
ಮುಂಬೈ[ನ.25]: ಭಾರತ ಹಾಗೂ ವೆಸ್ಟ್ ಇಂಡೀಸ್ ನಡುವಿನ ಮೊದಲ ಹಾಗೂ 3ನೇ ಟಿ20 ಪಂದ್ಯಗಳ ಸ್ಥಳ ಅದಲು ಬದಲು ಮಾಡಲಾಗಿದೆ. ಡಿ.6ರ ಮುಂಬೈ ಟಿ20 ಪಂದ್ಯವನ್ನು ಹೈದರಾಬಾದ್ ಹಾಗೂ ಡಿ.11ರ ಹೈದರಾಬಾದ್ ಟಿ20ಯನ್ನು ಮುಂಬೈಗೆ ಸ್ಥಳಾಂತರಿಸಲಾಗಿದೆ.
’ನೀವೆಲ್ಲ ಸಂಜು ಬ್ಯಾಟಿಂಗ್ ಪರೀಕ್ಷಿಸುತ್ತಿದ್ದಿರೋ ಇಲ್ಲಾ ಹೃದಯವನ್ನೋ..?’
ಹೌದು, ಡಿ.6 ಬಾಬ್ರಿ ಮಸೀದಿ ಉರುಳಿಸಿದ ದಿನವಾಗಿದ್ದು, ಮುಂಬೈ ಪೊಲೀಸರು ಹೈ ಅಲರ್ಟ್ ಘೋಷಿಸಿದ್ದಾರೆ. ಅಲ್ಲದೆ ಸಂವಿಧಾನ ಶಿಲ್ಪಿ ಬಿ.ಆರ್ ಅಂಬೇಡ್ಕರ್ ಪುಣ್ಯತಿಥಿಯಾಗಿದ್ದು, ದಾದರ್ನಲ್ಲಿ ಲಕ್ಷಗಟ್ಟಲೆ ಜನ ಚೈತನ್ಯಭೂಮಿಗೆ ಭೇಟಿ ನೀಡಲಿದ್ದಾರೆ. ಸರಣಿಯ ದ್ವಿತೀಯ ಟಿ20 ಪಂದ್ಯ ಯಾವುದೇ ಬದಲಾವಣೆ ಇಲ್ಲದೆ ಡಿ.8ರಂದು ತಿರುವನಂತಪುರಂನಲ್ಲಿ ನಡೆಯಲಿದೆ.
INDvWI; 2ನೇ ಟಿ20 ಪಂದ್ಯಕ್ಕೆ ಬಹಿಷ್ಕಾರ, ಬೇಡಿಕೆ ಈಡೇರಿಸಲು ಫ್ಯಾನ್ಸ್ ಪಟ್ಟು!
ವೆಸ್ಟ್ ಇಂಡೀಸ್ ವಿರುದ್ಧದ ಸೀಮಿತ ಓವರ್’ಗಳ ಸರಣಿಗೆ ಭಾರತ ತಂಡವನ್ನು ಪ್ರಕಟಿಸಲಾಗಿದ್ದು, ಭುವನೇಶ್ವರ್ ಕುಮಾರ್ ತಂಡ ಕೂಡಿಕೊಂಡಿದ್ದಾರೆ. ಕೇದಾರ್ ಜಾದವ್’ಗೂ ಅವಕಾಶ ಕಲ್ಪಿಸಲಾಗಿದ್ದು, ಸಂಜು ಸ್ಯಾಮ್ಸನ್ ಅವರನ್ನು ತಂಡದಿಂದ ಕೈಬಿಟ್ಟಿದ್ದು ವ್ಯಾಪಕ ಟೀಕೆಗೆ ಗುರಿಯಾಗಿದೆ.
ವಿಂಡೀಸ್ ಸರಣಿಗೆ ಭಾರತ ತಂಡ ಪ್ರಕಟ; ಇಬ್ಬರು ಕನ್ನಡಿಗರಿಗೆ ಚಾನ್ಸ್!
ಇತ್ತೀಚೆಗಷ್ಟೇ 5 ನ್ಯಾಯಮೂರ್ತಿಗಳನ್ನೊಳಗೊಂಡ ಸುಪ್ರೀಂ ಕೋರ್ಟ್ ನ್ಯಾಯಪೀಠ ಅಯೋಧ್ಯ ತೀರ್ಪು ಪ್ರಕಟಿಸಿತ್ತು. ಅಯೋಧ್ಯ ರಾಮ ಜನ್ಮ ಭೂಮಿಯ ಸಂಪೂರ್ಣ ಹಕ್ಕನ್ನು ರಾಮ್’ಲಲ್ಲಾಗೆ ನೀಡಿತ್ತು. ಇನ್ನು ಸುನ್ನಿ ವಕ್ಫ್ ಬೋರ್ಡ್’ಗೆ ಅಯೋಧ್ಯೆಯ ಬೇರೊಂದು ಜಾಗದಲ್ಲಿ ಮಸೀದಿ ನಿರ್ಮಿಸಲು ಕೇಂದ್ರ ಹಾಗೂ ಉತ್ತರ ಪ್ರದೇಶ ರಾಜ್ಯ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಆದೇಶಿಸಿದ್ದನ್ನು ಸ್ಮರಿಸಬಹುದಾಗಿದೆ.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗೂ ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.