
ಅಹಮ್ಮದಾಬಾದ್(ಮೇ.02): ತೀವ್ರ ಹೊಟ್ಟೆ ನೋವು ಕಾಣಿಸಿಕೊಂಡ ಕಾರಣ ಆಸ್ಪತ್ರೆ ದಾಖಲಾಗ ಪಂಜಾಬ್ ಕಿಂಗ್ಸ್ ನಾಯಕ ಕೆಎಲ್ ರಾಹುಲ್ ಇದೀಗ ಚೇತರಿಸಿಕೊಳ್ಳುತ್ತಿದ್ದಾರೆ. ಅಪೆಂಡಿಕ್ಸ್ ಕಾರಣ ಶಸ್ತ್ರಚಿಕಿತ್ಸೆ ಅವಶ್ಯಕತೆ ಇದೆ. ಹೀಗಾಗಿ ಇಂದಿನ(ಮೇ.02) ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧದ ಪಂದ್ಯಕ್ಕೆ ರಾಹುಲ್ ಅಲಭ್ಯರಾಗಿದ್ದಾರೆ. ಹೀಗಾಗಿ ಮಯಾಂಕ್ ಅಗರ್ವಾಲ್ ತಂಡವನ್ನು ಮುನ್ನಡೆಸಲಿದ್ದಾರೆ.
ದಿಢೀರ್ ಆರೋಗ್ಯ ಸಮಸ್ಯೆ, ಆಸ್ಪತ್ರೆ ದಾಖಲಾದ ಪಂಜಾಬ್ ನಾಯಕ ಕೆಎಲ್ ರಾಹುಲ್!.
ಕೆಎಲ್ ರಾಹುಲ್ ಅನುಪಸ್ಥಿತಿಯಲ್ಲಿ ಮತ್ತೊರ್ವ ಕನ್ನಡಿಗ ಮಯಾಂಕ್ ಅಗರ್ವಾಲ್ ನಾಯಕತ್ವ ಜವಾಬ್ದಾರಿ ನೀಡಲಾಗಿದೆ. ಕೆಎಲ್ ರಾಹುಲ್ ಅಲಭ್ಯತೆ ಪಂಜಾಬ್ ಕಿಂಗ್ಸ್ ತಂಡಕ್ಕೆ ಬಹುದೊಡ್ಡ ಹೊಡೆತವಾಗಿದೆ. 7 ಪಂದ್ಯದಲ್ಲಿ 331 ರನ್ ಸಿಡಿಸಿರುವ ರಾಹುಲ್ ಆರೇಂಜ್ ಕ್ಯಾಪ್ ಹೋಲ್ಡರ್ ಆಗಿದ್ದಾರೆ.
ಕೆಎಲ್ ರಾಹುಲ್ ಶೀಘ್ರದಲ್ಲೇ ಚೇತರಿಸಿಕೊಳ್ಳಲಿದ್ದಾರೆ. ಎಲ್ಲಾ ಮುಂಜಾಗ್ರತ ಕ್ರಮಗಳನ್ನು ಕೈಗೊಳ್ಳಲಾಗಿದೆ. ರಾಹುಲ್ ಚೇತರಿಕೆಗೆ ನಮ್ಮ ಪ್ರಾರ್ಥನೆ ಎಂದು ಪಂಜಾಬ್ ಕಿಂಗ್ಸ್ ಟ್ವೀಟ್ ಮಾಡಿದೆ.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗೂ ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.