
ದೆಹಲಿ(ಏ.28): ಡೇವಿಡ್ ವಾರ್ನರ್ ಹಾಗೂ ಮನೀಶ್ ಪಾಂಡೆ ಹೋರಾಟ ಕುಸಿದ ಸನ್ರೈಸರ್ಸ್ ತಂಡಕ್ಕೆ ಆಸರೆಯಾಯಿತು. ಆದರೆ ಸ್ಟ್ರೈಕ್ ರೇಟ್ ಹೆಚ್ಚಿರಲಿಲ್ಲ. ಅಂತಿಮ ಹಂತದಲ್ಲಿ ಕೇನ್ ವಿಲಿಯಮ್ಸನ್ ಬ್ಯಾಟಿಂಗ್ ಪದರ್ಶನದಿಂದ ಸನ್ರೈರ್ಸಸ್ ಹೈದರಾಬಾದ್ 3 ವಿಕೆಟ್ ಕಳೆದುಕೊಂಡು 171 ರನ್ ಸಿಡಿಸಿತು.
ಟಾಸ್ ಗೆದ್ದು ಬ್ಯಾಟಿಂಗ್ ಇಳಿದ ಹೈದರಾಬಾದ್ ಆರಂಭದಲ್ಲಿ ಜಾನಿ ಬೈರ್ಸ್ಟೋ ವಿಕೆಟ್ ಕಳೆದುಕೊಂಡಿತು. ಆದರೆ ನಾಯಕ ಡೇವಿಡ್ ವಾರ್ನರ್ ಹಾಗೂ ಕನ್ನಡಿಗ ಮನೀಶ್ ಪಾಂಡೆ ಜೊತೆಯಾಟ ಹೈದರಾಬಾದ್ ತಂಡಕ್ಕೆ ಚೇತರಿಕೆ ನೀಡಿತು. ವಾರ್ನರ್ 103 ಸ್ಟ್ರೈಕ್ ರೇಟ್ನಲ್ಲಿ ಬ್ಯಾಟ್ ಬೀಸಿದರೆ, ಪಾಂಡೆ 132ರ ಸ್ಟ್ರೈಕ್ರೇಟ್ನಲ್ಲಿ ಬ್ಯಾಟಿಂಗ್ ಮಾಡಿದರು
ವಾರ್ನರ್ ಹಾಗೂ ಪಾಂಡೆ ಹಾಫ್ ಸೆಂಚುರಿ ಸಿಡಿಸಿ ಸಂಭ್ರಮಿಸಿದರು. ಆದರೆ ಅಬ್ಬರದ ಬ್ಯಾಟಿಂಗ್ ಪ್ರದರ್ಶನ ಇರಲಿಲ್ಲ. ವಾರ್ನರ್ 57 ರನ್ ಸಿಡಿಸಿ ಔಟಾದರೆ, ಪಾಂಡೆ 61 ರನ್ ಸಿಡಿಸಿ ನಿರ್ಗಮಿಸಿದರು.
ಅಂತಿಮ ಹಂತದಲ್ಲಿ ಕೇನ್ ವಿಲಿಯಮ್ಸನ್ 10 ಎಸೆತದಲ್ಲಿ ಅಜೇಯ 26 ಹಾಗೂ ಕೇದಾರ್ ಜಾಧವ್ ಅಜೇಯ 12 ರನ್ ಸಿಡಿಸಿದರು. ಈ ಮೂಲಕ ಹೈದರಾಬಾದ್ 3 ವಿಕೆಟ್ ಕಳೆದುಕೊಂಡು 171 ರನ್ ಸಿಡಿಸಿತು.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗೂ ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.