
ಕೊಲೊಂಬೊ(ಜು.20): ಭಾರತ ಹಾಗೂ ಶ್ರೀಲಂಕಾ ನಡುವಿನ 2ನೇ ಏಕದಿನ ಪಂದ್ಯ ಕುತೂಹಲಕ್ಕೆ ಕಾರಣವಾಗಿದೆ. ಭಾರತದ ಗೆಲುವಿಗೆ 276 ರನ್ ಟಾರ್ಗೆಟ್ ನೀಡಲಾಗಿದೆ. ಈ ಗುರಿ ಬೆನ್ನಟ್ಟುತ್ತಿರುವ ಭಾರತ ಆರಂಭದಲ್ಲಿ 5 ವಿಕೆಟ್ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿದೆ. ಹೀಗಾಗಿ ಮಧ್ಯಮ ಕ್ರಮಾಂಕದ ಮೇಲೆ ಒತ್ತಡ ಹೆಚ್ಚಾಗಿದೆ.
ಮೊದಲ ಪಂದ್ಯದಲ್ಲಿ ಗೆಲುವು ಸಾಧಿಸಿದ ಟೀಂ ಇಂಡಿಯಾ, 2ನೇ ಹಾಗೂ ನಿರ್ಣಾಯಕ ಪಂದ್ಯದಲ್ಲಿ ದಿಟ್ಟ ಬ್ಯಾಟಿಂಗ್ ಪ್ರದರ್ಶನ ನೀಡುವ ವಿಶ್ವಾಸದಲ್ಲಿದೆ. ಆದರೆ ಆರಂಭದಲ್ಲೇ ಪೃಥ್ವಿ ಶಾ ವಿಕೆಟ್ ಪತನಗೊಂಡಿತು. ಪೃಥ್ವಿ ಶಾ 13 ರನ್ ಸಿಡಿಸಿ ಔಟಾದರು.
ಮೊದಲ ಪಂದ್ಯದಲ್ಲಿ ಹಾಫ್ ಸೆಂಚುರಿ ಸಿಡಿಸಿದ ಇಶಾನ್ ಕಿಶನ್, ದ್ವಿತೀಯ ಪಂದ್ಯದಲ್ಲೇ ಕೇವಲ 1 ರನ್ ಸಿಡಿಸಿ ನಿರ್ಗಮಿಸಿದರು. ಇದರ ಬೆನ್ನಲ್ಲೇ 29 ರನ್ ಸಿಡಿಸಿ ಆಸೆರೆಯಾಗಿದ್ದ ನಾಯಕ ಶಿಖರ್ ಧವನ್ ವಿಕೆಟ್ ಪತನಗೊಂಡಿತು. ಆದರೆ ಪಾಂಡೆ ಹಾಗೂ ಸೂರ್ಯಕುಮಾರ್ ಯಾದವ್ ದಿಟ್ಟ ಹೋರಾಟ ನೀಡಿದ್ದರು. ಆದರೆ ಪಾಂಡೆ 37 ರನ್ ಸಿಡಿಸಿ ರನೌಟ್ಗೆ ಬಲಿಯಾದರು. ಇನ್ನು ಹಾರ್ದಿಕ್ ಪಾಂಡ್ಯ ಶೂನ್ಯ ಸುತ್ತಿದರು. ಈ ಮೂಲಕ ಭಾರತ 5 ವಿಕೆಟ್ ಕಳೆದುಕೊಂಡು ಸೋಲಿನತ್ತ ವಾಲಿದೆ.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗೂ ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.