
ಪೋರ್ಟ್ ಆಫ್ ಸ್ಪೇನ್(ಆ.05): ಭಾರತ ಹಾಗೂ ವೆಸ್ಟ್ ಇಂಡೀಸ್ ನಡುವಿನ 5 ಪಂದ್ಯಗಳ ಟಿ20 ಸರಣಿಯಲ್ಲಿ ಭಾರತದ ಯುವ ಪಡೆ ಕಣಕ್ಕಿಳಿದಿದೆ. ಹಾರ್ದಿಕ್ ಪಾಂಡ್ಯ ನೇತೃತ್ವದ ಟೀಂ ಇಂಡಿಯಾ, ಮೊದಲ ಪಂದ್ಯದಲ್ಲೇ 4 ರನ್ಗಳ ವಿರೋಚಿತ ಸೋಲು ಅನುಭವಿಸಿದೆ. ಈ ಸೋಲಿನ ಹೊರತಾಗಿಯೂ ಟೀಂ ಇಂಡಿಯಾ ಪಾಲಿಗೆ ಒಂದು ಹೊಸ ಅಸ್ತ್ರ ಸಿಕ್ಕಿದೆ. ವೆಸ್ಟ್ ಇಂಡೀಸ್ ಎದುರಿನ ಮೊದಲ ಟಿ20 ಪಂದ್ಯದಲ್ಲಿ ಪ್ರತಿಭಾನ್ವಿತ ಯುವ ಬ್ಯಾಟರ್ ತಿಲಕ್ ವರ್ಮಾ ಭಾರತ ಕ್ರಿಕೆಟ್ ತಂಡಕ್ಕೆ ಪಾದಾರ್ಪಣೆ ಮಾಡಿದ್ದಾರೆ. ತಾವಾಡಿದ ಮೊದಲ ಪಂದ್ಯದಲ್ಲೇ ಮೈಚಳಿ ಬಿಟ್ಟು ಬ್ಯಾಟ್ ಬೀಸುವ ಮೂಲಕ ತಾವೆಷ್ಟು ಅಪಾಯಕಾರಿ ಬ್ಯಾಟರ್ ಆಗಬಲ್ಲೇ ಎನ್ನುವ ಸುಳಿವನ್ನು ಬಿಚ್ಚಿಟ್ಟಿದ್ದಾರೆ.
ಈಗಾಗಲೇ ಕಳೆದ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯಲ್ಲಿ ಮುಂಬೈ ಇಂಡಿಯನ್ಸ್ ಪರ ತಮ್ಮದೇ ಆದ ಛಾಪು ಮೂಡಿಸಿರುವ ತಿಲಕ್ ವರ್ಮಾ, ದೇಶಿ ಕ್ರಿಕೆಟ್ನಲ್ಲೂ ವಿಸ್ಪೋಟಕ ಬ್ಯಾಟಿಂಗ್ ಮೂಲಕ ಗಮನ ಸೆಳೆದಿದ್ದಾರೆ. ಅಂತಾರಾಷ್ಟ್ರೀಯ ಪಾದಾರ್ಪಣೆ ಪಂದ್ಯದಲ್ಲಿ ತಾವೆದುರಿಸಿದ ಎರಡನೇ ಎಸೆತದಲ್ಲೇ ಮಾರಕ ವೇಗಿ ಅಲ್ಜಾರಿ ಜೋಸೆಫ್ ಬೌಲಿಂಗ್ನಲ್ಲಿ ನೇರವಾಗಿ ಡೀಪ್ ಸ್ಕ್ವೇರ್ ಲೆಗ್ನತ್ತ ಚೆಂಡನ್ನು ಸಿಕ್ಸರ್ಗಟ್ಟಿದ್ದರು. ಇದಾದ ಮರು ಎಸೆತದಲ್ಲೇ ತಿಲಕ್ ವರ್ಮಾ, ಡೀಪ್ ಮಿಡ್ ವಿಕೆಟ್ನತ್ತ ಸಿಕ್ಸರ್ ಬಾರಿಸಿ ಅಬ್ಬರಿಸಿದ್ದರು.
ಅನಗತ್ಯ ರೆಸ್ಟ್ನಿಂದ ಇನ್ಫಾರ್ಮ್ ಕೊಹ್ಲಿಯ ರಿದಮ್ಗೆ ಬ್ರೇಕ್..?
