
ಚೆನ್ನೈ(ಏ.16): ಸನ್ರೈಸರ್ಸ್ ಹೈದರಾಬಾದ್ ವಿರುದ್ಧ ಬುಧವಾರ(ಏ.14)ದಂದು ನಡೆದ ಪಂದ್ಯದಲ್ಲಿ ಅನುಚಿತ ವರ್ತನೆ ತೋರಿದ್ದಕ್ಕೆ ಆರ್ಸಿಬಿ ನಾಯಕ ವಿರಾಟ್ ಕೊಹ್ಲಿಗೆ ಮ್ಯಾಚ್ ರೆಫ್ರಿ ನಾರಾಯಣ್ ಕುಟ್ಟಿ ಛೀಮಾರಿ ಹಾಕಿದ್ದಾರೆ.
ಸನ್ರೈಸರ್ಸ್ ವೇಗಿ ಜೇಸನ್ ಹೋಲ್ಡರ್ ಬೌಲಿಂಗ್ನಲ್ಲಿ ವಿರಾಟ್ ಕೊಹ್ಲಿ ಔಟಾಗಿ ಹೊರನಡೆಯುವಾಗ ಸಿಟ್ಟಿನಲ್ಲಿ ತಂಡದ ಡಗೌಟ್ನಲ್ಲಿದ್ದ ಚೇರ್ವೊಂದನ್ನು ಒದ್ದರು. ಇದು ನಿಯಮ ಉಲ್ಲಂಘನೆಯಾಗಿದ್ದು, ಕೊಹ್ಲಿ ತಪ್ಪೊಪ್ಪಿಕೊಂಡಿದ್ದಾರೆ. ಮತ್ತೊಮ್ಮೆ ನಿಯಮ ಉಲ್ಲಂಘಿಸದಂತೆ ರೆಫ್ರಿ, ಕೊಹ್ಲಿಗೆ ಎಚ್ಚರಿಕೆ ನೀಡಿದ್ದಾರೆ. ವಿರಾಟ್ ಕೊಹ್ಲಿ 29 ಎಸೆತಗಳಲ್ಲಿ 33 ರನ್ ಬಾರಿಸಿ ವಿಕೆಟ್ ಒಪ್ಪಿಸಿದ್ದರು.
ಒಂದೇ ಓವರ್ನಲ್ಲಿ 3 ವಿಕೆಟ್: ಯಶಸ್ಸಿನ ಸೀಕ್ರೇಟ್ ಬಿಚ್ಚಿಟ್ಟ ಶಹಬಾಜ್ ಅಹಮದ್
ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಸನ್ರೈಸರ್ಸ್ ಹೈದರಾಬಾದ್ ನಡುವಿನ 14ನೇ ಆವೃತ್ತಿಯ ಐಪಿಎಲ್ ಟೂರ್ನಿಯ 6ನೇ ಪಂದ್ಯದಲ್ಲಿ ಆರ್ಸಿಬಿ 6 ವಿಕೆಟ್ಗಳ ರೋಚಕ ಜಯ ಸಾಧಿಸಿತ್ತು. ಆರ್ಸಿಬಿ ನೀಡಿದ್ದ 150 ರನ್ಗಳ ಸ್ಪರ್ಧಾತ್ಮಕ ಗುರಿ ಬೆನ್ನತ್ತಿದ ಸನ್ರೈಸರ್ಸ್ ಹೈದರಾಬಾದ್ ಒಂದು ಹಂತದಲ್ಲಿ ಕೇವಲ ಒಂದು ವಿಕೆಟ್ ಕಳೆದುಕೊಂಡು 96 ರನ್ ಬಾರಿಸುವ ಮೂಲಕ ಗೆಲುವಿನತ್ತ ದಾಪುಗಾಲು ಇಟ್ಟಿತ್ತು. ಆದರೆ ಶಹಬಾಜ್ ಅಹಮದ್ 17ನೇ ಓವರ್ನಲ್ಲಿ 3 ವಿಕೆಟ್ ಕಬಳಿಸುವ ಮೂಲಕ ಪಂದ್ಯ ಆರ್ಸಿಬಿ ಪಾಲಾಗುವಂತೆ ಮಾಡುವಲ್ಲಿ ಯಶಸ್ವಿಯಾದರು.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗೂ ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.