ಐಪಿಎಲ್ 2021: 'ಆಸ್ಟ್ರೇಲಿಯಾ ಆಟಗಾರರನ್ನು ಸುರಕ್ಷಿತವಾಗಿ ಕಳಿಸಿಕೊಟ್ಟಿದ್ದಕ್ಕೆ ಥ್ಯಾಂಕ್ಯೂ'

Suvarna News   | Asianet News
Published : May 17, 2021, 03:33 PM IST
ಐಪಿಎಲ್ 2021: 'ಆಸ್ಟ್ರೇಲಿಯಾ ಆಟಗಾರರನ್ನು ಸುರಕ್ಷಿತವಾಗಿ ಕಳಿಸಿಕೊಟ್ಟಿದ್ದಕ್ಕೆ ಥ್ಯಾಂಕ್ಯೂ'

ಸಾರಾಂಶ

* ಕಾಂಗರೂ ನಾಡಿಗೆ ಬಂದಿಳಿದ ಆಸ್ಟ್ರೇಲಿಯಾ ಕ್ರಿಕೆಟಿಗರು * ಐಪಿಎಲ್‌ನಲ್ಲಿ ಪಾಲ್ಗೊಂಡಿದ್ದ 38 ಮಂದಿ ತವರಿಗೆ ವಾಪಾಸ್‌ * ಮಾಲ್ಡೀವ್ಸ್‌ನಿಂದ ಸುರಕ್ಷಿತವಾಗಿ ಆಟಗಾರರನ್ನು ತವರಿಗೆ ಕಳಿಸಿಕೊಟ್ಟ ಬಿಸಿಸಿಐ

ಮೆಲ್ಬರ್ನ್‌(ಮೇ.17): ಆಸ್ಟ್ರೇಲಿಯಾ ಕ್ರಿಕೆಟಿಗರನ್ನು ಹಾಗೂ ಸಹಾಯಕ ಸಿಬ್ಬಂದಿಗಳನ್ನು ಮಾಲ್ಡೀವ್ಸ್‌ನಿಂದ ಸುರಕ್ಷಿತವಾಗಿ ಹಾಗೂ ತ್ವರಿತವಾಗಿ ತವರಿಗೆ ಕಳಿಸಿಕೊಟ್ಟ ಬಿಸಿಸಿಐಗೆ ಕ್ರಿಕೆಟ್ ಆಸ್ಟ್ರೇಲಿಯಾ ಹಂಗಾಮಿ ಕಾರ್ಯನಿರ್ವಾಹಕಾಧಿಕಾರಿ(ಸಿಇಒ) ನಿಕ್‌ ಹಾಕ್ಲೇ ಧನ್ಯವಾದಗಳನ್ನು ಅರ್ಪಿಸಿದ್ದಾರೆ.

ಮೇ ತಿಂಗಳಾರಂಭದಲ್ಲೇ ಕೋವಿಡ್‌ ಕಾರಣದಿಂದಾಗಿ 14ನೇ ಆವೃತ್ತಿಯ ಐಪಿಎಲ್‌ ಟೂರ್ನಿಯನ್ನು ಬಿಸಿಸಿಐ ಅನಿರ್ದಿಷ್ಟಾವಧಿಗೆ ಮುಂದೂಡಿದೆ. ಇದರ ಬೆನ್ನಲ್ಲೇ ಆಸ್ಟ್ರೇಲಿಯಾದ ಆಟಗಾರರು ಹಾಗೂ ಸಿಬ್ಬಂದಿಗಳನ್ನೊಳಗೊಂಡ 38 ಮಂದಿ ಮಾಲ್ಡೀವ್ಸ್‌ಗೆ ಪ್ರಯಾಣ ಬೆಳೆಸಿದ್ದರು. ಈ ತಂಡದಲ್ಲಿದ್ದ ಸ್ಟೀವ್ ಸ್ಮಿತ್, ಡೇವಿಡ್ ವಾರ್ನರ್, ಪ್ಯಾಟ್ ಕಮಿನ್ಸ್, ಗ್ಲೆನ್‌ ಮ್ಯಾಕ್ಸ್‌ ಹಾಗೂ ರಿಕಿ ಪಾಂಟಿಂಗ್ ಸೇರಿದಂತೆ ಎಲ್ಲಾ 38 ಮಂದಿಯು ಇಂದು(ಮೇ.17) ಬೆಳಗ್ಗೆ ಸಿಡ್ನಿಗೆ ಬಂದಿಳಿದಿದ್ದಾರೆ. ಭಾರತದಿಂದ ಅಸ್ಟ್ರೇಲಿಯಾಗೆ ವಿಮಾನ ಹಾರಾಟವನ್ನು ಆಸ್ಟ್ರೇಲಿಯಾ ಸರ್ಕಾರ ನಿರ್ಬಂಧಿಸಿದ್ದರಿಂದ, ಆಸೀಸ್‌ ಕ್ರಿಕೆಟಿಗರು ಹಾಗೂ ಸಿಬ್ಬಂದಿ ಮಾಲ್ಡೀವ್ಸ್‌ಗೆ ಪ್ರಯಾಣ ಬೆಳೆಸಿ, ಅಲ್ಲಿ 14 ದಿನಗಳ ಕ್ವಾರಂಟೈನ್ ಮುಗಿಸಿ ಆಸ್ಟ್ರೇಲಿಯಾಗೆ ಬಂದಿಳಿದಿದ್ದಾರೆ.

