IPL 2020 ಆಯೋಜನೆ ಕುರಿತು ಮಹತ್ವದ ನಿರ್ಧಾರ ಪ್ರಕಟಿಸಿದ ಬಿಸಿಸಿಐ!

Suvarna News   | Asianet News
Published : Apr 16, 2020, 09:01 PM ISTUpdated : Apr 16, 2020, 09:02 PM IST
IPL 2020 ಆಯೋಜನೆ ಕುರಿತು ಮಹತ್ವದ ನಿರ್ಧಾರ ಪ್ರಕಟಿಸಿದ ಬಿಸಿಸಿಐ!

ಸಾರಾಂಶ

ಮಾರ್ಚ್ 29ಕ್ಕೆ ಆರಂಭವಾಗಬೇಕಿದ್ದ ಐಪಿಎಲ್ ಟೂರ್ನಿಯನ್ನು ಬಿಸಿಸಿಐ ಏಪ್ರಿಲ್ 15ಕ್ಕೆ ಆರಂಭಿಸಲು ನಿರ್ಧರಿಸಿತ್ತು. ಆದರೆ ಕೊರೋನಾ ವೈರಸ್ ಹತೋಟಿಗೆ ಬರದ ಕಾರಣ ಲಾಕ್‌ಡೌನ್ ವಿಸ್ತರಣೆಯಾಗಿದೆ. ಇದರ ಬೆನ್ನಲ್ಲೇ ಬಿಸಿಸಿಐ ಕೂಡ ಟೂರ್ನಿ ಆಯೋಜನೆ ಕುರಿತು ಮಹತ್ವದ ನಿರ್ಧಾರ ಕೈಗೊಂಡಿದೆ. 

ಮುಂಬೈ(ಏ.16): ದೇಶದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದೆ. ವೈರಸ್ ಹರಡದಂತೆ ತಡೆಯಲು ಹಲವು ಕ್ರಮಗಳನ್ನು ಕೈಗೊಳ್ಳಲಾಗುತ್ತಿದ್ದರೂ ಸೋಂಕು ಹತೋಟಿಗೆ ಬರುತ್ತಿಲ್ಲ. ಇದೀಗ ಸೋಂಕಿತರ ಸಂಖ್ಯೆ 12ಸಾವಿರಕ್ಕೇರಿಕೆಯಾಗಿದೆ. ಇತ್ತ ಕೇಂದ್ರ ಸರ್ಕಾರ ಲಾಕ್‌ಡೌನ್ ವಿಸ್ತರಿಸಿದೆ. ಇದೀಗ ಮೇ.3ರ ವರೆಗೆ ಲಾಕ್‌ಡೌನ್ ವಿಸ್ತರಣೆಯಾಗಿದೆ. ಕೇಂದ್ರ ಸರ್ಕಾರದ ನಿರ್ಧಾರದ ಬಳಿಕ ಇದೀಗ ಬಿಸಿಸಿಐ ಕೂಡ ಐಪಿಎಲ್ ಆಯೋಜನೆ ಕುರಿತು ತನ್ನ ನಿರ್ಧಾರ ಪ್ರಕಟಿಸಿದೆ.

12 ಸಾವಿರ ಡಾಕ್ಟರ್‌ಗಳ ಜತೆ ಸಮಾಲೋಚನೆ ನಡೆಸಿದ ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡುಲ್ಕರ್

