
ಮುಂಬೈ(ಏ.05): ಕೊರೋನಾ ಪ್ರಕರಣಗಳು ಗಣನೀಯ ಪ್ರಮಾಣದಲ್ಲಿ ಹೆಚ್ಚುತ್ತಿದ್ದರೂ, ಮುಂಬೈನಿಂದ ಐಪಿಎಲ್ 14ನೇ ಆವೃತ್ತಿಯ ಪಂದ್ಯಗಳನ್ನು ಸ್ಥಳಾಂತರ ಮಾಡುವುದಿಲ್ಲ ಎಂದು ಮುಂಬೈ ಕ್ರಿಕೆಟ್ ಸಂಸ್ಥೆ (ಎಂಸಿಎ) ಕಾರ್ಯದರ್ಶಿ ಸಂಜಯ್ ನಾಯ್ಕ್ ಹೇಳಿದ್ದಾರೆ.
ವಾಂಖೇಡೆ ಕ್ರೀಡಾಂಗಣದ 10 ಮೈದಾನ ಸಿಬ್ಬಂದಿಗೆ ಸೋಂಕು ತಗುಲಿದ್ದು, ಮತ್ತೊಂದು ಜನಕ್ಕೆ ಹರಡಿರುವ ಆತಂಕವಿದೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ನಾಯ್ಕ್, ‘ವಾಂಖೇಡೆ ಕ್ರೀಡಾಂಗಣಕ್ಕೆ ಈ ವರೆಗೂ ಯಾರಿಗೂ ಪ್ರವೇಶ ನೀಡಿಲ್ಲ. ಸೋಮವಾರ ಮತ್ತೊಮ್ಮೆ ಎಲ್ಲಾ ಸಿಬ್ಬಂದಿಗೂ ಪರೀಕ್ಷೆ ನಡೆಸಿ, ಪಾಸಿಟಿವ್ ಬಂದವರನ್ನು ಚಿಕಿತ್ಸೆಗೆ ಕಳುಹಿಸುತ್ತೇವೆ. ವರದಿ ನೆಗೆಟಿವ್ ಇದ್ದವರು ಮುಂಬೈ ಚರಣ ಮುಗಿಯುವ ವರೆಗೂ ಕ್ರೀಡಾಂಗಣದಲ್ಲೇ ಇರಲಿದ್ದಾರೆ’ ಎಂದಿದ್ದಾರೆ.
ಕ್ರಿಕೆಟಿಗರಿಗೆ ಕೊರೋನಾ ಲಸಿಕೆ; ಕೇಂದ್ರ ಆರೋಗ್ಯ ಇಲಾಖೆ ಜೊತೆ ಬಿಸಿಸಿಐ ಮಾತುಕತೆ!
ಇದೇ ವೇಳೆ ಪಂದ್ಯಗಳನ್ನು ಮುಂಬೈನಿಂದ ಸ್ಥಳಾಂತರಿಸಲು ಬಿಸಿಸಿಐ ಇಚ್ಛಿಸಿದರೆ, ಆತಿಥ್ಯ ವಹಿಸಲು ಸಿದ್ಧವಿರುವುದಾಗಿ ಹೈದರಾಬಾದ್ ಕ್ರಿಕೆಟ್ ಸಂಸ್ಥೆ ಅಧ್ಯಕ್ಷ ಮೊಹಮದ್ ಅಜರುದ್ದೀನ್ ತಿಳಿಸಿದ್ದಾರೆ. 14ನೇ ಆವೃತ್ತಿಯ ಐಪಿಎಲ್ ಟೂರ್ನಿಯು ಏಪ್ರಿಲ್ 09ರಿಂದ ಆರಂಭವಾಗಲಿದ್ದು, ಉದ್ಘಾಟನಾ ಪಂದ್ಯದಲ್ಲಿ ಹಾಲಿ ಚಾಂಪಿಯನ್ ಮುಂಬೈ ಇಂಡಿಯನ್ಸ್ ಹಾಗೂ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಗಳು ಸೆಣಸಾಡಲಿವೆ.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗೂ ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.