ಪೊಲೀಸ್ ಠಾಣೆ ಮೆಟ್ಟಿಲೇರಿದ ಕ್ರಿಕೆಟಿಗ ಕೆ ಸಿ ಕಾರಿಯಪ್ಪ ಲವ್‌ಸ್ಟೋರಿ; ಮಾಜಿ ಪ್ರೇಯಸಿಯಿಂದ ಗಂಭೀರ ಆರೋಪ

Published : Dec 25, 2023, 02:54 PM IST
ಪೊಲೀಸ್ ಠಾಣೆ ಮೆಟ್ಟಿಲೇರಿದ ಕ್ರಿಕೆಟಿಗ ಕೆ ಸಿ ಕಾರಿಯಪ್ಪ ಲವ್‌ಸ್ಟೋರಿ; ಮಾಜಿ ಪ್ರೇಯಸಿಯಿಂದ ಗಂಭೀರ ಆರೋಪ

ಸಾರಾಂಶ

ಕಾರಿಯಪ್ಪ ನನ್ನ ಪೋಷಕರ ಬಳಿ ಬಂದು ನನ್ನನ್ನು ಮದುವೆಯಾಗ್ತೇನೆ ಅಂತ ಹೇಳಿದ್ರು. ನನ್ನ ಪೋಷಕರ ಜತೆ ಮಾತನಾಡುವಾಗ ಮದುವೆಯನ್ನು ನೀವೇ ಮಾಡಿಕೊಡಬೇಕು ಎಂದು ಹೇಳಿದ್ರು. ಮನೆ ಬಳಿಯೇ ತಮಗೆ ಫ್ಲಾಟ್ ಮಾಡಬೇಕು ಎಂದು ಅವರು ಬೇಡಿಕೆ ಇಟ್ಟಿದ್ದರು ಎಂದು ಕಾರಿಯಪ್ಪ ಮಾಜಿ ಪ್ರಿಯತಮೆ ಆರೋಪಿಸಿದ್ದಾರೆ.

ಬೆಂಗಳೂರು(ಡಿ.25): ಕರ್ನಾಟಕದ ಪ್ರತಿಭಾನ್ವಿತ ಕ್ರಿಕೆಟಿಗ ಕೆ ಸಿ ಕಾರಿಯಪ್ಪ ಅವರ ಮೇಲೆ ಪ್ರೀತಿಸಿ ವಂಚಿಸಿದ ಆರೋಪ ಕೇಳಿ ಬಂದಿದೆ. ಈ ಕುರಿತಂತೆ ಬೆಂಗಳೂರಿನ ಎರಡು ಪೊಲೀಸ್ ಠಾಣೆಯಲ್ಲಿ ಕೆ ಸಿ ಕಾರಿಯಪ್ಪ ಹಾಗೂ ಅವರ ಮಾಜಿ ಪ್ರಿಯತಮೆ ಪ್ರತ್ಯೇಕ ದೂರು ದಾಖಲಿಸಿದ್ದಾರೆ. 

ಮದುವೆಯಾಗುವುದಾಗಿ ಲೈಂಗಿಕವಾಗಿ ಬಳಸಿಕೊಂಡು, ಈಗ ಮೋಸ ಮಾಡಿದ್ದಾರೆ ಎಂದು ಕಾರಿಯಪ್ಪ ಅವರ ಮಾಜಿ ಪ್ರಿಯತಮೆ ಆರ್‌ ಟಿ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಮುಷ್ತಾಕ್ ಅಲಿ ಟೂರ್ನಿಯ ವೇಳೆ ಅವರು ನನ್ನನ್ನು ಹೆಂಡತಿ ಎಂದು ಹೇಳಿ ನನ್ನನ್ನು ಕರೆದುಕೊಂಡು ಹೋಗಿದ್ದರು. ಆದರೆ ರಾಜಸ್ಥಾನ ಕ್ಯಾಂಪ್‌ಗೆ ಹೋದಾಗಿನಿಂದ ನನ್ನನ್ನು ಅವೈಡ್ ಮಾಡಲಾರಂಭಿಸಿದರು. ನಾನು ಪ್ರಶ್ನೆ ಮಾಡಿದಾಗ ಸ್ವಲ್ಪ ಬ್ಯುಸಿ ಇದ್ದೇನೆ ಎಂದು ಹೇಳಿದರು ಎಂದು ಮಾಜಿ ಪ್ರಿಯತಮೆ ಆರೋಪಿಸಿದ್ದಾರೆ.

ಕಾರಿಯಪ್ಪ ನನ್ನ ಪೋಷಕರ ಬಳಿ ಬಂದು ನನ್ನನ್ನು ಮದುವೆಯಾಗ್ತೇನೆ ಅಂತ ಹೇಳಿದ್ರು. ನನ್ನ ಪೋಷಕರ ಜತೆ ಮಾತನಾಡುವಾಗ ಮದುವೆಯನ್ನು ನೀವೇ ಮಾಡಿಕೊಡಬೇಕು ಎಂದು ಹೇಳಿದ್ರು. ಮನೆ ಬಳಿಯೇ ತಮಗೆ ಫ್ಲಾಟ್ ಮಾಡಬೇಕು ಎಂದು ಅವರು ಬೇಡಿಕೆ ಇಟ್ಟಿದ್ದರು ಎಂದು ಕಾರಿಯಪ್ಪ ಮಾಜಿ ಪ್ರಿಯತಮೆ ಆರೋಪಿಸಿದ್ದಾರೆ.

