
ವಿಶಾಖಪಟ್ಟಣಂ[ಡಿ.18]: ಭಾರತ-ವೆಸ್ಟ್ ಇಂಡೀಸ್ ನಡುವಿನ ಎರಡನೇ ಏಕದಿನ ಪಂದ್ಯದಲ್ಲಿ ಟಾಸ್ ಗೆದ್ದ ವೆಸ್ಟ್ ಇಂಡೀಸ್ ಫೀಲ್ಡಿಂಗ್ ಆಯ್ದುಕೊಂಡಿದೆ. ವಿಂಡೀಸ್ ಈಗಾಗಲೇ ಮೂರು ಪಂದ್ಯಗಳ ಸರಣಿಯಲ್ಲಿ 1-0 ಮುನ್ನಡೆ ಸಾಧಿಸಿದೆ.
ಚೆನ್ನೈನಲ್ಲಿ ನಡೆದ ಮೊದಲ ಏಕದಿನ ಪಂದ್ಯದಲ್ಲಿ ವಿಂಡೀಸ್ 8 ವಿಕೆಟ್’ಗಳ ಭರ್ಜರಿ ಜಯ ದಾಖಲಿಸಿತ್ತು. ವೆಸ್ಟ್ ಇಂಡೀಸ್ ತಂಡದಲ್ಲಿ 2 ಬದಲಾವಣೆ ಮಾಡಲಾಗಿದ್ದು, ಎವಿನ್ ಲೆವಿಸ್ ಮತ್ತು ಖಾರೆ ಪಿರ್ರೆ ತಂಡ ಕೂಡಿಕೊಂಡಿದ್ದಾರೆ. ಇನ್ನು ಟೀಂ ಇಂಡಿಯಾದಲ್ಲಿ ಒಂದು ಬದಲಾವಣೆ ಮಾಡಲಾಗಿದ್ದು, ಶಿವಂ ದುಬೆಗೆ ವಿಶ್ರಾಂತಿ ನೀಡಲಾಗಿದ್ದು, ಶಾರ್ದೂಲ್ ಠಾಕೂರ್ ಅವಕಾಶ ನೀಡಲಾಗಿದೆ.
ಸರಣಿ ಉಳಿಸಿಕೊಳ್ಳುವ ಒತ್ತಡದಲ್ಲಿ ಟೀಂ ಇಂಡಿಯಾ
ಈ ಪಂದ್ಯವನ್ನು ಗೆಲ್ಲುವುದರ ಮೂಲಕ ವಿಂಡೀಸ್ ಪಾಳಯ ಸರಣಿ ಗೆಲುವಿನ ಲೆಕ್ಕಾಚಾರದಲ್ಲಿದ್ದರೆ, ವಿರಾಟ್ ಪಡೆ ವಿಶಾಖಪಟ್ಟಣಂದಲ್ಲಿ ಗೆದ್ದು ಸರಣಿ ಜೀವಂತವಾಗಿರಿಸಿಕೊಳ್ಳಲು ಎದುರು ನೋಡುತ್ತಿದೆ.
ತಂಡಗಳು ಹೀಗಿವೆ:
ಭಾರತ:
ವೆಸ್ಟ್ ಇಂಡೀಸ್
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗೂ ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.