
ನವದೆಹಲಿ(ನ.03): ದೆಹಲಿ ಮಾಲಿನ್ಯದ ಪರಿಣಾಮ ಭಾರತ ಹಾಗೂ ಬಾಂಗ್ಲಾದೇಶ ನಡುವಿನ ಮೊದಲ ಟಿ20 ಪಂದ್ಯ ನಡೆಯುವುದೇ ಅನುಮಾನವಾಗಿತ್ತು. ಆದರೆ ದಿಟ್ಟ ನಿರ್ಧಾರ ಮಾಡಿರುವ ಬಿಸಿಸಿಐ ಕೊನೆಗೂ ಪಂದ್ಯ ಆಯೋಜನೆ ಮಾಡಿದೆ. ಮೊದಲ ಟಿ20 ಪಂದ್ಯದಲ್ಲಿ ಟಾಸ್ ಗೆದ್ದ ಬಾಂಗ್ಲಾದೇಶ ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿದೆ.
ದೆಹಲಿಯ ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ(ಮೊದಲು ಫಿರೋಜ್ ಷಾ ಕೋಟ್ಲಾ ಕ್ರೀಡಾಂಗಣ) ನಡೆಯುತ್ತಿರುವ ಟಿ20 ಪಂದ್ಯ ತೀವ್ರ ಕುತೂಹಲಕ್ಕೆ ಕಾರಣವಾಗಿದೆ. ರೋಹಿತ್ ಶರ್ಮಾ ನಾಯಕತ್ವದ ಟೀಂ ಇಂಡಿಯಾ, ಶುಭಾರಂಭದ ನಿರೀಕ್ಷೆಯಲ್ಲಿದೆ. ಮುಂಬೈ ಮೂಲದ ಸ್ಫೋಟಕ ಬ್ಯಾಟ್ಸ್ಮನ್ ಶಿವಂ ದುಬೆ ಅಂತಾರಾಷ್ಟ್ರೀಯ ಕ್ರಿಕೆಟ್ಗೆ ಪದಾರ್ಪಣೆ ಮಾಡುತ್ತಿದ್ದಾರೆ.
ಶಕೀಬ್ ಅಲ್ ಹಸನ್ ನಿಷೇಧದಿಂದ ಬಾಂಗ್ಲಾದೇಶ ತಂಡ ಕೀ ಪ್ಲೇಯರ್ ಸೇವೆ ಕಳೆದುಕೊಂಡಿದೆ. ಇದು ಬಾಂಗ್ಲಾ ತಂಡಕ್ಕೆ ತೀವ್ರ ಹೊಡೆತ ನೀಡಲಿದೆ.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗೂ ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.