ಸರಣಿ ಶ್ರೇಷ್ಠ ಟ್ರೋಫಿಯನ್ನು ನಟರಾಜನ್‌ಗೆ ಕೊಟ್ಟ ಹಾರ್ದಿಕ್ ಪಾಂಡ್ಯ..!

Suvarna News   | Asianet News
Published : Dec 09, 2020, 09:48 AM ISTUpdated : Dec 09, 2020, 09:54 AM IST
ಸರಣಿ ಶ್ರೇಷ್ಠ ಟ್ರೋಫಿಯನ್ನು ನಟರಾಜನ್‌ಗೆ ಕೊಟ್ಟ ಹಾರ್ದಿಕ್ ಪಾಂಡ್ಯ..!

ಸಾರಾಂಶ

ಆಸ್ಟ್ರೇಲಿಯಾ ವಿರುದ್ದ ಸೀಮಿತ ಓವರ್‌ಗಳ ಸರಣಿಯಲ್ಲಿ ಉತ್ತಮ ಪ್ರದರ್ಶನ ತೋರಿದ್ದಕ್ಕಾಗಿ ತಮಗೆ ಒಲಿದು ಬಂದ ಪಂದ್ಯಶ್ರೇಷ್ಠ ಪ್ರಶಸ್ತಿಯನ್ನು ಹಾರ್ದಿಕ್ ಪಾಂಡ್ಯ, ಎರಡಗೈ ವೇಗಿ ಟಿ. ನಟರಾಜನ್ ಅವರಿಗೆ ನೀಡಿದ್ದಾರೆ. ಈ ಕುರಿತಾದ ಒಂದು ರಿಪೋರ್ಟ್ ಇಲ್ಲಿದೆ ನೋಡಿ

ಸಿಡ್ನಿ(ಡಿ.09): ಅಂತಾರಾಷ್ಟ್ರೀಯ ಕ್ರಿಕೆಟ್‌ನ ಪಾದಾರ್ಪಣೆಯ ಸರಣಿಯಲ್ಲೇ ಅಮೋಘ ಪ್ರದರ್ಶನ ತೋರಿದ ಟಿ. ನಟರಾಜನ್‌ ಅವರಿಗೆ ಹಾರ್ಡ್‌ ಹಿಟ್ಟರ್ ಹಾರ್ದಿಕ್ ಪಾಂಡ್ಯ ತಮಗೆ ಸಿಕ್ಕಿದ್ದ ಸರಣಿ ಶ್ರೇಷ್ಠ ಟ್ರೋಫಿಯನ್ನು ಎಡಗೈ ವೇಗಿಗೆ ನೀಡುವ ಮೂಲಕ ಕ್ರಿಕೆಟ್‌ ಅಭಿಮಾನಿಗಳ ಹೃದಯ ಗೆದ್ದಿದ್ದಾರೆ.

ಸ್ಫೋಟಕ ಬ್ಯಾಟಿಂಗ್‌ ಹಾಗೂ ಕೆಲ ಅದ್ಭುತ ಕ್ಯಾಚ್‌ಗಳನ್ನು ಹಿಡಿದ ಹಾರ್ದಿಕ್‌ ಪಾಂಡ್ಯಗೆ ಸರಣಿ ಶ್ರೇಷ್ಠ ಪ್ರಶಸ್ತಿ ಒಲಿಯಿತು. ಆದರೆ ಹಾರ್ದಿಕ್‌ ಟ್ರೋಫಿಯನ್ನು ಸರಣಿಯಲ್ಲಿ ಆಕರ್ಷಕ ಎಕಾನಮಿ ರೇಟ್‌ನಲ್ಲಿ 6 ವಿಕೆಟ್‌ ಕಿತ್ತ ವೇಗಿ ಟಿ.ನಟರಾಜನ್‌ಗೆ ಹಸ್ತಾಂತರಿಸಿದರು. ಪಾಂಡ್ಯ ನಡೆಗೆ ಸಾಮಾಜಿಕ ತಾಣಗಳಲ್ಲಿ ಭಾರೀ ಮೆಚ್ಚುಗೆ ವ್ಯಕ್ತವಾಯಿತು.

