ಕೊರೋನಾ ಅಟ್ಟಹಾಸಕ್ಕೆ ವೇದಾ ಕೃಷ್ಣಮೂರ್ತಿ ಸಹೋದರಿ ಬಲಿ..!

Suvarna News   | Asianet News
Published : May 06, 2021, 05:07 PM ISTUpdated : May 08, 2021, 10:12 AM IST
ಕೊರೋನಾ ಅಟ್ಟಹಾಸಕ್ಕೆ ವೇದಾ ಕೃಷ್ಣಮೂರ್ತಿ ಸಹೋದರಿ ಬಲಿ..!

ಸಾರಾಂಶ

ಭಾರತ ತಂಡದ ಮಹಿಳಾ ತಂಡದ ಆಟಗಾರ್ತಿ ವೇದಾ ಕೃಷ್ಣಮೂರ್ತಿ ಸಹೋದರಿ ವತ್ಸಲಾ ಕೃಷ್ಣಮೂರ್ತಿ ಕೋವಿಡ್‌ನಿಂದಾಗಿ ಕೊನೆಯುಸಿರೆಳೆದಿದ್ದಾರೆ. ಈ ಕುರಿತಾದ ಒಂದು ರಿಪೋರ್ಟ್ ಇಲ್ಲಿದೆ ನೋಡಿ.

ಕಡೂರು(ಮೇ.06): ಭಾರತ ಮಹಿಳಾ ಕ್ರಿಕೆಟ್ ತಂಡದ ಆಟಗಾರ್ತಿ ವೇದಾ ಕೃಷ್ಣಮೂರ್ತಿ ಸಹೋದರಿ ವತ್ಸಲಾ ಕೃಷ್ಣಮೂರ್ತಿ(40) ಕೋವಿಡ್ ವಿರುದ್ದ ಜೀವನ್ಮರಣ ಹೋರಾಟ ನಡೆಸಿ ಕೊನೆಯುಸಿರೆಳೆದಿದ್ದಾರೆ.

ಕೇವಲ 10 ದಿನಗಳ ಹಿಂದಷ್ಟೇ ವೇದಾ ಕೃಷ್ಣಮೂರ್ತಿ ತಾಯಿ ಚಲುವಾಂಬ(63) ಕೊರೋನಾದಿಂದಾಗಿ ಚಿಕ್ಕಮಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದರು. ನ್ಯೂಮೊನಿಯಾದಿಂದ ಬಳಲುತ್ತಿದ್ದ ವತ್ಸಲಾ ಸಹ ಇದೀಗ ಕೋವಿಡ್‌ಗೆ ಬಲಿಯಾಗಿದ್ದಾರೆ. ಕಡೂರು ಪಟ್ಟಣದ ನಿವಾಸಿಯಾಗಿದ್ದ ವತ್ಸಲಾ ಕೃಷ್ಣಮೂರ್ತಿ ಚಿಕ್ಕಮಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಇದೀಗ ಚಿಕಿತ್ಸೆ ಫಲಕಾರಿಯಾಗದೇ ಕೊನೆಯುಸಿರೆಳೆದಿದ್ದಾರೆ.