ವಿಂಡೀಸ್ ಪ್ರವಾಸಕ್ಕೆ ಬಲಿಷ್ಠ ಆಸ್ಟ್ರೇಲಿಯಾ ಕ್ರಿಕೆಟ್ ತಂಡ ಪ್ರಕಟ

ಇನ್ನು ಚೆನ್ನೈ ಸೂಪರ್ ಕಿಂಗ್ಸ್‌ ತಂಡದ ಬ್ಯಾಟಿಂಗ್ ಕೋಚ್ ಮೈಕ್ ಹಸ್ಸಿ ಮತ್ತೊಂದು ವಿಮಾನದಲ್ಲಿ ಕಾಂಗರೂ ನಾಡಿಗೆ ಬಂದಿಳಿಯಲಿದ್ದಾರೆ. ಆಟಗಾರರು ಹಾಗೂ ಸಹಾಯಕ ಸಿಬ್ಬಂದಿ ಸುರಕ್ಷಿತವಾಗಿ ತವರಿಗೆ ಬಂದಿಳಿಯುತ್ತಿದ್ದಂತೆಯೇ ನಿಕ್‌ ಹಾಕ್ಲೇ, ನಮಗೆ ನಿಜಕ್ಕೂ ಸಂತೋಷವಾಗಿದೆ. ಸುರುಕ್ಷಿತವಾಗಿ ಹಾಗೂ ತ್ವರಿತವಾಗಿ ನಮ್ಮನ್ನು ತವರಿಗೆ ಕಳಿಸಿಕೊಟ್ಟಿದ್ದಕ್ಕೆ ಬಿಸಿಸಿಐಗೆ ನಾವು ಆಭಾರಿಗಳಾಗಿದ್ದೇವೆ. ಅವರೆಲ್ಲರೂ ಆಸ್ಟ್ರೇಲಿಯಾಗೆ ಬಂದಿಳಿದಿದ್ದರೂ, ನಾನಿನ್ನು ನಮ್ಮ ಆಟಗಾರರ ಜತೆ ಮಾತುಕತೆ ನಡೆಸಿಲ್ಲ. ಆದರೆ ಅವರೆಲ್ಲರೂ ವಾಪಾಸ್‌ ತವರಿಗೆ ಮರಳಿದ್ದಕ್ಕೆ ಖಂಡಿತವಾಗಿಯೂ ಖುಷಿಯಾಗಿದ್ದಾರೆ ಎನ್ನುವುದಂತೂ ಸತ್ಯ ಎಂದು ಸಿಡ್ನಿ ಮಾರ್ನಿಂಗ್‌ ಹೆರಾರ್ಲ್ಡ್‌ಗೆ ಪ್ರತಿಕ್ರಿಯೆ ನೀಡಿದ್ದಾರೆ.

ಇದೀಗ ಆಸ್ಟ್ರೇಲಿಯಾಗೆ ಬಂದಿಳಿದ ಎಲ್ಲಾ 38 ಮಂದಿಯು 14 ದಿನಗಳ ಕಾಲ ಕಡ್ಡಾಯ ಹೋಟೆಲ್‌ ಕ್ವಾರಂಟೈನ್‌ಗೆ ಒಳಗಾಗಬೇಕಿದೆ. 

ಸೂಚನೆ: ಕೊರೋನಾ ಮಹಾಮಾರಿ ಎಲ್ಲೆಡೆ ಹರಡುತ್ತಿದೆ. ಹೀಗಿರುವಾಗ ಎಲ್ಲರೂ ತಪ್ಪದೇ ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ ಹಾಗೂ ಲಸಿಕೆ ಪಡೆಯಿರಿ ಎಂಬುವುದು ಏಷ್ಯಾನೆಟ್‌ ನ್ಯೂಸ್‌ ಕಳಕಳಿಯ ವಿನಂತಿ. ಒಗ್ಗಟ್ಟಿನಿಂದ ನಾವು ಈ ಕೊರೋನಾ ಸರಪಳಿ ಮುರಿಯೋಣ #ANCares #IndiaFightsCorona
 

PREV

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ದೇಶದ ಅಗ್ರ ಟಿ20 ಟೂರ್ನಿಯಲ್ಲೇ ಮ್ಯಾಚ್‌ ಫಿಕ್ಸಿಂಗ್‌, ನಾಲ್ವರು ಕ್ರಿಕೆಟಿಗರ ಸಸ್ಪೆಂಡ್‌ ಮಾಡಿ ತನಿಖೆಗೆ ಆದೇಶಿಸಿದ ಬಿಸಿಸಿಐ!
ಹೃತಿಕ್‌ ರೋಶನ್‌ 'ಕ್ರಿಶ್‌' ಸಿನಿಮಾದಲ್ಲಿ ಬಾಲನಟಿಯಾಗಿದ್ರಾ ಧೋನಿ ಪತ್ನಿ ಸಾಕ್ಷಿ?