ಟಿ. ನಟರಾಜನ್ ಹಾಗೂ ಟೀಂ ಇಂಡಿಯಾ ಟಿ20 ಸರಣಿ ಗೆದ್ದ 2 ಫೋಟೋಗಳನ್ನು ಸಾಮಾಜಿಕ ಜಾಲತಾಣವಾದ ಟ್ವಿಟರ್‌ನಲ್ಲಿ ಹಂಚಿಕೊಂಡಿರುವ ಆಲ್ರೌಂಡರ್ ಹಾರ್ದಿಕ್ ಪಾಂಡ್ಯ, ನಟರಾಜನ್ ನೀವು ಸರಣಿಯಲ್ಲಿ ಅತ್ಯದ್ಭುತ ಪ್ರದರ್ಶನ ತೋರಿದ್ದೀರ. ಕ್ಷಿಷ್ಟಕರ ಸಂದರ್ಭದಲ್ಲಿ ನೀವು ತೋರಿದ ಪ್ರದರ್ಶನ ನಿಮ್ಮ ಸಾಮರ್ಥ್ಯ ಹಾಗೂ ಪರಿಶ್ರಮ ಎಷ್ಟಿದೆ ಎಂದು ತೋರಿಸುತ್ತದೆ. ಸರಣಿ ಶ್ರೇಷ್ಠ ಪ್ರಶಸ್ತಿಗೆ ನೀವು ಅರ್ಹ. ಟಿ20 ಸರಣಿ ಜಯಿಸಿದ ಟೀಂ ಇಂಡಿಯಾಗೆ ಅಭಿನಂದನೆಗಳು ಎಂದು ಟ್ವೀಟ್ ಮಾಡಿದ್ದಾರೆ.

INDvAUS 3ನೇ ಟಿ20: ತಾಂತ್ರಿಕ ಕಾರಣದಿಂದ ಭಾರತಕ್ಕೆ ಆಯ್ತಾ ಹಿನ್ನೆಡೆ? ಕೊಹ್ಲಿ ಅಸಮಾಧಾನ!

13ನೇ ಆವೃತ್ತಿಯ ಐಪಿಎಲ್‌ ಟೂರ್ನಿಯಲ್ಲಿ ಅತ್ಯದ್ಭುತ ಪ್ರದರ್ಶನ ತೋರಿ ಟೀಂ ಇಂಡಿಯಾಗೆ ಲಗ್ಗೆಯಿಟ್ಟ ಟಿ. ನಟರಾಜನ್ ಇದೀಗ ಆಸ್ಟ್ರೇಲಿಯಾ ವಿರುದ್ದದ ಸೀಮಿತ ಓವರ್‌ಗಳ ಸರಣಿ ಮುಗಿಯುವಷ್ಟರಲ್ಲೇ ಎಲ್ಲರ ಮನೆಮಾತಾಗಿದ್ದಾರೆ. ಏಕದಿನ ಸರಣಿಯ ಕೊನೆಯ ಪಂದ್ಯದಲ್ಲಿ ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ಪಾದಾರ್ಪಣೆ ಮಾಡಿದ್ದ ನಟರಾಜನ್ 2 ವಿಕೆಟ್ ಕಬಳಿಸಿದ್ದರು. ಇನ್ನು ಟಿ20 ಸರಣಿಯಲ್ಲಿ 3 ಪಂದ್ಯಗಳನ್ನಾಡಿ 6 ವಿಕೆಟ್ ಕಬಳಿಸಿ ಮಿಂಚಿದ್ದಾರೆ. ಮೂರು ಪಂದ್ಯಗಳ ಟಿ20 ಸರಣಿಯಲ್ಲಿ ಟೀಂ ಇಂಡಿಯಾ 2-1 ಅಂತರದಲ್ಲಿ ಗೆಲುವು ದಾಖಲಿಸುವ ಮೂಲಕ ಟಿ20 ಸರಣಿಯನ್ನು ಕೈವಶ ಮಾಡಿಕೊಂಡಿದೆ.
 

PREV

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಆರ್‌ಸಿಬಿ ಕಾಲ್ತುಳಿತದ ದುರ್ಘಟನೆ ಬಳಿಕ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಡಿ.24ಕ್ಕೆ ಮೊದಲ ಕ್ರಿಕೆಟ್‌ ಪಂದ್ಯ? ಕೊಹ್ಲಿ ಭಾಗಿ
ಮುಂಬೈಗೆ ಬಂದಿಳಿದ ವಿರುಷ್ಕಾ ದಂಪತಿ; ಮೆಸ್ಸಿಯನ್ನು ಭೇಟಿಯಾಗ್ತಾರಾ ವಿರಾಟ್ ಕೊಹ್ಲಿ?