
ಲಖನೌ(ಮಾ.23): ಮಂಗಳವಾರ ಇಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧದ 3ನೇ ಹಾಗೂ ಅಂತಿಮ ಟಿ20 ಪಂದ್ಯದಲ್ಲಿ ಕಣಕ್ಕಿಳಿಯಲಿರುವ ಭಾರತ ಮಹಿಳಾ ತಂಡ, ವೈಟ್ವಾಶ್ ಮುಖಭಂಗ ತಪ್ಪಿಸಿಕೊಳ್ಳಲು ಹೋರಾಡಲಿದೆ.
ಸರಣಿಯ ಮೊದಲೆರಡು ಪಂದ್ಯಗಳಲ್ಲಿ ಸೋತಿದ್ದ ಭಾರತ ತಂಡ ಭಾರೀ ಒತ್ತಡದೊಂದಿಗೆ ಅಂತಿಮ ಪಂದ್ಯಕ್ಕೆ ಕಣಕ್ಕಿಳಿಯಲಿದೆ. ಭಾರತ ವಿರುದ್ಧ ಚೊಚ್ಚಲ ಟಿ20 ಸರಣಿ ಗೆದ್ದಿರುವ ದಕ್ಷಿಣ ಆಫ್ರಿಕಾ, ಕ್ಲೀನ್ ಸ್ವೀಪ್ ನಿರೀಕ್ಷೆಯಲ್ಲಿದೆ.
ವಿಕಲಾಂಗ ಕ್ರಿಕೆಟ್ ಸಂಸ್ಥೆಗಳು ಸೇರಿ ಡಿಸಿಸಿಐ ಸ್ಥಾಪನೆ
ಮುಂಬೈ: ಭಾರತದ ವಿವಿಧ ವಿಕಲಾಂಗ ಕ್ರಿಕೆಟ್ ಸಂಸ್ಥೆಗಳು ಸೇರಿ ಭಾರತ ವಿಕಲಾಂಗ ಕ್ರಿಕೆಟ್ ಸಮಿತಿ(ಡಿಸಿಸಿಐ) ಸ್ಥಾಪಿಸಿವೆ.
ಭಾರತ ವಿರುದ್ದದ ಏಕದಿನ ಸರಣಿಗೆ ಇಂಗ್ಲೆಂಡ್ ತಂಡ ಪ್ರಕಟ
ಕರ್ನಾಟಕ ಸಂಘಗಳ ನೋಂದಣಿ ಕಾಯ್ದೆಯಡಿ ಸಂಸ್ಥೆಯನ್ನು ನೋಂದಾಯಿಸಲಾಗಿದ್ದು, ಅಂಧರ ಕ್ರಿಕೆಟ್ಗೆ ಅಪಾರ ಕೊಡುಗೆ ನೀಡಿರುವ ರಾಜ್ಯದ ಜಿ.ಕೆ.ಮಹಂತೇಶ್, ಡಿಸಿಸಿಐನ ಅಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಈ ಸಂಸ್ಥೆಗೆ ಬಿಸಿಸಿಐನಿಂದ ಮಾನ್ಯತೆ ಸಿಗುವ ನಿರೀಕ್ಷೆ ಇದ್ದು, ಬಿಸಿಸಿಐ ಚಿಹ್ನೆಯೊಂದಿಗೆ ವಿಕಲಾಂಗ ತಂಡಗಳು ಸ್ಪರ್ಧಿಸಲಿವೆ. ಎಲ್ಲಕ್ಕಿಂತ ಮುಖ್ಯವಾಗಿ ತಂಡಗಳಿಗೆ ಬಿಸಿಸಿಐನಿಂದ ಆರ್ಥಿಕ ನೆರವು ಸಿಗಲಿದೆ.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗೂ ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.