IPL 2021 ಪಂದ್ಯ ವೀಕ್ಷಿಸಿಲು ಅಭಿಮಾನಿಗಳಿಗೆ ಅವಕಾಶ; ಒಂದು ಕಂಡೀಷನ್!

Published : Apr 10, 2021, 02:52 PM ISTUpdated : Apr 10, 2021, 03:04 PM IST
IPL 2021 ಪಂದ್ಯ ವೀಕ್ಷಿಸಿಲು ಅಭಿಮಾನಿಗಳಿಗೆ ಅವಕಾಶ; ಒಂದು ಕಂಡೀಷನ್!

ಸಾರಾಂಶ

14ನೇ ಆವೃತ್ತಿ ಐಪಿಎಲ್ ಟೂರ್ನಿ ಆರಂಭಗೊಂಡಿದೆ. ಮೊದಲ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ತಂಡ ಮಣಿಸಿದ ಆರ್‌ಸಿಬಿ ಶುಭಾರಂಭ ಮಾಡಿದೆ. ಚೆನ್ನೈನಲ್ಲಿ ನಡೆದ ಪಂದ್ಯಕ್ಕೆ ಅಭಿಮಾನಿಗಳ ಪ್ರವೇಶ ನಿರಾಕರಿಸಲಾಗಿತ್ತು. ಇದೀಗ ಕೆಲ ಕ್ರಿಕೆಟ್ ಸಂಸ್ಛೆಗಳು ಅಭಿಮಾನಿಗಳ ಪ್ರವಶಕ್ಕೆ ಅವಕಾಶ ನೀಡಿದೆ. ಆದರೆ ಒಂದು ಕಂಡೀಷನ್ ಹಾಕಿದೆ. ಈ ಕುರಿತ ಹೆಚ್ಚಿನ ವಿವರ ಇಲ್ಲಿದೆ.

ಮುಂಬೈ(ಏ.10); ಕೊರೋನಾ ಆತಂಕದ ನಡುವೆ 14ನೇ ಆವೃತ್ತಿ ಐಪಿಎಲ್ ಟೂರ್ನಿ ಆರಂಭಗೊಂಡಿದೆ. ಮೊದಲ ಚರಣದ ಪಂದ್ಯಗಳನ್ನು ಚೆನ್ನೈನಲ್ಲಿ ಆಯೋಜಿಸಲಾಗಿದೆ. ಉದ್ಘಾಟನಾ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು, ರೋಹಿತ್ ಶರ್ಮಾ ನೇೃತ್ವದ ಮುಂಬೈ ಇಂಡಿಯನ್ಸ್ ತಂಡವನ್ನು ಮಣಿಸಿ ಟೂರ್ನಿಯಲ್ಲಿ ಶುಭಾರಂಭ ಮಾಡಿದೆ. ಆದರ ಈ ಪಂದ್ಯಕ್ಕೆ ಅಭಿಮಾನಿಗಳ ಪ್ರವೇಶ ನಿರಾಕರಿಸಲಾಗಿತ್ತು. ಇದೀಗ ಮುಂಬೈ ಕ್ರಿಕೆಟ್ ಅಸೋಸಿಯೇಶನ್ ಸೇರಿದಂತೆ ಕೆಲ ಕ್ರಿಕೆಟ್ ಸಂಸ್ಥೆಗಳು ಅಭಿಮಾನಿಗಳ ಪ್ರವೇಶಕ್ಕೆ ಒಪ್ಪಿಗೆ ನೀಡಿವೆ.

IPL 2021: ಎಬಿಡಿ ಆಟಕ್ಕೆ ಮತ್ತೊಮ್ಮೆ ಮನಸೋತ ವಿರೇಂದ್ರ ಸೆಹ್ವಾಗ್..!.

ಮುಂಬೈನ ವಾಂಖೆಡೆಯಲ್ಲಿ ಆಯೋಜಿಸಲಾಗುವು ಐಪಿಎಲ್ ಟೂರ್ನಿ ಪಂದ್ಯಗಳಿಗೆ ಅಭಿಮಾನಿಗಳ ಪ್ರವೇಶ ಕುರಿತು ಮುಂಬೈ ಕ್ರಿಕೆಟ್ ಸಂಸ್ಥೆ ಸಿಹಿ ಸುದ್ದಿ ನೀಡಿದೆ. ವಾಂಖೆಡೆ ಪಂದ್ಯಕ್ಕೆ ಅಭಿಮಾನಿಗಳ ಪ್ರವೇಶಕ್ಕೆ ಅವಕಾಶ ನೀಡಲಾಗುವುದು ಎಂದಿದೆ. ಶೇಕಡಾ 50 ರಷ್ಟು ಅಭಿಮಾನಿಳಿಗೆ ಅವಕಾಶ ನೀಡಲಾಗುವುದು. ಆದರೆ ಪಂದ್ಯ ವೀಕ್ಷಣೆಗೆ ಆಗಮಿಸುವ ಅಭಿಮಾನಿಗಳು ಕೊರೋನಾ ನೆಗಟೀವ್ ರಿಪೋರ್ಟ್ ತರಬೇಕು ಅನ್ನೋ ಕಂಡೀಷನ್ ಹಾಕಿದೆ.

ಡಿವಿಲಿಯರ್ಸ್ ಅಬ್ಬರಕ್ಕೆ ಮುಂಬೈ ಧೂಳೀಪಟ: 14ನೇ ಆವೃತ್ತಿಯಲ್ಲಿ ಆರ್‌ಸಿಬಿ ಶುಭಾರಂಭ!

48 ಗಂಟೆಗಳು ಮೀರದ ಕೊರೋನಾ ನೆಗಟೀವ್ ರಿಪೋರ್ಟ್ ಇದ್ದರೆ ಮಾತ್ರ ಐಪಿಎಲ್ ನೋಡಲು ಅವಕಾಶವಿದೆ. ಇಲ್ಲಿ ಕೊರೋನಾ ಲಸಿಕೆ ಪಡೆದುಕೊಂಡಿರುವ ಸರ್ಟಿಫಿಕೇಟ್ ತೋರಿಸಿ ಒಳ ಪ್ರವೇಶಿಸಲು ಸಾಧ್ಯವಿಲ್ಲ. ಲಸಿಕೆ ಪಡೆದವರೂ ನೆಗಟೀವ್ ರಿಪೋರ್ಟ್ ತರುವುದು ಅನಿವಾರ್ಯ ಎಂದು ಮುಂಬೈ ಕ್ರಿಕೆಟ್ ಸಂಸ್ಥೆ ಹೇಳಿದೆ.

PREV

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಸ್ಮೃತಿ ಮಂಧನಾ ಮದುವೆ ಮುರಿದ ಬಳಿಕ ಟೀಮ್‌ ಇಂಡಿಯಾ ಆಟಗಾರ್ತಿಯರ ಮಹಾ ನಿರ್ಧಾರ!
ಸಂಕಷ್ಟ ನಿವಾರಣೆಗೆ ಸಿಂಹಾಚಲಂ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿದ ವಿರಾಟ್ ಕೊಹ್ಲಿ