
ಇಂದೋರ್[ನ.14]: ಟೀಂ ಇಂಡಿಯಾ ವೇಗಿಗಳು ನಿರೀಕ್ಷೆಯಂತೆಯೇ ಬಾಂಗ್ಲಾದೇಶ ಬ್ಯಾಟ್ಸ್’ಮನ್’ಗಳನ್ನು ಕಾಡುವಲ್ಲಿ ಯಶಸ್ವಿಯಾಗಿದ್ದಾರೆ. ಟಾಸ್ ಗೆದ್ದು ಬ್ಯಾಟಿಂಗ್ ಆಯ್ದುಕೊಂಡಿರುವ ಬಾಂಗ್ಲಾದೇಶ ಲಂಚ್ ಬ್ರೇಕ್ ವೇಳೆಗೆ 3 ವಿಕೆಟ್ ಕಳೆದುಕೊಂಡು 63 ರನ್ ಬಾರಿಸಿದೆ.
ಮೊದಲ ಟೆಸ್ಟ್ ಟಾಸ್ ಗೆದ್ದ ಬಾಂಗ್ಲಾ ಬ್ಯಾಟಿಂಗ್ ಆಯ್ಕೆ; ಟೀಂ ಇಂಡಿಯಾದಲ್ಲಿ ಒಂದು ಬದಲಾವಣೆ
ಟಾಸ್ ಸೋತರೂ ಧೃತಿಗೆಡದ ಟೀಂ ಇಂಡಿಯಾ ಬೌಲರ್’ಗಳು ಮಿಂಚಿನ ದಾಳಿ ಸಂಘಟಿಸಿದರು. ಪಂದ್ಯದ ಆರನೇ ಓವರ್’ನಲ್ಲಿ ವೇಗಿ ಉಮೇಶ್ ಯಾದವ್ ಬಾಂಗ್ಲಾ ಆರಂಭಿಕ ಇಮ್ರುಲ್ ಕಯೀಸ್ ವಿಕೆಟ್ ಪಡೆಯುವ ಮೂಲಕ ಭಾರತಕ್ಕೆ ಮೊದಲ ಯಶಸ್ಸು ದಕ್ಕಿಸಿಕೊಟ್ಟರು. ಕಯೀಸ್ 6 ರನ್ ಬಾರಿಸಿ ಅಜಿಂಕ್ಯ ರಹಾನೆಗೆ ಕ್ಯಾಚಿತ್ತು ಪೆವಿಲಿಯನ್ ಸೇರಿದರು. ಇದಾಗಿ 12 ಎಸೆತಗಳಲ್ಲಿ ಬಾಂಗ್ಲಾದೇಶ ಮತ್ತೊಂದು ವಿಕೆಟ್ ಕಳೆದುಕೊಂಡಿತು. ಬಾಂಗ್ಲಾದೇಶ ಮತ್ತೋರ್ವ ಆರಂಭಿಕ ಬ್ಯಾಟ್ಸ್’ಮನ್ ಶಾದಾಬ್ ಇಸ್ಲಾಂ ಸಹಾ 6 ರನ್ ಬಾರಿಸಿ ಇಶಾಂತ್ ಶರ್ಮಾ ಬೌಲಿಂಗ್’ನಲ್ಲಿ ವೃದ್ದಿಮಾನ್ ಸಾಹಗೆ ಕ್ಯಾಚಿತ್ತು ಪೆವಿಲಿಯನ್ ಸೇರಿದರು. ಇದರೊಂದಿಗೆ ವೃದ್ದಿಮಾನ್ ಸಾಹ, ಪ್ರಥಮ ದರ್ಜೆ ಕ್ರಿಕೆಟ್’ನಲ್ಲಿ 300 ಕ್ಯಾಚ್ ಹಿಡಿದ ಸಾಧನೆ ಮಾಡಿದರು. ಇನ್ನು ಮೊಹಮ್ಮದ್ ಮಿಥುನ್ ಕೇವಲ 13 ರನ್’ಗಳಿಗೆ ಸೀಮಿತವಾಯಿತು. ಮಿಥುನ್ ಪೆವಿಲಿಯನ್ನಿಗಟ್ಟುವಲ್ಲಿ ಮೊಹಮ್ಮದ್ ಶಮಿ ಯಶಸ್ವಿಯಾದರು. ಈ ಮೂಲಕ ಮೂವರು ವೇಗಿಗಳು ತಲಾ ಒಂದೊಂದು ವಿಕೆಟ್ ಹಂಚಿಕೊಂಡಿದ್ದಾರೆ.
ಆಸರೆಯಾದ ಮುಷ್ಫೀಕುರ್-ಮೊಮಿನುಲ್ ಹಕ್: ಒಂದು ಹಂತದಲ್ಲಿ 31 ರನ್’ಗಳಿಗೆ 3 ವಿಕೆಟ್ ಕಳೆದುಕೊಂಡು ಸಂಕಷ್ಟದಲ್ಲಿದ್ದ ಬಾಂಗ್ಲಾ ತಂಡಕ್ಕೆ ವಿಕೆಟ್ ಕೀಪರ್ ಬ್ಯಾಟ್ಸ್’ಮನ್ ಮುಷ್ಫೀಕುರ್ ಹಾಗೂ ನಾಯಕ ಮೊಮಿನುಲ್ ಹಕ್ ಆಸರೆಯಾಗಿದ್ದಾರೆ. 4ನೇ ವಿಕೆಟ್’ಗೆ ಈ ಜೋಡಿ 32 ರನ್’ಗಳ ಜತೆಯಾಟ ನಿಭಾಯಿಸಿದೆ. ಮುಷ್ಫೀಕುರ್ 14 ರನ್ ಬಾರಿಸಿದರೆ, ಮೊಮಿನುಲ್ ಹಕ್ 22 ರನ್ ಬಾರಿಸಿ ಬ್ಯಾಟಿಂಗ್ ಕಾಯ್ದುಕೊಂಡಿದ್ದಾರೆ.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗೂ ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.