
ಅಹಮ್ಮದಬಾದ್(ಏ.30): ಕಿಂಗ್ಸ್ ಇಲೆವೆನ್ ಪಂಜಾಬ್ ತಂಡದ ಬ್ಯಾಟ್ಸ್ಮನ್ ವೈಫಲ್ಯದ ನಡುವೆ ನಾಯಕ ಕೆಲ್ಎಲ್ ರಾಹುಲ್ ಹಾಗೂ ಕ್ರಿಸ್ ಗೇಲ್ ಹೋರಾಟ ಪಂಜಾಬ್ ಕಿಂಗ್ಸ್ ತಂಡಕ್ಕೆ ನೆರವಾಯಿತು. ಹೀಗಾಗಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ವಿರುದ್ಧ ಪಂಜಾಬ್ 5 ವಿಕೆಟ್ ನಷ್ಟಕ್ಕೆ 179 ರನ್ ಸಿಡಿಸಿತು.
ರಾಹುಲ್ ಹಾಗೂ ಗೇಲ್ ದಿಟ್ಟ ಪ್ರದರ್ಶನ ನೀಡಿದರು. ಇತರರು ಸಾಥ್ ನೀಡಲಿಲ್ಲ. ಕ್ರಿಸ್ ಗೇಲ್ 46ರನ್ ಸಿಡಿಸಿ ಔಟಾದರು. ಆದರೆ ರಾಹುಲ್ ಹೋರಾಟ ಮುಂದುವರಿಯಿತು. ನಿಕೋಲಸ್ ಪೂರನ್, ದೀಪಕ್ ಹೂಡ, ಶಾರುಖ್ ಖಾನ್ ಆಸರೆಯಾಗಲಿಲ್ಲ.
ಗೇಲ್ ಬಳಿಕ ಏಕಾಂಗಿ ಹೋರಾಟ ನೀಡಿದ 57 ಎಸೆತದಲ್ಲಿ ಅಜೇಯ 91 ರನ್ ಸಿಡಿಸಿದರು. ಹರ್ಪ್ರೀತ್ ಬ್ರಾರ್ ಅಜೇಯ 25 ರನ್ ಸಿಡಿಸಿದರು. ಈ ಮೂಲಕ ಪಂಜಾಬ್ ಕಿಂಗ್ಸ್ 5 ವಿಕೆಟ್ ನಷ್ಟಕ್ಕೆ 179 ರನ್ ಸಿಡಿಸಿತು .
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗೂ ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.