IPL 2021: ಕೆಕೆಆರ್‌ ವಿರುದ್ದದ ಅರ್‌ಸಿಬಿಗೆ ಹ್ಯಾಟ್ರಿಕ್ ಜಯ

Suvarna News   | Asianet News
Published : Apr 18, 2021, 07:24 PM IST
IPL 2021: ಕೆಕೆಆರ್‌ ವಿರುದ್ದದ ಅರ್‌ಸಿಬಿಗೆ ಹ್ಯಾಟ್ರಿಕ್ ಜಯ

ಸಾರಾಂಶ

14ನೇ ಆವೃತ್ತಿಯ ಐಪಿಎಲ್‌ ಟೂರ್ನಿಯಲ್ಲಿ ವಿರಾಟ್ ಕೊಹ್ಲಿ ನೇತೃತ್ವದ ಆರ್‌ಸಿಬಿಯ ಗೆಲುವಿನ ನಾಗಾಲೋಟ ಮುಂದುವರೆದಿದ್ದು, ಟೂರ್ನಿಯಲ್ಲಿ ಸತತ 3ನೇ ಗೆಲುವು ದಾಖಲಿಸಿ ಅಂಕಪಟ್ಟಿಯಲ್ಲಿ ಅಗ್ರಸ್ಥಾನಕ್ಕೇರಿದೆ. ಈ ಕುರಿತಾದ ಒಂದು ರಿಪೋರ್ಟ್ ಇಲ್ಲಿದೆ ನೋಡಿ.

ಚೆನ್ನೈ(ಏ.18): ಮತ್ತೊಮ್ಮೆ ಬ್ಯಾಟಿಂಗ್ ಹಾಗೂ ಬೌಲಿಂಗ್‌ನಲ್ಲಿ ಸಂಘಟಿತ ಪ್ರದರ್ಶನ ತೋರಿದ ರಾಯಲ್ ಚಾಲೆಂಜರ್ಸ್‌ ಬೆಂಗಳೂರು ತಂಡವು ಕೋಲ್ಕತ ನೈಟ್‌ ರೈಡರ್ಸ್‌ ವಿರುದ್ದ 38 ರನ್‌ಗಳ ಭರ್ಜರಿ ಗೆಲುವು ಸಾಧಿಸಿದೆ. ಇದರೊಂದಿಗೆ ಐಪಿಎಲ್‌ ಇತಿಹಾಸದಲ್ಲಿ ಆರ್‌ಸಿಬಿ ಇದೇ ಮೊದಲ ಬಾರಿಗೆ ಆವೃತ್ತಿಯ ಮೊದಲ 3 ಪಂದ್ಯಗಳನ್ನು ಗೆದ್ದ ಸಾಧನೆ ಮಾಡಿದೆ. 

ಕಳೆದ ಆವೃತ್ತಿಯಲ್ಲೂ ಕೆಕೆಆರ್‌ ವಿರುದ್ದದ ಎರಡು ಪಂದ್ಯಗಳಲ್ಲಿ ಗೆಲುವಿನ ನಗೆ ಬೀರಿದ್ದ ಆರ್‌ಸಿಬಿ ಇದೀಗ ಮತ್ತೊಮ್ಮೆ ಕೆಕೆಆರ್ ಎದುರು ಪ್ರಾಬಲ್ಯ ಮೆರೆದಿದೆ. ಇದರ ಜತೆಗೆ 6 ಅಂಕಗಳೊಂದಿಗೆ ಆರ್‌ಸಿಬಿ ಮತ್ತೆ ಅಂಕಪಟ್ಟಿಯಲ್ಲಿ ಅಗ್ರಸ್ಥಾನಕ್ಕೇರಿದೆ.

ಆರ್‌ಸಿಬಿ ನೀಡಿದ್ದ 205 ರನ್‌ಗಳ ಕಠಿಣ ಗುರಿ ಬೆನ್ನತ್ತಿದ ಕೋಲ್ಕತ ನೈಟ್‌ ರೈಡರ್ಸ್‌ ಉತ್ತಮ ಆರಂಭ ಪಡೆಯಲು ವಿಫಲವಾಯಿತು. ಚುರುಕಾಗಿ ರನ್‌ ಗಳಿಸುವ ಯತ್ನದಲ್ಲಿ ಗಿಲ್‌ 9 ಎಸೆತದಲ್ಲಿ 21 ರನ್‌ ಬಾರಿಸಿ ವಿಕೆಟ್‌ ಒಪ್ಪಿಸಿದರು. ಕೆಲಹೊತ್ತಿನಲ್ಲೇ ರಾಹುಲ್‌ ತ್ರಿಪಾಠಿ ಕೂಡಾ 25 ರನ್‌ ಬಾರಿಸಿ ಸುಂದರ್‌ಗೆ ವಿಕೆಟ್‌ ಒಪ್ಪಿಸಿದರು. ರಾಣಾ ಬ್ಯಾಟಿಂಗ್ ಕೇವಲ 18 ರನ್‌ಗಳಿಗೆ ಸೀಮಿತವಾಯಿತು.

ಇನ್ನು ನಾಯಕ ಇಯಾನ್‌ ಮಾರ್ಗನ್‌ ಹಾಗೂ ಶಕೀಬ್‌ ತಂಡಕ್ಕೆ ಆಸರೆಯಾಗುವ ಯತ್ನ ನಡೆಸಿದರಾದರೂ ತಂಡವನ್ನು ಸೋಲಿನಿಂದ ಪಾರು ಮಾಡಲು ಸಾಧ್ಯವಾಗಲಿಲ್ಲ. ದಿನೇಶ್‌ ಕಾರ್ತಿಕ್ ಕೇವಲ 2 ರನ್‌ ಬಾರಿಸಿ ವಿಕೆಟ್ ಒಪ್ಪಿಸುವ ಮೂಲಕ ಜವಾಬ್ದಾರಿಯುತ ಬ್ಯಾಟಿಂಗ್‌ ನಡೆಸಲು ವಿಫಲರಾದರು. ಕೊನೆಯಲ್ಲಿ ರಸೆಲ್‌ (31) ಹೋರಾಟ ಕೆಕೆಆರ್‌ ಗೆಲುವಿನ ದಡ ಸೇರಿಸಲು ಸಾಧ್ಯವಾಗಲಿಲ್ಲ.

ಇದಕ್ಕೂ ಮೊದಲು ಆರ್‌ಸಿಬಿ ಆರಂಭಿಕ ಆಘಾತದ ಹೊರತಾಗಿಯೂ ಎಬಿ ಡಿವಿಲಿಯರ್ಸ್‌(78) ಹಾಗೂ ಗ್ಲೆನ್‌ ಮ್ಯಾಕ್ಸ್‌ವೆಲ್‌(76) ಸ್ಪೋಟಕ ಬ್ಯಾಟಿಂಗ್ ನೆರವಿನಿಂದ 4 ವಿಕೆಟ್ ಕಳೆದುಕೊಂಡು 204 ರನ್‌ ಕಲೆಹಾಕಿತ್ತು. 

PREV

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಸಂಕಷ್ಟ ನಿವಾರಣೆಗೆ ಸಿಂಹಾಚಲಂ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿದ ವಿರಾಟ್ ಕೊಹ್ಲಿ
ಕರ್ನಾಟಕ ರಾಜ್ಯ ಕ್ರಿಕೆಟ್‌ ಸಂಸ್ಥೆಗೆ ವೆಂಕಟೇಶ್ ಪ್ರಸಾದ್ ಅಧ್ಯಕ್ಷ, ಚುನಾವಣಾ ಫಲಿತಾಂಶ ಪ್ರಕಟ