ತಿಲಕ್ ವರ್ಮಾ ಅವರ ಬ್ಯಾಟಿಂಗ್ ಶೈಲಿಯನ್ನು ವಿಶ್ಲೇಷಿಸಿದ, ಚೊಚ್ಚಲ ಟಿ20 ವಿಶ್ವಕಪ್ ಹೀರೋ ಆರ್ ಪಿ ಸಿಂಗ್, "ಈತ ಟೀಂ ಇಂಡಿಯಾದ ಭವಿಷ್ಯದ ಸೂಪರ್ ಸ್ಟಾರ್" ಎಂದು ವರ್ಣಿಸಿದ್ದಾರೆ. "ಇದೊಂದು ನಿಜಕ್ಕೂ ಅತ್ಯದ್ಭುತ ಇನಿಂಗ್ಸ್ ಆಗಿತ್ತು. ಭಾರತ ಕ್ರಿಕೆಟ್ ತಂಡದ ಭವಿಷ್ಯ ಈತನ ಬಳಿಯಿದೆ ಎಂದು ನನಗನಿಸುತ್ತಿದೆ. ನಾವೆಲ್ಲರೂ ಮಧ್ಯಮ ಕ್ರಮಾಂಕದ ಎಡಗೈ ಬ್ಯಾಟರ್ಗಳನ್ನು ಎದುರು ನೋಡುತ್ತಿದ್ದೆವು. ಈಗ ತಿಲಕ್ ವರ್ಮಾ, ಆ ಕೊರತೆ ನೀಗಿಸುವ ಭರವಸೆ ಮೂಡಿಸಿದ್ದಾರೆ. ಅವರು ಸಿಕ್ಸರ್ ಮೂಲಕವೇ ತಮ್ಮ ರನ್ ಖಾತೆ ತೆರೆದರು ಹಾಗೂ ಮರು ಎಸೆತದಲ್ಲಿ ಮತ್ತೊಂದು ಸಿಕ್ಸರ್ ಚಚ್ಚಿದರು. ಇನ್ನು ಅವರು ಬಾರಿಸಿದ ಮೂರನೇ ಸಿಕ್ಸರ್ ನನಗೆ ಮತ್ತಷ್ಟು ಖುಷಿ ಕೊಟ್ಟಿತು. ಎಕ್ಸ್ಟ್ರಾ ಕವರ್ ಭಾಗದಲ್ಲಿ ಸಿಕ್ಸರ್ ಬಾರಿಸುವುದು ಸುಲಭದ ಮಾತಲ್ಲ" ಎಂದು ಆರ್ ಪಿ ಸಿಂಗ್ ಅಭಿಪ್ರಾಯಪಟ್ಟಿದ್ದಾರೆ.
ಪ್ರೀತಿ ಬಲೆಯಲ್ಲಿ National Crush ಸ್ಮೃತಿ ಮಂಧನಾ..! ಆ ಲಕ್ಕಿ ಹುಡುಗ ಯಾರು ಗೊತ್ತಾ?
ವೆಸ್ಟ್ ಇಂಡೀಸ್ ಎದುರಿನ ಮೊದಲ ಟಿ20 ಪಂದ್ಯದಲ್ಲಿ ತಿಲಕ್ ವರ್ಮಾ ಕೇವಲ 22 ಎಸೆತಗಳನ್ನು ಎದುರಿಸಿ ಚುರುಕಿನ 39 ರನ್ ಸಿಡಿಸಿದ್ದರು. ಇದರ ಹೊರತಾಗಿಯೂ ನಿರಂತರವಾಗಿ ವಿಕೆಟ್ ಕಳೆದುಕೊಂಡ ಪರಿಣಾಮ ಟೀಂ ಇಂಡಿಯಾ 4 ರನ್ ಅಂತರದಲ್ಲಿ ವೆಸ್ಟ್ ಇಂಡೀಸ್ಗೆ ಶರಣಾಯಿತು. ಭಾರತಕ್ಕೆ 30 ಎಸೆತದಲ್ಲಿ ಗೆಲ್ಲಲು ಕೇವಲ 37 ರನ್ ಬೇಕಿತ್ತು. ಆದರೆ 16ನೇ ಓವರ್ ಪಂದ್ಯದ ಗತಿ ಬದಲಿಸಿತು. ಹಾರ್ದಿಕ್ ಹಾಗೂ ಸ್ಯಾಮ್ಸನ್ ಇಬ್ಬರೂ ಔಟಾದರು. ಇದು ತಂಡದ ಸೋಲಿಗೆ ಪ್ರಮುಖ ಕಾರಣವೆನಿಸಿತು.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗೂ ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.