
ಚೆನ್ನೈ(ಏ.11): ನಿತೀಶ್ ರಾಣಾ ಸ್ಫೋಟಕ ಬ್ಯಾಟಿಂಗ್ , ರಾಹುಲ್ ತ್ರಿಪಾಠಿ ಹಾಫ್ ಸೆಂಚುರಿ ಸಿಡಿಸಿ ಅಬ್ಬರಿಸಿದರೆ, ಉಳಿದ ಬ್ಯಾಟ್ಸ್ಮನ್ಗಳಿಂದ ಹೆಚ್ಚಿನ ರನ್ ಹರಿದು ಬರಲಿಲ್ಲ. ಹೀಗಾಗಿ ಸನ್ರೈಸರ್ಸ್ ಹೈದರಾಬಾದ್ ವಿರುದ್ಧ ಕೆಕೆಆರ್ ವಿಕೆಟ್ 8 ನಷ್ಟಕ್ಕೆ 187 ರನ್ ಸಿಡಿಸಿದೆ.
ಪಾಕ್ ಬ್ಯಾಟ್ಸ್ಮನ್ ಮಾತ್ರವಲ್ಲ, ಪತ್ರಕರ್ತನಿಗೂ ತಿರುಗೇಟು ನೀಡಿದ ವೆಂಕಟೇಶ್ ಪ್ರಸಾದ್!.
ಟಾಸ್ ಸೋತು ಬ್ಯಾಟಿಂಗ್ ಇಳಿದ ಕೆಕೆಆರ್ಗೆ ನಿತೀಶ್ ರಾಣಾ ಹಾಗೂ ಶುಭ್ಮನ್ ಗಿಲ್ ಉತ್ತಮ ಆರಂಭ ನೀಡಿದರು. ಆದರೆ ಗಿಲ್ 15 ರನ್ ಸಿಡಿಸಿ ಔಟಾದರು. ಇತ್ತ ರಾಣಾ ಹೋರಾಟ ಮುಂದುವರಿಯಿತು. ರಾಹುಲ್ ತ್ರಿಪಾಠಿ ಹಾಗೂ ರಾಣಾ ಜೊತೆಯಾದಿಂದ ಕೆಕೆಆರ್ ಚೇತರಿಸಿಕೊಂಡಿತು. ರಾಣಾ ಹಾಗೂ ತ್ರಿಪಾಠಿ ಅರ್ಧಶತಕ ಸಿಡಿಸಿ ಮಿಂಚಿದರು.
ರಾಹುಲ್ ತ್ರಿಪಾಠಿ 53 ರನ್ ಸಿಡಿಸಿ ಔಟಾದರೆ, ಆ್ಯಂಡ್ರೆ ರಸೆಲ್ ಕೇವಲ 5 ರನ್ ಸಿಡಿಸಿ ಔಟಾದರು. ಆದರೆ ರಾಣಾ ಯಾವ ಸವಾಲಿಗೂ ಜಗ್ಗದೇ ಬ್ಯಾಟಿಂಗ್ ಪ್ರದರ್ಶನ ನೀಡಿದರು. ಇತ್ತ ಇಯಾನ್ ಮಾರ್ಗನ್ ಕೇವಲ 2 ರನ್ ಸಿಡಿಸಿ ಔಟಾದರು. ಅಂತಿಮ ಹಂತದಲ್ಲಿ ರನ್ಗಿಂತ ಹೆಚ್ಚು ವಿಕೆಟ್ ಪತನಗೊಂಡಿತು.
ದಿನೇಶ್ ಕಾರ್ತಿಕ್ ಹಾಗೂ ಶಕೀಬ್ ಅಲ್ ಹಸನ್ ಜೊತೆಯಾಟದಿಂದ ಕೆಕೆಆರ್ ಅಂತಿಮ ಹಂತದಲ್ಲಿ ರನ್ ಕಲೆಹಾಕಿತು. ಕಾರ್ತಿಕ್ ಅಜೇಯ 22 ರನ್ ಸಿಡಿಸಿದರು. ಈ ಮೂಲಕ ಕೆಕೆಆರ್ ವಿಕೆಟ್ 6 ನಷ್ಟಕ್ಕೆ 187 ರನ್ ಸಿಡಿಸಿತು.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗೂ ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.