ICC Men’s T20 World Cup: ಟಿ20 ವಿಶ್ವಕಪ್‌ಗೆ ಭಾರತ ತಂಡ ಪ್ರಕಟ: ಅಚ್ಚರಿಯ ಆಯ್ಕೆ, ಗಿಲ್‌ಗಿಲ್ಲ ಸ್ಥಾನ

Published : Dec 20, 2025, 02:41 PM IST
Team India

ಸಾರಾಂಶ

ಮುಂದಿನ ಟಿ20 ವಿಶ್ವಕಪ್‌ಗೆ ಸೂರ್ಯಕುಮಾರ್ ಯಾದವ್ ನಾಯಕತ್ವದ 15 ಸದಸ್ಯರ ಭಾರತ ತಂಡವನ್ನು ಪ್ರಕಟಿಸಲಾಗಿದೆ. ಈ ತಂಡದಿಂದ ಶುಭಮನ್ ಗಿಲ್ ಮತ್ತು ಜಿತೇಶ್ ಶರ್ಮಾ ಅವರನ್ನು ಕೈಬಿಡಲಾಗಿದ್ದು, ರಿಂಕು ಸಿಂಗ್ ಮತ್ತು ಇಶಾನ್ ಕಿಶನ್ ಅವರಿಗೆ ಅವಕಾಶ ನೀಡಲಾಗಿದೆ.

ಮುಂಬೈ: ಮುಂದಿನ ವರ್ಷ ಫೆಬ್ರವರಿಯಲ್ಲಿ ಭಾರತ ಮತ್ತು ಶ್ರೀಲಂಕಾದಲ್ಲಿ ನಡೆಯಲಿರುವ ಟಿ20 ವಿಶ್ವಕಪ್‌ಗೆ 15 ಸದಸ್ಯರ ಭಾರತ ತಂಡವನ್ನು ಪ್ರಕಟಿಸಲಾಗಿದೆ. ಸೂರ್ಯಕುಮಾರ್ ಯಾದವ್ ನಾಯಕರಾಗಿರುವ ತಂಡಕ್ಕೆ ಅಕ್ಷರ್ ಪಟೇಲ್ ಉಪನಾಯಕರಾಗಿದ್ದಾರೆ. ಏಷ್ಯಾಕಪ್‌ನಿಂದ ಉಪನಾಯಕರಾಗಿದ್ದ ಶುಭಮನ್ ಗಿಲ್ ಅವರನ್ನು ಟಿ20 ವಿಶ್ವಕಪ್ ತಂಡದಿಂದ ಕೈಬಿಡಲಾಗಿದ್ದು, ಮಧ್ಯಮ ಕ್ರಮಾಂಕದಲ್ಲಿ ಫಿನಿಶರ್ ಆಗಿ ಬ್ಯಾಟ್ ಮಾಡುತ್ತಿದ್ದ ವಿಕೆಟ್ ಕೀಪರ್ ಜಿತೇಶ್ ಶರ್ಮಾ ಅವರಿಗೂ ವಿಶ್ವಕಪ್ ತಂಡದಲ್ಲಿ ಸ್ಥಾನ ಸಿಕ್ಕಿಲ್ಲ.

ಸಂಜು ಸ್ಯಾಮ್ಸನ್ ಅವರನ್ನು ಪ್ರಮುಖ ವಿಕೆಟ್ ಕೀಪರ್ ಮತ್ತು ಆರಂಭಿಕ ಆಟಗಾರನಾಗಿ ತಂಡದಲ್ಲಿ ಉಳಿಸಿಕೊಳ್ಳಲಾಗಿದ್ದು, ಮುಷ್ತಾಕ್ ಅಲಿ ಟ್ರೋಫಿಯಲ್ಲಿ ಜಾರ್ಖಂಡ್ ಪರ ಮಿಂಚಿದ್ದ ಇಶಾನ್ ಕಿಶನ್ ಎರಡನೇ ವಿಕೆಟ್ ಕೀಪರ್ ಆಗಿ ತಂಡಕ್ಕೆ ಆಯ್ಕೆಯಾಗಿದ್ದಾರೆ.