ಕೊರೋನಾ ವೈರಸ್ ಹರಡುತ್ತಿರುವ ಹಿನ್ನಲೆಯಲ್ಲಿ ಐಪಿಎಲ್ ಆಯೋಜನೆಯನ್ನು ತಾತ್ಕಾಲಿಕವಾಗಿ ರದ್ದುಗೊಳಿಸಲಾಗಿದೆ. ಕೊರೋನಾ ವೈರಸ್ ಹತೋಟಿಗೆ ಬರುವ ವರೆಗೆ ಟೂರ್ನಿ ಆಯೋಜನೆ ಕುರಿತು ಯಾವುದೇ ಚಿಂತನೆಯಿಲ್ಲ. ಬಿಸಿಸಿಐ ಎಲ್ಲರ ಆರೋಗ್ಯದ ಕುರಿತು ಕಾಳಜಿ ವಹಿಸುತ್ತದೆ. ಬಿಸಿಸಿಐ, ಫ್ರಾಂಚೈಸಿ, ಪ್ರಸಾರ ಹಕ್ಕು ಪಡೆದಿರುವ ಸ್ಟಾರ್ ಸ್ಪೋರ್ಟ್ ವಾಹನಿ ಎಲ್ಲರೂ ಜೊತೆಯಾಗಿ ನಿರ್ಧಾರ ತೆಗೆದುಕೊಳ್ಳಲಾಗಿದೆ. ಕೊರೋನಾ ಹತೋಟಿಗೆ ಬರುವ ವರೆಗೆ ಐಪಿಎಲ್ ಆಯೋಜನೆ ಇಲ್ಲ ಎಂದು ಬಿಸಿಸಿಐ ಕಾರ್ಯದರ್ಶಿ ಜಯ್ ಶಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಧೋನಿ ಅಪರೂಪದ ವಜ್ರ, ನಿವೃತ್ತಿಗೆ ಒತ್ತಡ ಹೇರಬೇಡಿ ಎಂದ ಇಂಗ್ಲೆಂಡ್ ಮಾಜಿ ನಾಯಕ!...

ಕೊರೋನಾ ನಿಯಂತ್ರಣಕ್ಕೆ ಬಂದ ಬಳಿಕ ಬಿಸಿಸಿಐ, ಕೇಂದ್ರ ಸರ್ಕಾರ, ರಾಜ್ಯ ಸರ್ಕಾರ ಹಾಗೂ ವಿವಿದ ಇಲಾಖೆ ಜೊತೆ ಸಮಾಲೋಚನೆ ನಡೆಸಿ ಮುಂದಿನ ನಿರ್ಧಾರ ಕೈಗೊಳ್ಳಲಿದೆ ಎಂದು ಪ್ರಕಟಣೆಯಲ್ಲಿ ಬಿಸಿಸಿಐ ತಿಳಿಸಿದೆ.

ಕೊರೋನಾ ವೈರಸ್ ಕಾರಣ ಎಲ್ಲಾ ಕ್ರೀಡಾಟಕೂಟಗಳು ರದ್ದಾಗಿದೆ. ಕೊರೋನಾ ಭಾರತಕ್ಕೆ ಹರಡಿದ ಆರಂಭದ ದಿನಗಳಲ್ಲಿ ಭಾರತ-ಸೌತ್ ಆಫ್ರಿಕಾ ನಡುವಿನ ಸರಣಿ ರದ್ದಾಗಿತ್ತು. ಇದಾದ ಬಳಿಕ ಐಪಿಎಲ್ ಮುಂದೂಡಲಾಗಿತ್ತು. ಇದೀಗ ಐಪಿಎಲ್ ತಾತ್ಕಾಲಿಕ ರದ್ದು ಮಾಡಲಾಗಿದೆ. 

PREV

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ವಿರಾಟ್ ಕೊಹ್ಲಿಯಲ್ಲ, ಈ ಆಟಗಾರ ಹೆಚ್ಚು ಹಾರ್ಡ್‌ ವರ್ಕ್ ಮಾಡುವ ಆಟಗಾರ ಎಂದ ಯಶಸ್ವಿ ಜೈಸ್ವಾಲ್!
14 ವರ್ಷದ ವೈಭವ್ ಸೂರ್ಯವಂಶಿ 95 ಎಸೆತಕ್ಕೆ 171; ಯುವ ಭಾರತಕ್ಕೆ 234 ರನ್ ಜಯ!