
ಚೆನ್ನೈ(ಏ.13): ನಿತೀಶ್ ರಾಣಾ ಕ್ರೀಸ್ನಲ್ಲಿರುವವರೆಗೆ ಕೋಲ್ಕತಾ ನೈಟ್ ರೈಡರ್ಸ್ ಗೆಲುುವಿನ ಹಾದಿಯಲ್ಲಿ ಸಾಗಿತ್ತು. ಆದರೆ ರಾಣಾ ವಿಕೆಟ್ ಪತನಗೊಂಡ ಬಳಿಕ ಘಟಾನುಘಟಿ ಬ್ಯಾಟ್ಸ್ಮನ್ ಕ್ರೀಸಿಗಳಿದರೂ ಕೆಕೆಆರ್ಗೆ ಗೆಲುವು ಮಾತ್ರ ಸಿಗಲಿಲ್ಲ. ಕೆಕೆಆರ್ 7 ವಿಕೆಟ್ ಕಳೆದುಕೊಂಡು 142 ರನ್ ಸಿಡಿಸಿತು. ಈ ಮೂಲಕ ಮುಂಬೈ ಇಂಡಿಯನ್ಸ್ 10 ರನ್ ಗೆಲುವು ದಾಖಲಿಸಿದೆ.
152 ರನ್ ಟಾರ್ಗೆಟ್ ಪಡೆದ ಕೆಕೆಆರ್ ತಂಡಕ್ಕೆ ನಿತೀಶ್ ರಾಣಾ ಹಾಗೂ ಶುಭ್ಮನ್ ಗಿಲ್ ಉತ್ತಮ ಆರಂಭ ನೀಡಿದರು. ಆರಂಭಿಕ ಜೋಡಿ 72 ರನ್ ಜೊತೆಯಾಟ ನೀಡಿತು. ಗಿಲ್ 33 ರನ್ ಸಿಡಿಸಿ ಔಟಾದರು. ಈ ಮೂಲಕ ಇವರ ಜೊತೆಯಾಟಕ್ಕೆ ಬ್ರೇಕ್ ಬಿದ್ದಿತು. ರಾಹುಲ್ ತ್ರಿಪಾಠಿ ಹಾಗೂ ನಾಯಕ ಇಯಾನ್ ಮಾರ್ಗನ್ ನಿರೀಕ್ಷಿತ ಬ್ಯಾಟಿಂಗ್ ಪ್ರದರ್ಶನ ನೀಡಲಿಲ್ಲ.
ನಿತೀಶ್ ರಾಣಾ ಹೋರಾಟ ಕೆಕೆಆರ್ ತಂಡದ ಆತ್ಮವಿಶ್ವಾಸ ಹೆಚ್ಚಿಸಿತು. ಆದರೆ ನಿತೀಶ್ ರಾಣಾಗೆ ಯಾರಿಂದಲೂ ಸಾಥ್ ಸಿಗಲಿಲ್ಲ. ಶಕೀಬ್ ಅಲ್ ಹಸನ್ 9 ರನ್ ಸಿಡಿಸಿ ಔಟಾದರು. ಇತ್ತ ರಾಣಾ 57 ರನ್ ಸಿಡಿಸಿ ಔಟಾದರು. ಗೆಲುವಿನತ್ತ ಸಾಗಿದ್ದ ಕೆಕೆಆರ್ ತಂಡದ ಆತಂಕ ಹೆಚ್ಚಾಯಿತು. ರಾಹುಲ್ ಚಹಾರ್ ದಾಳಿಗೆ ಕೆಕೆಆರ್ ತತ್ತರಿಸಿತು. ಆ್ಯಂಡ್ರೆ ರಸೆಲ್ ಹಾಗೂ ದಿನೇಶ್ ಕಾರ್ತಿಕ್ ಹೋರಾಟ ಆರಂಭಿಸಿದರು.
ಕೆಕೆಆರ್ ಗೆಲುವಿಗೆ ಅಂತಿಮ 12 ಎಸೆತದಲ್ಲಿ 19 ರನ್ ಅವಶ್ಯಕತೆ ಇತ್ತು. ಕಾರ್ತಿಕ್ ಹಾಗೂ ರಸೆಲ್ ಸುಲಭವಾಗಿ ಟಾರ್ಗೆಟ್ ಚೇಸ್ ಮಾಡಬಲ್ಲ ಬ್ಯಾಟ್ಸ್ಮನ್. ಆದರೆ ಇಬ್ಬರೂ ಕೂಡ ಫಾರ್ಮ್ನಲ್ಲಿರುವಂತ ಕಾಣಲಿಲ್ಲ. ಒಂದೊಂದು ರನ್ ಗಳಿಸುವುದು ಎವರೆಸ್ಟ್ ಏರಿದಂತಿತ್ತು. ರಸೆಲ್ 9, ಪ್ಯಾಟ್ಕಮಿನ್ಸ್ ಶೂನ್ಯ ಸುತ್ತಿದರು. ಕೆಕಆರ್ 7 ವಿಕೆಟ್ ನಷ್ಟಕ್ಕೆ 142 ರನ್ ಸಿಡಿಸಿ ಸೊಲೋಪ್ಪಿಕೊಂಡಿತು.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗೂ ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.