ಐಪಿಎಲ್ 2021: ಲಕ್ಷ್ಮಿಪತಿ ಬಾಲಾಜಿ ಸೇರಿ ಸಿಎಸ್‌ಕೆ 3 ಮಂದಿಗೆ ಕೋವಿಡ್ ಪಾಸಿಟಿವ್..!

Published : May 03, 2021, 03:47 PM IST
ಐಪಿಎಲ್ 2021: ಲಕ್ಷ್ಮಿಪತಿ ಬಾಲಾಜಿ ಸೇರಿ ಸಿಎಸ್‌ಕೆ 3 ಮಂದಿಗೆ ಕೋವಿಡ್ ಪಾಸಿಟಿವ್..!

ಸಾರಾಂಶ

ಕೆಕೆಆರ್ ಬಳಿಕ ಇದೀಗ ಸಿಎಸ್‌ಕೆ ಪಾಳಯದಲ್ಲೂ ಕೊರೋನಾ ಭೀತಿ ಎದುರಾಗಿದ್ದು, ಸಿಎಸ್‌ಕೆಯ ಮೂರು ಮಂದಿಗೆ ಕೋವಿಡ್ 19 ಸೋಂಕು ದೃಢಪಟ್ಟಿದೆ. ಈ ಕುರಿತಾದ ಒಂದು ರಿಪೋರ್ಟ್ ಇಲ್ಲಿದೆ ನೋಡಿ.

ನವದೆಹಲಿ(ಮೇ.03): 14ನೇ ಆವೃತ್ತಿಯ ಐಪಿಎಲ್ ಟೂರ್ನಿಯಲ್ಲಿ ಬಯೋ-ಬಬಲ್‌ ನಿಯಮ ಉಲ್ಲಂಘನೆಯಾಗುತ್ತಿರುವ ಒಂದೊಂದೇ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಕೋಲ್ಕತ ನೈಟ್‌ ರೈಡರ್ಸ್‌ ತಂಡದ ಇಬ್ಬರು ಆಟಗಾರರಿಗೆ ಕೋವಿಡ್ 19 ಸೋಂಕು ದೃಢಪಟ್ಟ ಬೆನ್ನಲ್ಲೇ ಇದೀಗ ಚೆನ್ನೈ ಸೂಪರ್ ಕಿಂಗ್ಸ್‌ ಪಾಳಯದಲ್ಲೂ ಕೊರೋನಾ ವೈರಸ್ ಭೀತಿ ಎದುರಾಗಿದೆ.

ಹೌದು, ಚೆನ್ನೈ ಸೂಪರ್‌ ಕಿಂಗ್ಸ್‌ನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಕಾಶಿ ವಿಶ್ವನಾಥ್, ಬೌಲಿಂಗ್ ಕೋಚ್ ಲಕ್ಷ್ಮಿಪತಿ ಬಾಲಾಜಿ ಹಾಗೂ ಸಿಎಸ್‌ಕೆ ಬಸ್‌ ಕ್ಲೀನರ್‌ಗೆ ಕೋವಿಡ್ 19 ಸೋಂಕು ತಗುಲಿರುವುದು ದೃಢಪಟ್ಟಿದೆ. ಆದರೆ ಒಂದು ಸಮಾಧಾನಕರ ಸಂಗತಿಯೆಂದರೆ ಭಾನುವಾರ(ಮೇ.02) ನಡೆಸಿದ ಕೋವಿಡ್‌ ಟೆಸ್ಟ್‌ನಲ್ಲಿ ಈ ಮೂವರನ್ನು ಹೊರತುಪಡಿಸಿ ಉಳಿದೆಲ್ಲಾ ಆಟಗಾರರ ಕೋವಿಡ್ ಟೆಸ್ಟ್ ವರದಿ ನೆಗೆಟಿವ್ ಬಂದಿದೆ.