ಜಸ್ಪ್ರೀತ್ ಬುಮ್ರಾ, ಅರ್ಷದೀಪ್ ಸಿಂಗ್ ಮತ್ತು ಹರ್ಷಿತ್ ರಾಣಾ

ದಕ್ಷಿಣ ಆಫ್ರಿಕಾ ವಿರುದ್ಧದ ಟಿ20 ಸರಣಿಯಲ್ಲಿ ಆಡಿದ್ದ ತಂಡದ ಆಟಗಾರರ ಪೈಕಿ ಶುಭಮನ್ ಗಿಲ್ ಮತ್ತು ಜಿತೇಶ್ ಶರ್ಮಾ ಹೊರಗುಳಿದಿದ್ದು, ಇಶಾನ್ ಕಿಶನ್ ಮತ್ತು ರಿಂಕು ಸಿಂಗ್ ವಿಶ್ವಕಪ್ ತಂಡಕ್ಕೆ ಆಯ್ಕೆಯಾಗಿದ್ದಾರೆ. ಜಸ್ಪ್ರೀತ್ ಬುಮ್ರಾ, ಅರ್ಷದೀಪ್ ಸಿಂಗ್ ಮತ್ತು ಹರ್ಷಿತ್ ರಾಣಾ ವಿಶ್ವಕಪ್ ತಂಡದಲ್ಲಿ ವೇಗಿಗಳಾಗಿ ಮುಂದುವರಿಯಲಿದ್ದಾರೆ. ವಾಷಿಂಗ್ಟನ್ ಸುಂದರ್ 15 ಸದಸ್ಯರ ತಂಡದಲ್ಲಿ ಸ್ಥಾನ ಪಡೆದಿದ್ದು, ದಕ್ಷಿಣ ಆಫ್ರಿಕಾ ವಿರುದ್ಧದ ಟಿ20 ಸರಣಿಯಲ್ಲಿ ಆಡದಿದ್ದ ರಿಂಕು ಸಿಂಗ್‌ಗೂ ತಂಡದಲ್ಲಿ ಸ್ಥಾನ ಸಿಕ್ಕಿದೆ.

ಆಲ್‌ರೌಂಡರ್‌

ಕಳೆದ ವರ್ಷದ ಟಿ20 ವಿಶ್ವಕಪ್‌ನಲ್ಲಿ ದುರದೃಷ್ಟವಶಾತ್ ರಿಂಕು ತಂಡದಲ್ಲಿ ಸ್ಥಾನ ಕಳೆದುಕೊಂಡಿದ್ದರು. ಹಾರ್ದಿಕ್ ಪಾಂಡ್ಯ ಮತ್ತು ಶಿವಂ ದುಬೆ ಆಲ್‌ರೌಂಡರ್‌ಗಳಾಗಿ ತಂಡಕ್ಕೆ ಆಯ್ಕೆಯಾಗಿದ್ದಾರೆ. ವಿಶ್ವಕಪ್ ಜೊತೆಗೆ ಮುಂದಿನ ತಿಂಗಳು ನ್ಯೂಜಿಲೆಂಡ್ ವಿರುದ್ಧ ನಡೆಯಲಿರುವ ಟಿ20 ಸರಣಿಯಲ್ಲೂ ಇದೇ ತಂಡ ಆಡಲಿದೆ.

ಟಿ20 ವಿಶ್ವಕಪ್‌ಗೆ ಭಾರತ ತಂಡ: ಸೂರ್ಯಕುಮಾರ್ ಯಾದವ್ (ನಾಯಕ), ಅಕ್ಷರ್ ಪಟೇಲ್ (ಉಪನಾಯಕ), ಅಭಿಷೇಕ್ ಶರ್ಮಾ, ಸಂಜು ಸ್ಯಾಮ್ಸನ್, ತಿಲಕ್ ವರ್ಮಾ, ಹಾರ್ದಿಕ್ ಪಾಂಡ್ಯ, ಶಿವಂ ದುಬೆ, ವಾಷಿಂಗ್ಟನ್ ಸುಂದರ್, ರಿಂಕು ಸಿಂಗ್, ಹರ್ಷಿತ್ ರಾಣಾ, ಜಸ್ಪ್ರೀತ್ ಬುಮ್ರಾ, ಅರ್ಷದೀಪ್ ಸಿಂಗ್, ವರುಣ್ ಚಕ್ರವರ್ತಿ, ಕುಲದೀಪ್ ಯಾದವ್, ಇಶಾನ್ ಕಿಶನ್.

 

 

PREV

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ವರುಣ್ ಗೂಗ್ಲಿಗೆ ಸೌತ್ ಆಫ್ರಿಕಾ ಪಂಚರ್, ಟಿ20 ಸರಣಿ ವಶಪಡಿಸಿಕೊಂಡ ಟೀಂ ಇಂಡಿಯಾ
ಕೇವಲ 16 ಎಸೆತದಲ್ಲಿ ಹಾಫ್ ಸೆಂಚುರಿ ಸಿಡಿಸಿ ಹಾರ್ದಿಕ್ ದಾಖಲೆ, ಸೌತ್ ಆಫ್ರಿಕಾಗೆ 232 ರನ್ ಟಾರ್ಗೆಟ್