IPL 2021 ಗುರು ಶಿಷ್ಯರ ಕಾದಾಟ: ಚೆನ್ನೈ ವಿರುದ್ಧ ಟಾಸ್ ಗೆದ್ದ ಡೆಲ್ಲಿ ಕ್ಯಾಪಿಟಲ್ಸ್!

Published : Apr 10, 2021, 07:02 PM ISTUpdated : Apr 10, 2021, 07:11 PM IST
IPL 2021 ಗುರು ಶಿಷ್ಯರ ಕಾದಾಟ: ಚೆನ್ನೈ ವಿರುದ್ಧ ಟಾಸ್ ಗೆದ್ದ ಡೆಲ್ಲಿ ಕ್ಯಾಪಿಟಲ್ಸ್!

ಸಾರಾಂಶ

ಐಪಿಎಲ್ 14ನೇ ಆವೃತಿಯ 2ನೇ ಪಂದ್ಯದಲ್ಲಿ ಧೋನಿ ನೇತೃತ್ವದ ಚೆನ್ನೈ ಸೂಪರ್ ಕಿಂಗ್ಸ್ ಹಾಗೂ ರಿಷಬ್ ಪಂತ್ ನಾಯಕತ್ವದ ಡೆಲ್ಲಿ ಕ್ಯಾಪಿಟಲ್ಸ್ ಹೋರಾಟಕ್ಕೆ ಸಜ್ಜಾಗಿದೆ. ಮಹತ್ವದ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್  ಟಾಸ್ ಗೆದ್ದಿದೆ. ಹೆಚ್ಚಿನ ವಿವರ ಈ ಕೆಳಗಿದೆ.

ಚೆನ್ನೈ(ಏ.10): ಐಪಿಎಲ್ 2021 ಟೂರ್ನಿ ಮೊದಲ ದಿನವೇ ರೋಚಕ ಪಂದ್ಯಕ್ಕೆ ಸಾಕ್ಷಿಯಾಗಿತ್ತು. ಇದೀಗ ಮತ್ತೊಂದು ಕುತೂಹಕಲ ಹೋರಾಟಕ್ಕೆ 2ನೇ ಪಂದ್ಯವೂ ಸಾಕ್ಷಿಯಾಗಲಿದೆ. ಕಾರಣ ಚೆನ್ನೈ ಸೂಪರ್ ಕಿಂಗ್ಸ್ ಹಾಗೂ ಡೆಲ್ಲಿ ಕ್ಯಾಪಿಟಲ್ಸ್ ಹೋರಾಟ. ಈ ಪಂದ್ಯದಲ್ಲಿ ಟಾಸ್ ಗೆದ್ದ ಡೆಲ್ಲಿ ಕ್ಯಾಪಿಟಲ್ಸ್ ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿದೆ.

 

ಡೆಲ್ಲಿ ಪರ ಟಾಮ್ ಕುರನ್ ಪದಾರ್ಪಣೆ ಮಾಡಿದ್ದಾರೆ. ಇನ್ನು ಚೆನ್ನೈ ತಂಡದಲ್ಲಿ ಫಾಫ್ ಡುಪ್ಲೆಸಿಸ್, ಮೊಯಿನ್ ಆಲಿ, ಸ್ಯಾಮ್ ಕುರನ್, ಡ್ವೇನ್ ಬ್ರಾವೋ ನಾಲ್ವರು ವಿದೇಶಿ ಆಟಗಾರರಾಗಿ ಕಣಕ್ಕಿಳಿಯುತ್ತಿದ್ದಾರೆ.

 

ಕಳೆದ ಬಾರಿ ಡೆಲ್ಲಿ ಕ್ಯಾಪಿಟಲ್ಸ್ ಶ್ರೇಯಸ್ ಅಯ್ಯರ್ ನಾಯತ್ವದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಅದ್ಭುತ  ಪ್ರದರ್ಶನ ನೀಡಿತ್ತು. ಆದರೆ ಈ ಬಾರಿ ಶ್ರೇಯಸ್ ಅಯ್ಯರ್ ಇಂಜುರಿಯಾಗಿರುವ ಕಾರಣ, ರಿಷಬ್ ಪಂತ್‌ಗೆ ನಾಯಕತ್ವ ನೀಡಲಾಗಿದೆ. ಇತ್ತ ಕಳೆದ ಆವೃತ್ತಿಯಲ್ಲಿ ಲೀಗ್ ಹಂತದಿಂದ ನಿರ್ಗಮಿಸಿದ ಚೆನ್ನೈ ಸೂಪರ್ ಕಿಂಗ್ಸ್ ಈ ಬಾರಿ ಮತ್ತೆ ಚಾಂಪಿಯನ್ ಕಿರೀಟ ಮುಡಿಗೇರಿಸಲು ಹೋರಾಟ ನಡೆಸಲಿದೆ.

PREV

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಸಂಕಷ್ಟ ನಿವಾರಣೆಗೆ ಸಿಂಹಾಚಲಂ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿದ ವಿರಾಟ್ ಕೊಹ್ಲಿ
ಕರ್ನಾಟಕ ರಾಜ್ಯ ಕ್ರಿಕೆಟ್‌ ಸಂಸ್ಥೆಗೆ ವೆಂಕಟೇಶ್ ಪ್ರಸಾದ್ ಅಧ್ಯಕ್ಷ, ಚುನಾವಣಾ ಫಲಿತಾಂಶ ಪ್ರಕಟ