
ಕೊಲೊಂಬೊ(ಜು.25): ನಾಯಕ ಶಿಖರ್ ಧವನ್, ಸೂರ್ಯಕುಮಾರ್ ಯಾದವ್ ಬ್ಯಾಟಿಂಗ್ ನೆರವಿನಿಂದ ಟೀಂ ಇಂಡಿಯಾ, ಶ್ರೀಲಂಕಾ ವಿರುದ್ಧದ ಮೊದಲ ಟಿ20 ಪಂದ್ಯದಲ್ಲಿ ಉತ್ತಮ ಮೊತ್ತ ಪೇರಿಸಿದೆ. ಆರಂಭಿಕ ಆಘಾತದ ಹೊರತಾಗಿಯೂ ಟೀಂ ಇಂಡಿಯಾ 5 ವಿಕೆಟ್ ನಷ್ಟಕ್ಕೆ 164 ರನ್ ಸಿಡಿಸಿತು. ಈ ಮೂಲಕ ಲಂಕಾಗೆ 165 ರನ್ ಟಾರ್ಗೆಟ್ ನೀಡಿತು.
ಟಾಸ್ ಸೋತು ಬ್ಯಾಟಿಂಗ್ ಇಳಿದ ಟೀಂ ಇಂಡಿಯಾ ಮೊದಲ ಓವರ್ನ ಮೊದಲ ಎಸೆತದಲ್ಲಿ ಪೃಥ್ವಿ ಶಾ ವಿಕೆಟ್ ಕಳೆದುಕೊಂಡಿತು. ನಾಯಕ ಶಿಖರ್ ಧವನ್ ಹಾಗೂ ಸಂಜು ಸ್ಯಾಮನ್ಸ್ ಹೋರಾಟ ರನ್ ವೇಗ ಹೆಚ್ಚಿಸಿತು. ಆದರೆ ಸಂಜು 27 ರನ್ ಸಿಡಿಸಿ ಔಟಾದರು.
ಸೂರ್ಯಕುಮಾರ್ ಯಾದವ್ ಹಾಗೂ ಧವನ್ ಹೋರಾಟ ಟೀಂ ಇಂಡಿಯಾಗೆ ನೆರವಾಯಿತು. ಧವನ್ 46 ರನ್ ಕಾಣಿಕೆ ನೀಡಿದರೆ, ಸೂರ್ಯಕುಮಾರ್ ಯಾದವ್ ಹಾಫ್ ಸೆಂಚುರಿ ಸಿಡಿಸಿದರು. ಇವರಿಬ್ಬರ ವಿಕೆಟ್ ಪತನದ ಬಳಿಕ ಹಾರ್ದಿಕ್ ಪಾಂಡ್ಯ ಅಬ್ಬರಿಸಲಿಲ್ಲ. 10 ರನ್ ಸಿಡಿಸಿ ಔಟಾದರು.
ಇಶಾನ್ ಕಿಶನ್ ಅಜೇಯ 20 ರನ್ ಸಿಡಿಸಿದರೆ, ಕ್ರುನಾಲ್ ಪಾಂಡ್ಯ ಅಜೇಯ 3 ರನ್ ಸಿಡಿಸಿದರು. ಈ ಮೂಲಕ ಟೀಂ ಇಂಡಿಯಾ 5 ವಿಕೆಟ್ ಕಳೆದುಕೊಂಡು 164 ರನ್ ಸಿಡಿಸಿತು.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗೂ ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.