ಖ್ಯಾತ ಮಹಿಳಾ ಕ್ರಿಕೆಟರ್ ವೇದಾ ಕೃಷ್ಣಮೂರ್ತಿಗೆ ಮಾತೃ ವಿಯೋಗ

ಇದು ವೇದಾ ಕೃಷ್ಣಮೂರ್ತಿ ಕುಟುಂಬದ ಪಾಲಿಗೆ ಡಬಲ್ ಶಾಕ್ ಆದಂತೆ ಆಗಿದೆ. ವೇದಾ ಕೇವಲ 10 ದಿನಗಳ ಅಂತರದಲ್ಲಿ ಕೋವಿಡ್‌ನಿಂದಾಗಿ ತಾಯಿ ಹಾಗೂ ಸಹೋದರಿಯನ್ನು ಕಳೆದುಕೊಂಡಂತೆ ಆಗಿದೆ. ವೇದಾ ಕೃಷ್ಣಮೂರ್ತಿ ಮಾತ್ರವಲ್ಲದೇ ಟೀಂ ಇಂಡಿಯಾ ಕ್ರಿಕೆಟಿಗರಾದ ರವಿಚಂದ್ರನ್ ಅಶ್ವಿನ್‌ ಹಾಗೂ ಎಂ ಎಸ್ ಧೋನಿ ಕುಟುಂಬಸ್ಥರು ಸಹ ಕೋವಿಡ್ 19 ಸೋಂಕಿಗೆ ಒಳಾಗಾಗಿ ಚೇತರಿಸಿಕೊಂಡಿದ್ದರು. ಈ ಮೊದಲು ಸಚಿನ್‌ ತೆಂಡುಲ್ಕರ್, ಯೂಸುಫ್ ಪಠಾಣ್ ಹಾಗೂ ಹರ್ಮನ್‌ಪ್ರೀತ್ ಕೌರ್ ಸಹಾ ಕೋವಿಡ್‌ಗೆ ಒಳಗಾಗಿ ಚಿಕಿತ್ಸೆ ಪಡೆದು ಚೇತರಿಸಿಕೊಂಡಿದ್ದರು.

ಬುಧವಾರ ಒಂದೇ ದಿನ ದೇಶಾದ್ಯಂತ ದಾಖಲೆಯ 4.12 ಲಕ್ಷ ಮಂದಿಗೆ ಕೋವಿಡ್ 19 ಸೋಂಕು ದೃಢಪಟ್ಟಿತ್ತು. ಈ ಪೈಕಿ 3979 ಮಂದಿ ಕೋವಿಡ್‌ನಿಂದ ಕೊನೆಯುಸಿರೆಳೆದಿದ್ದಾರೆ. ಇನ್ನು ರಾಜ್ಯದಲ್ಲಿ 50 ಸಾವಿರ ಮಂದಿಗೆ ಕೊರೋನಾ ಸೋಂಕು ದೃಢಪಟ್ಟಿದೆ.

ಸೂಚನೆ: ಕೊರೋನಾ ಮಹಾಮಾರಿ ಎಲ್ಲೆಡೆ ಹರಡುತ್ತಿದೆ. ಹೀಗಿರುವಾಗ ಎಲ್ಲರೂ ತಪ್ಪದೇ ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ ಹಾಗೂ ಲಸಿಕೆ ಪಡೆಯಿರಿ ಎಂಬುವುದು ಏಷ್ಯಾನೆಟ್‌ ನ್ಯೂಸ್‌ ಕಳಕಳಿಯ ವಿನಂತಿ. ಒಗ್ಗಟ್ಟಿನಿಂದ ನಾವು ಈ ಕೊರೋನಾ ಸರಪಳಿ ಮುರಿಯೋಣ #ANCares #IndiaFightsCorona

"

PREV

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ದೇಶದ ಅಗ್ರ ಟಿ20 ಟೂರ್ನಿಯಲ್ಲೇ ಮ್ಯಾಚ್‌ ಫಿಕ್ಸಿಂಗ್‌, ನಾಲ್ವರು ಕ್ರಿಕೆಟಿಗರ ಸಸ್ಪೆಂಡ್‌ ಮಾಡಿ ತನಿಖೆಗೆ ಆದೇಶಿಸಿದ ಬಿಸಿಸಿಐ!
ಹೃತಿಕ್‌ ರೋಶನ್‌ 'ಕ್ರಿಶ್‌' ಸಿನಿಮಾದಲ್ಲಿ ಬಾಲನಟಿಯಾಗಿದ್ರಾ ಧೋನಿ ಪತ್ನಿ ಸಾಕ್ಷಿ?