IPL 2021 ಕೋವಿಡ್‌ನಿಂದ ಕೆಕೆಆರ್‌ನ ನಿತೀಶ್ ರಾಣಾ ಗುಣಮುಖ

Suvarna News   | Asianet News
Published : Apr 02, 2021, 03:18 PM ISTUpdated : Apr 02, 2021, 03:20 PM IST
IPL 2021 ಕೋವಿಡ್‌ನಿಂದ ಕೆಕೆಆರ್‌ನ ನಿತೀಶ್ ರಾಣಾ ಗುಣಮುಖ

ಸಾರಾಂಶ

14ನೇ ಆವೃತ್ತಿಯ ಐಪಿಎಲ್‌ ಟೂರ್ನಿಗೂ ಮುನ್ನ ಕೋಲ್ಕತ ನೈಟ್‌ ರೈಡರ್ಸ್‌ ತಂಡ ಕೆಲಕಾಲ ಆತಂಕಕ್ಕೆ ಈಡಾಗಿತ್ತು. ಆದರೆ ನಿತೀಶ್‌ ರಾಣಾ ಕೋವಿಡ್‌ ಟೆಸ್ಟ್ ವರದಿ ನೆಗೆಟಿವ್‌ ಬರುತ್ತಿದ್ದಂತೆಯೇ ನೆಮ್ಮದಿಯ ನಿಟ್ಟುಸಿರು ಬಿಟ್ಟಿದೆ. ಈ ಕುರಿತಾದ ಒಂದು ರಿಪೋರ್ಟ್ ಇಲ್ಲಿದೆ ನೋಡಿ.

ಕೋಲ್ಕತಾ(ಏ.02): 14ನೇ ಆವೃತ್ತಿಯ ಐಪಿಎಲ್‌ ಆರಂಭಕ್ಕೂ ಮುನ್ನ ಎದುರಾಗಿದ್ದ ಆತಂಕ ದೂರಾಗಿದೆ. ಕೋಲ್ಕತಾ ನೈಟ್‌ರೈಡರ್ಸ್ ತಂಡದ ಬ್ಯಾಟ್ಸ್‌ಮನ್‌ ನಿತೀಶ್‌ ರಾಣಾ, ಕೊರೋನಾ ಸೋಂಕಿನಿಂದ ಗುಣಮುಖರಾಗಿದ್ದು, ಸದ್ಯದಲ್ಲೇ ಅಭ್ಯಾಸ ಆರಂಭಿಸಲಿದ್ದಾರೆ. 

ಮಾರ್ಚ್ 21ಕ್ಕೆ ಕೋವಿಡ್‌ ನೆಗೆಟಿವ್‌ ವರದಿಯೊಂದಿಗೆ ಮುಂಬೈಗೆ ಆಗಮಿಸಿದ್ದ ರಾಣಾ ಕ್ವಾರಂಟೈನ್‌ನಲ್ಲಿದ್ದರು. ಮಾರ್ಚ್ 22ರಂದು ನಡೆಸಿದ ಪರೀಕ್ಷೆಯಲ್ಲಿ ಅವರಿಗೆ ಸೋಂಕು ತಗುಲಿರುವುದು ದೃಢಪಟ್ಟ ಕಾರಣ ಅವರನ್ನು ಐಸೋಲೇಷನ್‌ನಲ್ಲಿ ಇರಿಸಲಾಗಿತ್ತು. ಸೋಂಕಿನ ಯಾವುದೇ ಲಕ್ಷಣಗಳು ಇಲ್ಲದಿದ್ದರೂ, ಡೆಲ್ಲಿ ಮೂಲದ ಆಟಗಾರನ ಮೇಲೆ ವೈದ್ಯರು ನಿಗಾ ವಹಿಸಿದ್ದರು. ಗುರುವಾರ ಮತ್ತೊಮ್ಮೆ ಪರೀಕ್ಷೆ ನಡೆಸಿದಾಗ ವರದಿ ನೆಗೆಟಿವ್‌ ಬಂದಿದೆ ಎಂದು ಕೆಕೆಆರ್‌ ತಂಡ ತಿಳಿಸಿದೆ.

IPL 2021: ಕೆಕೆಆರ್ ಸ್ಟಾರ್ ಆಟಗಾರನಿಗೆ ವಕ್ಕರಿಸಿದ ಕೊರೋನಾ ಹೆಮ್ಮಾರಿ.!

ಯುಎಇನಲ್ಲಿ ನಡೆದ 13ನೇ ಆವೃತ್ತಿಯ ಐಪಿಎಲ್‌ ಟೂರ್ನಿಯಲ್ಲಿ ಎಡಗೈ ಬ್ಯಾಟ್ಸ್‌ಮನ್‌ ನಿತೀಶ್‌ ರಾಣಾ 14 ಪಂದ್ಯಗಳನ್ನಾಡಿ 25.14ರ ಸರಾಸರಿಯಲ್ಲಿ 352 ರನ್‌ ಬಾರಿಸಿದ್ದರು. ಐಪಿಎಲ್‌ನಲ್ಲಿ ಡೆಲ್ಲಿ ಮೂಲದ ನಿತೀಶ್ ರಾಣಾ ಸ್ಥಿರ ಪ್ರದರ್ಶನ ತೋರಿದ್ದು, ಕಳೆದ 4 ಐಪಿಎಲ್‌ ಆವೃತ್ತಿಯಲ್ಲೂ ಸತತವಾಗಿ 300+ ರನ್‌ ಬಾರಿಸಿ ಗಮನ ಸೆಳೆದಿದ್ದಾರೆ. ಇದುವರೆಗೂ ಒಟ್ಟು 60 ಐಪಿಎಲ್‌ ಪಂದ್ಯಗಳನ್ನಾಡಿರುವ ರಾಣಾ 28.17ರ ಸರಾಸರಿಯಲ್ಲಿ 1,437 ರನ್‌ ಬಾರಿಸಿದ್ದಾರೆ.

ಏಪ್ರಿಲ್‌ 11ರಂದು ಇಯಾನ್‌ ಮಾರ್ಗನ್‌ ನೇತೃತ್ವದ ಕೋಲ್ಕತ ನೈಟ್ ರೈಡರ್ಸ್ ತಂಡ, ಡೇವಿಡ್‌ ವಾರ್ನರ್‌ ನೇತೃತ್ವದ ಸನ್‌ರೈಸರ್ಸ್‌ ಹೈದರಾಬಾದ್‌ ವಿರುದ್ದ ತನ್ನ ಮೊದಲ ಪಂದ್ಯವನ್ನು ಆಡಲಿದೆ. 

PREV

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಮೆಹೆಂದಿಯಾಗಿತ್ತು, ಆದರೆ ಮದುವೆಯಾಗಲ್ಲ: ಕೊನೆಗೂ Palash Muchhal ಜೊತೆಗಿನ ಸಂಬಂಧಕ್ಕೆ ತೆರೆ ಎಳೆದ Smriti Mandhana
ಚಿನ್ನಸ್ವಾಮಿಗೆ ಅಂತಾರಾಷ್ಟ್ರೀಯ ಮತ್ತು IPL ಪಂದ್ಯಗಳು ವಾಪಸ್; ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