಿಸಿ ಟೀಂ ಇಂಡಿಯಾ ಗೆಲುವಿನಲ್ಲಿ ಪ್ರಮುಖ ಪಾತ್ರ ವಹಿಸಿದರು.

ಗೆಲ್ಲಲು 372 ರನ್‌ಗಳ ಕಠಿಣ ಗುರಿ ಬೆನ್ನತ್ತಿದ ಶ್ರೀಲಂಕಾ ತಂಡವು ನಾಲ್ಕನೇ ದಿನದಾಟದಂತ್ಯದ ವೇಳೆಗೆ 4 ವಿಕೆಟ್ ಕಳೆದುಕೊಂಡು 84 ರನ್ ಗಳಿಸಿತ್ತು. ಹೀಗಾಗಿ ಕೊನೆಯ ದಿನ ಲಂಕಾ ಗೆಲ್ಲಲು 84 ರನ್ ಹಾಗೂ ಭಾರತ ಗೆಲ್ಲಲು ಆರು ವಿಕೆಟ್‌ಗಳ ಅಗತ್ಯವಿತ್ತು. ಇನ್ನು ಐದನೇ ದಿನದಾಟದಲ್ಲಿ ಧನಂಜಯ ಡಿ ಸಿಲ್ವಾ ಹಾಗೂ ಸೋನಾಲ್ ದಿನುಶಾ 95 ರನ್‌ಗಳ ಜತೆಯಾಟವಾಡುವ ಮೂಲಕ ಪ್ರತಿರೋಧ ತೋರಿದರು. ನಾಯಕ ಧನಂಜಯ ಡಿ ಸಿಲ್ವಾ 59 ರನ್ ಸಿಡಿಸಿ ರವೀಂದ್ರ ಜಡೇಜಾಗೆ ವಿಕೆಟ್ ಒಪ್ಪಿಸಿದರು. ಈ ವಿಕೆಟ್ ಪತನವಾಗುತ್ತಿದ್ದಂತೆಯೇ ಲಂಕಾ ನಾಟಕೀಯ ಕುಸಿತ ಕಂಡಿತು. ಇನ್ನು ಸೋನಾಲ್ ದಿನುಶಾ 84 ರನ್ ಸಿಡಿಸಿ ಮಾನವ್ ಸುತಾರಾಗೆ ವಿಕೆಟ್ ಒಪ್ಪಿಸಿದರು.

ಆರು ವಿಕೆಟ್ ಕಬಳಿಸಿ ಮಿಂಚಿದ ಮಾನವ್ ಸುತಾರ:

ಮೂರನೇ ಟೆಸ್ಟ್‌ ಪಂದ್ಯವನ್ನಾಡುತ್ತಿರುವ ಮಾನವ್ ಸುತಾರಾ ಎರಡನೇ ಇನ್ನಿಂಗ್ಸ್‌ನಲ್ಲಿ ಮಿಂಚಿನ ದಾಳಿ ನಡೆಸುವ ಮೂಲಕ ಲಂಕಾದ ಪ್ರಮುಖ ಆರು ವಿಕೆಟ್ ಕಬಳಿಸಿ ಭಾರತ ಚಾಂಪಿಯನ್ ಆಗುವಲ್ಲಿ ಪ್ರಮುಖ ಪಾತ್ರವಹಿಸಿದರು. ಮಾನವ್ 23.4 ಓವರ್‌ಗಳಲ್ಲಿ ಕೇವಲ 55 ರನ್ ನೀಡಿ 6 ವಿಕೆಟ್ ತಮ್ಮ ಬುಟ್ಟಿಗೆ ಹಾಕಿಕೊಂಡರು. ಇದಕ್ಕೂ ಮೊದಲು ಲಂಕಾ ಎದುರಿನ ಮೊದಲ ಇನ್ನಿಂಗ್ಸ್‌ನಲ್ಲಿ ಮಾನವ್ 4 ವಿಕೆಟ್ ಕಬಳಿಸಿದ್ದರು.

ಎರಡನೇ ಟೆಸ್ಟ್‌ ಆಗಸ್ಟ್‌ 23ರಿಂದ ಆರಂಭ

ಮೊದಲ ಟೆಸ್ಟ್ ಪಂದ್ಯವನ್ನು ಗೆದ್ದು ಆತ್ಮವಿಶ್ವಾಸದಿಂದ ಬೀಗುತ್ತಿರುವ ಟೀಂ ಇಂಡಿಯಾ, ಇದೀಗ ಆಗಸ್ಟ್ 23ರಿಂದ ಆರಂಭವಾಗಲಿರುವ ಕೊಲಂಬೊ ಟೆಸ್ಟ್ ಪಂದ್ಯಕ್ಕೆ ಸಜ್ಜಾಗಬೇಕಿದೆ. ಮೊದಲ ಟೆಸ್ಟ್ ಗೆದ್ದು 12 ಅಂಕಗಳನ್ನು ಬುಟ್ಟಿಗೆ ಹಾಕಿಕೊಂಡಿರುವ ಭಾರತ, ವಿಶ್ವಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್‌ಗೇರುವ ನಿಟ್ಟಿನಲ್ಲಿ ಎರಡನೇ ಪಂದ್ಯವನ್ನು ಗೆಲ್ಲಲು ಎದುರು ನೋಡುತ್ತಿದೆ.

PREV

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

4ನೇ ದಿನದಾಟದಲ್ಲಿ ತಾನು ಮಾಡಿದ ತಪ್ಪನ್ನು ಐದನೇ ದಿನದಾಟದಲ್ಲಿ ತಿದ್ದಿಕೊಂಡ ಜಡೇಜಾ! ಕೊನೆಗೂ ತಣ್ಣಗಾದ ಗೌತಮ್ ಗಂಭೀರ್ ಕೋಪ
ಗಾಲೆ ಟೆಸ್ಟ್‌: ಶುಭ್‌ಮನ್ ಗಿಲ್ ದಾಖಲೆ ನುಚ್ಚುನೂರು, WTC ಯಲ್ಲಿ ಯಾವ ಭಾರತೀಯನೂ ಮಾಡಿರದ ಅಪರೂಪದ ದಾಖಲೆ ನಿರ್ಮಿಸಿದ ರಿಷಭ್ ಪಂತ್!