
ಬೆಂಗಳೂರು(ಸೆ.28): ಭಾರತದ ಮಾಜಿ ಟೆಸ್ಟ್ ಅಂಪೈರ್, ಬೆಂಗಳೂರು ಮೂಲದ ಬಾದಾಮಿ ಸತ್ಯಾಜಿ ರಾವ್(91) (B Satyaji Rao) ಕೊನೆಯುಸಿರೆಳೆದಿದ್ದಾರೆ. ಅವರಿಗೆ 91 ವರ್ಷ ವಯಸ್ಸಾಗಿತ್ತು. ವಯೋ ಸಹಜ ಕಾಯಿಲೆಯಿಂದ ಬಳಲುತ್ತಿದ್ದ ಸತ್ಯಾಜಿ ರಾವ್ ಮಂಗಳವಾರ(ಸೆ.28) ಕೊನೆಯುಸಿರೆಳೆದಿದ್ದಾರೆ.
ಬೆಂಗಳೂರಿನಲ್ಲಿ ಅಕ್ಟೋಬರ್ 16, 1929ರಲ್ಲಿ ಜನಿಸಿದ್ದ ಸತ್ಯಾಜಿ ರಾವ್, 1956ರಿಂದ1981ರ ವರೆಗೆ ಪ್ರಥಮ ದರ್ಜೆ ಕ್ರಿಕೆಟ್ನಲ್ಲಿ ಅಂಪೈರ್ (Umpire) ಆಗಿ ಕಾರ್ಯ ನಿರ್ವಹಿಸಿದ್ದರು. ಬಿ. ಸತ್ಯಾಜಿ ರಾವ್ 5 ಬಾರಿ ರಣಜಿ ಟ್ರೋಫಿ (Ranji Trophy) ಫೈನಲ್ನಲ್ಲಿ ಅಂಪೈರ್ ಆಗಿ ಕಾರ್ಯ ನಿರ್ವಹಿಸಿದ್ದರು. ಇದಷ್ಟೇ ಅಲ್ಲದೇ ನಾಲ್ಕು ಬಾರಿ ದುಲೀಪ್ ಟ್ರೋಫಿ (Duleep Trophy) ಫೈನಲ್ನಲ್ಲೂ ಅಂಪೈರ್ ಆಗಿ ಕಾರ್ಯ ನಿರ್ವಹಿಸಿದ್ದರು.
E-Auction ನಲ್ಲಿ ನೀವೂ ಖರೀದಿಸಬಹುದು CA ಭವಾನಿ ದೇವಿ ಬಳಸಿದ ಖಡ್ಗ..!
ಇನ್ನು ಸತ್ಯಾಜಿ ರಾವ್ ಅಂತಾರಾಷ್ಟ್ರೀಯ ಮಟ್ಟದಲ್ಲಿ 1960ರಿಂದ 1979ರ ವರೆಗೆ 17 ಟೆಸ್ಟ್ ಪಂದ್ಯಗಳಲ್ಲಿ ಅಂಪೈರ್ ಆಗಿ ಕಾರ್ಯನಿರ್ವಹಿಸಿ ಸೈ ಎನಿಸಿಕೊಂಡಿದ್ದರು. 1960ರ ಡಿಸೆಂಬರ್ನಲ್ಲಿ ಕೋಲ್ಕತದ ಈಡನ್ ಗಾರ್ಡನ್ ಮೈದಾನದಲ್ಲಿ ನಡೆದ ಭಾರತ ಹಾಗೂ ಪಾಕಿಸ್ತಾನ ನಡುವಿನ ಮೂರನೇ ಟೆಸ್ಟ್ ಪಂದ್ಯದಲ್ಲಿ ಮೊದಲ ಬಾರಿಗೆ ಟೆಸ್ಟ್ ಅಂಪೈರ್ ಆಗಿ ಪಾದಾರ್ಪಣೆ ಮಾಡಿದ್ದರು. ಇನ್ನು 1979ರಲ್ಲಿ ಭಾರತ ಹಾಗೂ ವೆಸ್ಟ್ ಇಂಡೀಸ್ ನಡುವೆ ಕಾನ್ಪುರದಲ್ಲಿ ನಡೆದ ಆರನೇ ಟೆಸ್ಟ್ನಲ್ಲಿ ಕೊನೆಯ ಬಾರಿಗೆ ಸತ್ಯಾಜಿ ರಾವ್ ಅಂಪೈರ್ ಆಗಿ ಕಾರ್ಯ ನಿರ್ವಹಿಸಿದ್ದರು.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗೂ ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.