
ಚೆನ್ನೈ(ಡಿ.13): ವೆಸ್ಟ್ಇಂಡೀಸ್ ವಿರುದ್ಧ ಟಿ20 ಸರಣಿಯನ್ನು 2-1ರ ಅಂತರದಲ್ಲಿ ಗೆದ್ದ ಭಾರತ ತಂಡ, ಏಕದಿನ ಸರಣಿ ಮೇಲೆ ಕಣ್ಣಿಟ್ಟಿದೆ. ಡಿ.15ರಂದು ನಡೆಯಲಿರುವ ಮೊದಲ ಪಂದ್ಯವನ್ನಾಡಲು ಗುರುವಾರ ಟೀಂ ಇಂಡಿಯಾ ಚೆನ್ನೈಗೆ ಬಂದಿಳಿದೆ. ಭಾನುವಾರ ಇಲ್ಲಿನ ಚಿದಂಬರಂ ಕ್ರೀಡಾಂಗಣದಲ್ಲಿ ಪಂದ್ಯ ನಡೆಯಲಿದೆ.
ಇದನ್ನೂ ಓದಿ: ಐಸಿಸಿ ಟಿ20 ರ್ಯಾಂಕಿಂಗ್ನಲ್ಲಿ ವಿರಾಟ್ ಕೊಹ್ಲಿಗೆ ಬಡ್ತಿ!.
ವಿಂಡೀಸ್ ತಂಡ ಸಹ ಚೆನ್ನೈ ತಲುಪಿದ್ದು, ಶುಕ್ರವಾರದಿಂದ ಅಭ್ಯಾಸ ಆರಂಭಿಸಲಿದೆ. ಜ.18ರಂದು ವಿಶಾಖಪಟ್ಟಣಂನಲ್ಲಿ 2ನೇ ಏಕದಿನ ಪಂದ್ಯ ನಡೆಯಲಿದ್ದು, ಡಿ.22ರಂದು ಕಟಕ್ನಲ್ಲಿ 3ನೇ ಪಂದ್ಯ ನಡೆಯಲಿದೆ.
ಇದನ್ನೂ ಓದಿ: ಬ್ಯಾಟಿಂಗ್ ಗಮನ ಹರಿಸಲು ಹೇಳಿದ್ರೆ, ಊರ್ವಶಿ ಜೊತೆ ಡೇಟಿಂಗ್ ಮಾಡಿದ್ರಾ ಪಂತ್?
ವಿಂಡೀಸ್ ವಿರುದ್ದದ 3 ಟಿ20 ಸರಣಿಯಲ್ಲಿ ಭಾರತ 2-1 ಅಂತರದಲ್ಲಿ ಸರಣಿ ಗೆದ್ದಿತ್ತು. ಮೊದಲ ಪಂದ್ಯದಲ್ಲಿ ಭಾರತ 6 ವಿಕೆಟ್ ಗೆಲುವು ಸಾಧಿಸಿದರೆ, ಎರಡನೇ ಪಂದ್ಯದಲ್ಲಿ ವೆಸ್ಟ್ ಇಂಡೀಸ್ 8 ವಿಕೆಟ್ ಗೆಲುವು ಸಾಧಿಸಿ ತಿರುಗೇಟು ನೀಡಿತು. ಅಂತಿಮ ಪಂದ್ಯದಲ್ಲಿ ಭಾರತ 67 ರನ್ ಗೆಲುವು ಸಾಧಿಸೋ ಮೂಲಕ 2-1 ಅಂತರದಲ್ಲಿ ಗೆಲುವು ಸಾಧಿಸಿತು.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗೂ ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.