
ಅಹಮ್ಮದಾಬಾದ್(ಏ.26): ಪಂಜಾಬ್ ಕಿಂಗ್ಸ್ ತಂಡವನ್ನು ಅಲ್ಪಮೊತ್ತಕ್ಕೆ ಕಟ್ಟಿಹಾಕಿದ ಕೆಕೆಆರ್ 5 ವಿಕೆಟ್ ಕಳೆದುಕೊಂಡು 16.4 ಓವರ್ಗಳಲ್ಲಿ ಗುರಿ ತಲುಪಿದೆ. ಈ ಗೆಲುವಿನೊಂದಿಗೆ ಕೆಕೆಆರ್ ಅಂಕಪಟ್ಟಿಯಲ್ಲಿ 5ನೇ ಸ್ಥಾನಕ್ಕೇರಿದೆ.
ಗೆಲುವಿಗೆ 124 ರನ್ ಟಾರ್ಗೆಟ್ ಪಡೆದಿದ್ದ ಕೆಕೆಆರ್ ಯಾವುದೇ ಆತಂಕವಿಲ್ಲದೆ ಬ್ಯಾಟಿಂಗ್ ಇಳಿಯಿತು. ಆದರೆ ಆರಂಭದಲ್ಲೇ ಶುಬ್ಮನ್ ಗಿಲ್ ಹಾಗೂ ನಿತೀಶ್ ರಾಣಾ ವಿಕೆಟ್ ಕಳೆದುಕೊಂಡಿತು. ಇದು ಕೆಕೆಆರ್ ಆತಂಕ ಹೆಚ್ಚಿಸಿತು. 9 ರನ್ಗೆ 2 ವಿಕೆಟ್ ಕಳೆದುಕೊಂಡ ಕೆಕೆಆರ್ ತಂಡಕ್ಕೆ ರಾಹುಲ್ ತ್ರಿಪಾಠ್ ಆಸರೆಯಾದರು.
ಇತ್ತ ಸುನಿಲ್ ನರೈನ್ ಡಕೌಟ್ ಆದರು. ಆದರೆ ತ್ರಿಪಾಠಿ ಬ್ಯಾಟಿಂಗ್ ಕೆಕೆಆರ್ ತಂಡದ ಆತ್ಮವಿಶ್ವಾಸ ಹೆಚ್ಚಿಸಿತು. ರಾಹುಲ್ ತ್ರಿಪಾಠಿ 41 ರನ್ ಸಿಡಿಸಿ ಔಟಾದರು. ನಾಯಕ ಇಯಾನ್ ಮಾರ್ಗನ್ ಹಾಗೂ ಆ್ಯಂಡ್ರೆ ರಸೆಲ್ ಜೊತೆಯಾಟ ಕೆಕೆಆರ್ ಗೆಲುವಿನ ಹಾದಿ ಸುಗಮಗೊಳಿಸಿತು.
ರಸೆಲ್ ಕೇವಲ 10 ರನ್ ಸಿಡಿಸಿ ರನೌಟ್ಗೆ ಬಲಿಯಾದರು. ದಿನೇಶ್ ಕಾರ್ತಿಕ್ ಜೊತೆ ಸೇರಿ ಇಯಾನ್ ಮಾರ್ಗನ್ ತಂಡವನ್ನು ಗೆಲುವಿನತ್ತ ಕೊಂಡೊಯ್ದರು. ಮಾರ್ಗನ್ ಅಜೇಯ 47 ರನ್ ಸಿಡಿಸಿದರೆ, ಕಾರ್ತಿಕ್ ಅಜೇಯ 12 ರನ್ ಸಿಡಿಸಿದರು. ಈ ಮೂಲಕ 16.4 ಓವರ್ಗಳಲ್ಲಿ 5 ವಿಕೆಟ್ ಕಳೆದುಕೊಂಡು ಗೆಲುವು ಸಾಧಿಸಿತು.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗೂ ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.