
ದುಬೈ(ಸೆ.19); ಐಪಿಎಲ್ 2021ರ 2ನೇ ಭಾಗ ಅದ್ಧೂರಿಯಾಗಿ ಆರಂಭಗೊಂಡಿದೆ. ಮೊದಲ ಪಂದ್ಯವೇ ಅತ್ಯಂತ ರೋಚಕ ಹೋರಾಟದೊಂದಿದೆ ಅಭಿಮಾನಿಗಳಿಗೆ ಫುಲ್ ಎಂಟರ್ಟೆನ್ಮೆಂಟ್ ನೀಡಿದೆ. ಮುಂಬೈ ಇಂಡಿಯನ್ಸ್ ವಿರುದ್ಧ ಆರಂಭದಲ್ಲಿ ಕಳಪೆ ಬ್ಯಾಟಿಂಗ್ ಪ್ರದರ್ಶನ ನೀಡುವ ಮೂಲಕ ಸೋಲಿನ ಸುಳಿಗೆ ಸಿಲುಕಿದ್ದ ಚೆನ್ನೈ, ದಿಟ್ಟ ಪ್ರದರ್ಶನದ ಮೂಲಕ ಗೆಲವು ಸಾಧಿಸಿದೆ. ರುತುರಾಜ್ ಗಾಯಕ್ವಾಡ್ ಬ್ಯಾಟಿಂಗ್ ಹಾಗೂ ಧೋನಿ ಚಾಣಾಕ್ಷ ನಾಯಕತ್ವದಿಂದ ಚೆನ್ನೈ 20 ರನ್ ಗೆಲವು ಕಂಡಿದೆ. ಈ ಗೆಲುವಿನೊಂದಿಗೆ ಚೆನ್ನೈ ಅಂಕಪಟ್ಟಿಯಲ್ಲಿ ಮತ್ತೆ ಮೊದಲ ಸ್ಥಾನಕ್ಕೇರಿದೆ.
ವಿರಾಟ್ ಕೊಹ್ಲಿ ಬಳಿಕ RCB ನಾಯಕರಾಗೋರು ಯಾರು..? ಇಲ್ಲಿವೆ 5 ಉತ್ತಮ ಆಯ್ಕೆಗಳು..!
ರುತುರಾತ್ ಗಾಯಕ್ವಾಡ್ ಅಜೇಯ 88 ರನ್ ದಿಟ್ಟ ಹೋರಾಟದಿಂದ ಚೆನ್ನೈ ಸೂಪರ್ ಕಿಂಗ್ಸ್, ಮುಂಬೈ ಇಂಡಿಯನ್ಸ್ 157 ರನ್ ಟಾರ್ಗೆಟ್ ನೀಡಿತ್ತು. ಈ ಗುರಿ ಚೇಸ್ ಮಾಡಲು ಕಣಕ್ಕಿಳಿದ ಮುಂಬೈ ನಿರೀಕ್ಷಿತ ಆರಂಭ ಪಡೆಯಲಿಲ್ಲ. ಕ್ವಿಂಟನ್ ಡಿಕಾಕ್ 17 ರನ್ ಸಿಡಿಸಿ ಔಟಾದರು. ಇತ್ತ ರೋಹಿತ್ ಶರ್ಮಾ ಬದಲು ಸ್ಥಾನ ಪಡೆದ ಅನ್ಮೋಲ್ಪ್ರೀತ್ ಸಿಂಗ್ 16 ರನ್ ಸಿಡಿಸಿ ಔಟಾದರು.
ಸೂರ್ಯಕುಮಾರ್ ಯಾದವ್ 3, ಇಶಾನ್ ಕಿಶನ್ 11 ರನ್ ಸಿಡಿಸಿ ಔಟಾದರು. ಆದರೆ ಸೌರಬ್ ತಿವಾರಿ ಏಕಾಂಗಿ ಹೋರಾಟ ಆರಂಭಗೊಂಡಿತು. ಇತ್ತ ನಾಯಕ ಕೀರನ್ ಪೊಲಾರ್ಡ್ ಕೇವಲ 15 ರನ್ ಸಿಡಿಸಿ ಔಟಾದರು. ಇತ್ತ ದುಬಾರಿ ಬೌಲಿಂಗ್ ಹಣೆ ಪಟ್ಟಿ ಹೊತ್ತುಕೊಂಡ ಕ್ರುನಾಲ್ ಪಾಂಡ್ಯ ಬ್ಯಾಟಿಂಗ್ನಲ್ಲೂ ಮಿಂಚಲಿಲ್ಲ. ಕ್ರುನಾಲ್ 4 ರನ್ ಸಿಡಿಸಿ ರನೌಟ್ ಆದರು.
ಮುಂಬೈ ಗೆಲುವಿಗೆ ಅಂತಿಮ 12 ಎಸೆತದಲ್ಲಿ 39 ರನ್ ಅವಶ್ಯಕತೆ ಇತ್ತು. ಸೌರವ್ ತಿವಾರಿ ಹಾಗೂ ಆ್ಯಡಮ್ ಮಿಲ್ನೆ ಬಿರುಸಿನ ಬ್ಯಾಟಿಂಗ್ ಪ್ರದರ್ಶನಕ್ಕೆ ಮುಂದಾದರು. ಬೌಂಡರಿ, ಸಿಕ್ಸರ್ ಅಬ್ಬರ ಆರಂಭಗೊಂಡಿತು. ಹೊಡಿಬಡಿ ಆಟದಲ್ಲಿ 15 ರನ್ ಸಿಡಿಸಿ ಮಿಲ್ನೆ ವಿಕೆಟ್ ಪತನಗೊಂಡಿತು.
ರಾಹುಲ್ ಚಹಾರ್ ವಿಕೆಟ್ ಪತನಗೊಂಡಿತು. ಇತ್ತ ತಿವಾರಿ ಹಾಫ್ ಸೆಂಚುರಿ ಸಿಡಿಸಿ ಮಿಂಚಿದರು. ಅಷ್ಟರಲ್ಲಿ ಓವರ್ ಮುಕ್ತಾಯಗೊಂಡಿತು. ಮುಂಬೈ 8 ವಿಕೆಟ್ ನಷ್ಟಕ್ಕೆ 136 ರನ್ ಸಿಡಿಸಿ ಸೋಲೊಪ್ಪಿಕೊಂಡಿತು. ಚೆನ್ನೈ 20 ರನ್ ಗೆಲವಿನೊಂದಿಗೆ ಐಪಿಎಲ್ 2021ರ 2ನೇ ಭಾಗವನ್ನು ಗೆಲುವಿನೊಂದಿಗೆ ಆರಂಭಿಸಿದೆ.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗೂ ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.