
ಚೆನ್ನೈ(ಏ.25): ಸನ್ರೈಸರ್ಸ್ ಹೈದರಾಬಾದ್ ವಿರುದ್ಧದ ಲೀಗ್ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಟಾಸ್ ಗೆದ್ದು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದೆ. ಡೆಲ್ಲಿ ತಂಡದಲ್ಲಿ ಒಂದು ಬದಲಾವಣೆ ಮಾಡಲಾಗಿದೆ. ಕೊರೋನಾದಿಂದ ಚೇತರಿಸಿಕೊಂಡಿರುವ ಆಕ್ಸರ್ ಪಟೇಲ್ ತಂಡ ಸೇರಿಕೊಂಡಿದ್ದಾರೆ. ಇನ್ನು ಹೈದರಾಬಾದ್ ತಂಡದಲ್ಲಿ ಒಂದು ಬದಲಾವಣೆ ಮಾಡಲಾಗಿದೆ. ಭುವನೇಶ್ವರ್ ಕುಮಾರ್ ಬದಲು ಕನ್ನಡಿಗ ಜೆ ಸುಚಿತ್ ತಂಡ ಸೇರಿಕೊಂಡಿದ್ದಾರೆ.
ಡೆಲ್ಲಿ ಕ್ಯಾಪಿಟಲ್ಸ್ ಆಡಿದ 4 ಪಂದ್ಯದಲ್ಲಿ 3 ಗೆಲುವು ಕಂಡಿದೆ. ಇನ್ನು ಒಂದು ಪಂದ್ಯದಲ್ಲಿ ಸೋಲು ಅನುಭವಿಸಿದೆ. 8 ಅಂಕ ಪಡೆದಿರುವ ಡೆಲ್ಲಿ ಈ ಬಾರಿಯ ಐಪಿಎಲ್ ಟೂರ್ನಿಯಲ್ಲಿ ಬಲಿಷ್ಠ ತಂಡ ಎನಿಸಿಕೊಂಡಿದೆ. ಇತ್ತ ಸನ್ರೈಸರ್ಸ್ ಹೈದರಾಬಾದ್ ತಂಡ ಬಲಿಷ್ಠವಾಗಿದ್ದರೂ, ಗೆಲುವು ದೂರದ ಮಾತಾಗಿದೆ.
ಆಡಿದ 4 ಪಂದ್ಯದಲ್ಲಿ ಹೈದರಾಬಾದ್ ಕೇವಲ 1 ಗೆಲುವು ಕಂಡಿದೆ. ಡೆಲ್ಲಿ ವಿರುದ್ಧ ಅದ್ಭುತ ಪ್ರದರ್ಶನ ನೀಡೋ ಮೂಲಕ ಭರ್ಜರಿ ಗೆಲುವನ್ನು ಎದುರುನೋಡುತ್ತಿದೆ.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗೂ ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.