ನಾನು ಸ್ನೇಹಿತರ ಜತೆಗೆ ಎಲ್ಲಿಗಾದರೂ ಹೋದರೆ ಅದನ್ನು ಪ್ರಶ್ನೆ ಮಾಡುತ್ತಿದ್ದರು. ಅವರು ಮಾನಸಿಕವಾಗಿ ನನಗೆ ತುಂಬಾ ತೊಂದರೆ ಕೊಟ್ಟಿದ್ದಾರೆ. ನನ್ನ ಬಳಿ ಅವರ ವಿಡಿಯೋ ಸಹ ಇದೆ. ನಾನು ಆಲ್ಕೋಹಾಲ್ ಸೇವಿಸ್ತೇನೆ. ಆದರೆ ಕಾರಿಯಪ್ಪ ವೀಡ್ ಮಾದರಿಯ ಡ್ರಗ್ಸ್ ಸೇವಿಸುತ್ತಾರೆ. ನನ್ನ ಹಾಗೂ ಅವರ ನಡುವೆ ಬ್ರೇಕ್‌ ಅಪ್ ಆಗಿಲ್ಲ, ಆದ್ರೆ ಅವರು ನನ್ನನ್ನು ಅವೈಡ್ ಮಾಡುತ್ತಿದ್ದಾರೆ ಎಂದು ಕಾರಿಯಪ್ಪ ಮಾಜಿ ಪ್ರಿಯತಮೆ ಆರೋಪಿಸಿದ್ದಾರೆ.

ಅವರಿಗೆ ನಾನು ಹಲವು ಬಾರಿ ಹಣ ಕೊಟ್ಟಿದ್ದೇನೆ. ಎರಡು ಲಕ್ಷದವರೆಗೆ ಹಣ ಕೊಟ್ಟಿದ್ದೇನೆ. ನಾವಿಬ್ಬರೂ ಒಂದೇ ಊರಿನವರಾಗಿದ್ದರಿಂದ ನಾನೇ ಅವರಿಗೆ ಮೆಸೇಜ್ ಮಾಡಿದ್ದೆ. ಅವರು ಪಬ್ಲಿಕ್ ಫಿಗರ್ ಹಾಗಾಗಿ ಇನ್‌ಸ್ಟಾಗ್ರಾಂನಲ್ಲಿ ಮೆಸೇಜ್ ಮಾಡಿದ್ದೆ. ಕೊನೆಗೆ ಅವರೇ ನನಗೆ ಮೆಸೇಜ್ ಮಾಡಿದ್ದರು. ನನಗೆ ಅವರಿಂದ ಮೋಸವಾಗಿರುವ ಬಗ್ಗೆ ನಾನು ಕ್ರಿಕೆಟ್ ಅಸೋಸಿಯೇಷನ್‌ಗೂ ಪತ್ರ ಬರೆಯುತ್ತೇನೆ ಎಂದು ಕಾರಿಯಪ್ಪ ಮಾಜಿ ಪ್ರಿಯತಮೆ ಆರೋಪಿಸಿದ್ದಾರೆ.

ಕಾರಿಯಪ್ಪ ಅವರಿಂದ ಪ್ರತ್ಯೇಕ ದೂರು:

ಇನ್ನು ಕ್ರಿಕೆಟಿಗ ಕೆ ಸಿ ಕಾರಿಯಪ್ಪ ಕೂಡಾ ಆ ಮಹಿಳೆಯ ವಿರುದ್ದ ಬಗಲಗುಂಟೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಒಂದೂವರೆ ವರ್ಷದ ಹಿಂದೆಯೇ ಆಕೆಯೊಂದಿಗೆ ನಾನು ಬ್ರೇಕ್‌ಅಪ್ ಮಾಡಿಕೊಂಡಿದ್ದೇನೆ. ಆಕೆ ಅಭ್ಯಾಸಗಳು ಸರಿಯಿಲ್ಲ. ಈಗ ನನ್ನ ಕ್ರಿಕೆಟ್ ಭವಿಷ್ಯ ಹಾಳು ಮಾಡುತ್ತೇನೆ ಎಂದು ಗಲಾಟೆ ಮಾಡುತ್ತಿದ್ದಾಳೆ. ನನ್ನ ಮನೆ ಬಳಿ ಬಂದು ಗಲಾಟೆ ಮಾಡುತ್ತಾಳೆ ಎಂದು ಕಾರಿಯಪ್ಪ ದೂರು ನೀಡಿದ್ದಾರೆ.

PREV

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ದೇಶದ ಅಗ್ರ ಟಿ20 ಟೂರ್ನಿಯಲ್ಲೇ ಮ್ಯಾಚ್‌ ಫಿಕ್ಸಿಂಗ್‌, ನಾಲ್ವರು ಕ್ರಿಕೆಟಿಗರ ಸಸ್ಪೆಂಡ್‌ ಮಾಡಿ ತನಿಖೆಗೆ ಆದೇಶಿಸಿದ ಬಿಸಿಸಿಐ!
ಹೃತಿಕ್‌ ರೋಶನ್‌ 'ಕ್ರಿಶ್‌' ಸಿನಿಮಾದಲ್ಲಿ ಬಾಲನಟಿಯಾಗಿದ್ರಾ ಧೋನಿ ಪತ್ನಿ ಸಾಕ್ಷಿ?