2ನೇ ಮಹಿಳಾ ಟಿ20: ಇಂಗ್ಲೆಂಡ್‌ ವಿರುದ್ಧ ಭಾರತಕ್ಕೆ ರೋಚಕ ಜಯ

Suvarna News   | Asianet News
Published : Jul 12, 2021, 09:23 AM IST
2ನೇ ಮಹಿಳಾ ಟಿ20: ಇಂಗ್ಲೆಂಡ್‌ ವಿರುದ್ಧ ಭಾರತಕ್ಕೆ ರೋಚಕ ಜಯ

ಸಾರಾಂಶ

* ಎರಡನೇ ಟಿ20 ಪಂದ್ಯದಲ್ಲಿ ಇಂಗ್ಲೆಂಡ್ ಎದುರು ಹರ್ಮನ್‌ಪ್ರೀತ್‌ ಪಡೆಗೆ ರೋಚಕ ಜಯ * ಸ್ಪೋಟಕ ಬ್ಯಾಟಿಂಗ್ ನಡೆಸಿದ ಶಫಾಲಿ ವರ್ಮಾ * ಒಂದೇ ಓವರ್‌ನಲ್ಲಿ 5 ಬೌಂಡರಿ ಚಚ್ಚಿದ ಶಫಾಲಿ ವರ್ಮಾ  

ಹೋವ್(ಜು.12)‌: ಸ್ಪಿನ್ನರ್‌ಗಳಾದ ಪೂನಂ ಯಾದವ್‌ ಹಾಗೂ ದೀಪ್ತಿ ಶರ್ಮಾ ಅವರ ಆಕರ್ಷಕ ಬೌಲಿಂಗ್‌ ಪ್ರದರ್ಶನದ ನೆರವಿನಿಂದ ಇಂಗ್ಲೆಂಡ್‌ ವಿರುದ್ಧದ 2ನೇ ಟಿ20 ಪಂದ್ಯದಲ್ಲಿ ಭಾರತ ಮಹಿಳಾ ಕ್ರಿಕೆಟ್ ತಂಡ, 8 ರನ್‌ಗಳ ರೋಚಕ ಗೆಲುವು ಸಾಧಿಸಿತು. ಇದರೊಂದಿಗೆ 3 ಪಂದ್ಯಗಳ ಸರಣಿಯಲ್ಲಿ 1-1ರಲ್ಲಿ ಸಮಬಲ ಸಾಧಿಸಿತು. 

ಶಫಾಲಿ ವರ್ಮಾ ಸ್ಫೋಟಕ ಆಟ (38 ಎಸೆತದಲ್ಲಿ 48 ರನ್‌) ನೆರವಿನಿಂದ ಭಾರತ 20 ಓವರಲ್ಲಿ 4 ವಿಕೆಟ್‌ಗೆ 148 ರನ್‌ ಗಳಿಸಿತು. ಇಂಗ್ಲೆಂಡ್‌, ಟ್ಯಾಮಿ ಬ್ಯುಯೊಮೊಂಟ್‌ರ ಅರ್ಧಶತಕದ ಹೊರತಾಗಿಯೂ ಕುಸಿತ ಕಂಡಿತು. ಕೊನೆ 36 ಎಸೆತಗಳಲ್ಲಿ ಕೇವಲ 43 ರನ್‌ ಬೇಕಿತ್ತು. ಆದರೂ ಇಂಗ್ಲೆಂಡ್‌ 8 ವಿಕೆಟ್‌ಗೆ ಕೇವಲ 140 ರನ್‌ ಗಳಿಸಿತು.

ಇದೀಗ ಮೂರನೇ ಹಾಗೂ ನಿರ್ಣಾಯಕ ಟಿ20 ಪಂದ್ಯವು ಜುಲೈ 14ರಂದು ಕೌಂಟಿ ಗ್ರೌಂಡ್‌ನಲ್ಲೇ ನಡೆಯಲಿದೆ. ಈಗಾಗಲೇ ಏಕದಿನ ಸರಣಿಯನ್ನು ಕೈಚೆಲ್ಲಿರುವ ಭಾರತೀಯ ಮಹಿಳಾ ಕ್ರಿಕೆಟ್ ತಂಡವು ಚುಟುಕು ಕ್ರಿಕೆಟ್‌ ಸರಣಿಯನ್ನು ಗೆದ್ದು ಬೀಗಲು ಸಿದ್ದವಾಗಿದೆ.

ಪಂದ್ಯ ಸೋತರೂ ಅಭಿಮಾನಿಗಳ ಹೃದಯ ಗೆದ್ದ ಡಿಯೋಲ್ ಹಿಡಿದ ಅದ್ಭುತ ಕ್ಯಾಚ್‌..!

ಓವರಲ್ಲಿ 5 ಬೌಂಡರಿ ಸಿಡಿಸಿದ ಶಫಾಲಿ ವರ್ಮಾ: ಭಾರತದ ಸ್ಫೋಟಕ ಆಟಗಾರ್ತಿ ಶಫಾಲಿ ವರ್ಮಾ, ಕ್ಯಾಥರೀನ್‌ ಬ್ರಂಟ್‌ರ ಓವರ್‌ನಲ್ಲಿ ಸತತ 5 ಬೌಂಡರಿ ಬಾರಿಸಿ ಗಮನ ಸೆಳೆದರು. ಓವರ್‌ನ ಮೊದಲ ಎಸೆತದಲ್ಲಿ ಸ್ಮೃತಿ ಒಂದು ರನ್‌ ಪಡೆದು ಶಫಾಲಿಗೆ ಸ್ಟೆ್ರೖಕ್‌ ನೀಡಿದರು. ಶಫಾಲಿ 5 ಬೌಂಡರಿ ಬಾರಿಸಿ, ಕ್ರಿಕೆಟ್‌ ಅಭಿಮಾನಿಗಳಲ್ಲಿ ರೋಮಾಂಚನ ಮೂಡಿಸಿದರು.

ಇಂಗ್ಲೆಂಡ್ ಎದುರಿನ ಮೊದಲ ಟಿ20 ಪಂದ್ಯದಲ್ಲಿ ಬ್ರಂಟ್‌ ಬೌಲಿಂಗ್‌ನಲ್ಲೇ ಶಫಾಲಿ ವರ್ಮಾ ಶೂನ್ಯ ಸುತ್ತಿ ಪೆವಿಲಿಯನ್‌ ಸೇರಿದ್ದರು. ಇದೀಗ ಎರಡನೇ ಪಂದ್ಯದಲ್ಲಿ  ಸತತ 5 ಬೌಂಡರಿ ಬಾರಿಸುವ ಮೊದಲ ಪಂದ್ಯದ ಶಾಕ್‌ಗೆ ಸೇಡು ತೀರಿಸಿಕೊಂಡರು. 

ಸ್ಕೋರ್‌: 
ಭಾರತ 148/4
ಇಂಗ್ಲೆಂಡ್‌ 140/8
 

PREV

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

Ind vs SA 3rd T20I: ಹರಿಣಗಳಿಗೆ ತಿರುಗೇಟು ನೀಡುತ್ತಾ ಟೀಂ ಇಂಡಿಯಾ?
ಆರ್‌ಸಿಬಿ ಕಾಲ್ತುಳಿತದ ದುರ್ಘಟನೆ ಬಳಿಕ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಡಿ.24ಕ್ಕೆ ಮೊದಲ ಕ್ರಿಕೆಟ್‌ ಪಂದ್ಯ? ಕೊಹ್ಲಿ ಭಾಗಿ