ಇಎಸ್‌ಪಿಎನ್‌ ಕ್ರಿಕ್‌ಇನ್ಫೋ ಪ್ರಕಾರ ಚೆನ್ನೈನ ಈ ಮೂವರು ಮಂದಿ ಸೋಮವಾರ(ಮೇ.03)ವಾದ ಇಂದು ಮತ್ತೊಮ್ಮೆ ಹೊಸದಾಗಿ ಕೋವಿಡ್ ಟೆಸ್ಟ್‌ಗೆ ಒಳಗಾಗಲಿದ್ದಾರೆ. ಒಂದು ವೇಳೆ ಮತ್ತೊಮ್ಮೆ ಪಾಸಿಟಿವ್ ಬಂದರೆ ಈ ಮೂವರು ಬಿಸಿಸಿಐ ಮಾರ್ಗಸೂಚಿಯಂತೆ 10 ದಿನಗಳ ಕಾಲ ಕಡ್ಡಾಯ ಕ್ವಾರಂಟೈನ್‌ಗೆ ಒಳಗಾಗಬೇಕಾಗುತ್ತದೆ. ಸಿಎಸ್‌ಕೆ ತಂಡದವರು ಬಯೋ ಬಬಲ್ ನಿಯಮ ಉಲ್ಲಂಘಿಸಿದ್ದಾರೆಯೇ ಎನ್ನುವ ಅನುಮಾನ ಇದೀಗ ಕಾಡಲಾರಂಭಿಸಿದೆ.

ಬ್ರೇಕಿಂಗ್ ನ್ಯೂಸ್: ಇಂದು ನಡೆಯಬೇಕಿದ್ದ ಆರ್‌ಸಿಬಿ-ಕೆಕೆಆರ್ ಪಂದ್ಯ ಮುಂದೂಡಿಕೆ..!

ಈಗಾಗಲೇ ಇಂದು(ಮೇ.03) ನಡೆಯಬೇಕಿದ್ದ ರಾಯಲ್ ಚಾಲೆಂಜರ್ಸ್‌ ಬೆಂಗಳೂರು ಹಾಗೂ ಕೋಲ್ಕತ ನೈಟ್‌ ರೈಡರ್ಸ್‌ ನಡುವಿನ ಪಂದ್ಯ ಕೋವಿಡ್ ಕಾರಣದಿಂದ ಮುಂದೂಡಲ್ಪಟ್ಟಿದೆ. ಕೆಕೆಆರ್ ತಂಡದ ವರುಣ್ ಚಕ್ರವರ್ತಿ ಹಾಗೂ ಸಂದೀಪ್ ವಾರಿಯರ್‌ಗೆ ಕೋವಿಡ್ 19 ಸೋಂಕು ದೃಢಪಟ್ಟಿದ್ದು ಐಪಿಎಲ್‌ ಟೂರ್ನಿಯನ್ನೇ ತಬ್ಬಿಬ್ಬಾಗುವಂತೆ ಮಾಡಿದೆ. ಈ ಇಬ್ಬರು ಆಟಗಾರರನ್ನು ಸದ್ಯ ಐಸೋಲೇಷನ್‌ನಲ್ಲಿ ಇಡಲಾಗಿದ್ದು, ಇವರೊಂದಿಗೆ ಪ್ರಾಥಮಿಕ ಸಂಪರ್ಕ ಹೊಂದಿರುವವರನ್ನು ಪತ್ತೆಹಚ್ಚಲಾಗುತ್ತಿದೆ.

ಒಟ್ಟಿನಲ್ಲಿ ಕೆಕೆಆರ್ ಹಾಗೂ ಸಿಎಸ್‌ಕೆ ಪಾಳಯದಲ್ಲಿ ಕೋವಿಡ್ ಪ್ರಕರಣಗಳು ಪತ್ತೆಯಾಗುತ್ತಿರುವುದು 14ನೇ ಆವೃತ್ತಿಯ ಐಪಿಎಲ್‌ ಟೂರ್ನಿಯ ಮೇಲೆ ಅನುಮಾನದ ತೂಗುಗತ್ತಿ ನೇತಾಡಲಾರಂಭಿಸಿದೆ. ಇದೇ ರೀತಿಯ ಪ್ರಕರಣಗಳು ಮತ್ತೆ ಮತ್ತೆ ಪತ್ತೆಯಾದರೆ ಟೂರ್ನಿ ಮುಂದೂಡಲ್ಪಟ್ಟರೂ ಅಚ್ಚರಿಪಡುವಂತಿಲ್ಲ.
 

PREV

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

BCCI Centre of Excellence: ಬೆಂಗಳೂರಲ್ಲಿದೆ ಭಾರತದ ಕ್ರಿಕೆಟ್‌ ಫ್ಯಾಕ್ಟ್ರಿ; ₹500 ಕೋಟಿ ವೆಚ್ಚ
IND vs SL, 1st Test: 30 ಟೆಸ್ಟ್, 30 ವೆನ್ಯೂ! ಸಚಿನ್ ಕ್ಲಬ್‌ಗೆ ಯಶಸ್ವಿ ಜೈಸ್ವಾಲ್ ಎಂಟ್ರಿ: ಇಲ್ಲಿದೆ ಕಂಪ್ಲೀಟ್ ಡಿಟೇಲ್ಸ್