ಐಪಿಎಲ್ 2021: ಮನೀಶ್ ಪಾಂಡೆ ಉಳಿಸಲು ಹೋಗಿ ವಾರ್ನರ್‌ ತಲೆದಂಡ..?

Suvarna News   | Asianet News
Published : May 02, 2021, 01:59 PM IST
ಐಪಿಎಲ್ 2021: ಮನೀಶ್ ಪಾಂಡೆ ಉಳಿಸಲು ಹೋಗಿ ವಾರ್ನರ್‌ ತಲೆದಂಡ..?

ಸಾರಾಂಶ

ಕನ್ನಡಿಗ ಮನೀಶ್ ಪಾಂಡೆ ಉಳಿಸಲು ಹೋಗಿ ಡೇವಿಡ್ ವಾರ್ನರ್ ತಮ್ಮ ನಾಯಕತ್ವ ಕಳೆದುಕೊಳ್ಳಬೇಕಾಯಿತು ಎನ್ನುವ ಮಾತುಗಳು ಕೇಳಿ ಬರುತ್ತಿವೆ.ಈ ಕುರಿತಾದ ಒಂದು ರಿಪೋರ್ಟ್ ಇಲ್ಲಿದೆ ನೋಡಿ.

ಹೈದರಾಬಾದ್‌(ಮೇ.02): 14ನೇ ಆವೃತ್ತಿಯ ಐಪಿಎಲ್ ಟೂರ್ನಿಯ ಅರ್ಧದಲ್ಲೇ ಸನ್‌ರೈಸರ್ಸ್‌ ಹೈದರಾಬಾದ್‌ ತಂಡದ ನಾಯಕತ್ವ ಪಟ್ಟದಿಂದ ಡೇವಿಡ್ ವಾರ್ನರ್‌ರನ್ನು ಕೆಳಗಿಳಿಸಿ, ಕೇನ್‌ ವಿಲಿಯಮ್ಸನ್‌ಗೆ ಪಟ್ಟ ಕಟ್ಟಲಾಗಿದೆ. ಆದರೆ ಮನೀಶ್ ಪಾಂಡೆಯನ್ನು ಉಳಿಸಲು ಹೋಗಿ ವಾರ್ನರ್ ತಲೆದಂಡವಾಯಿತೇ ಎನ್ನುವ ಪ್ರಶ್ನೆ ಕೇಳಿ ಬರಲಾರಂಭಿಸಿದೆ. 

ಹೌದು, ಕೆಲವು ದಿನಗಳ ಹಿಂದಷ್ಟೇ ಸನ್‌ರೈಸರ್ಸ್‌ ಹೈದರಾಬಾದ್ ತಂಡದ ನಾಯಕರಾಗಿದ್ದ ಡೇವಿಡ್‌ ವಾರ್ನರ್‌ ಬಹಿರಂಗವಾಗಿಯೇ ಆಯ್ಕೆಗಾರರ ಕುರಿತಂತೆ ತಮ್ಮ ಅಸಮಾಧಾನ ಹೊರಹಾಕಿದ್ದರು. ಇದರ ಭಾಗವಾಗಿಯೇ ವಾರ್ನರ್ ತಲೆದಂಡವಾಗಿದೆ ಎಂದು ಖ್ಯಾತ ವೀಕ್ಷಕ ವಿವರಣೆಗಾರ ಹಾಗೂ ನ್ಯೂಜಿಲೆಂಡ್‌ ಮಾಜಿ ಕ್ರಿಕೆಟಿಗ ಸಿಮೊನ್ ಡಲ್ ಅಭಿಪ್ರಾಯಪಟ್ಟಿದ್ದಾರೆ.

ಡೆಲ್ಲಿ ಕ್ಯಾಪಿಟಲ್ಸ್‌ ವಿರುದ್ದದ ಪಂದ್ಯದಲ್ಲಿ ಸೋಲಿನ ಬಳಿಕ ಮಾತನಾಡಿದ್ದ ಡೇವಿಡ್ ವಾರ್ನರ್‌, ಮನೀಶ್ ಪಾಂಡೆಯನ್ನು ಆಯ್ಕೆಗಾರರು ತಂಡದಿಂದ ಕೈಬಿಟ್ಟಿದ್ದು ತಮ್ಮ ಪಾಲಿಗೆ ಮುಳುವಾಯಿತು ಎಂದು ತಮ್ಮ ಬೇಸರವನ್ನು ಹೊರಹಾಕಿದ್ದರು. ಇದಾದ ಬಳಿಕವೇ ಸನ್‌ರೈಸರ್ಸ್ ಹೈದರಾಬಾದ್ ತಂಡದಲ್ಲಿ ಎಲ್ಲವೂ ಸರಿಯಿಲ್ಲ ಎನ್ನುವ ಗಾಳಿಸುದ್ದಿಗೆ ಮತ್ತಷ್ಟು ಬಲಬಂದಂತೆ ಆಗಿತ್ತು.

ಐಪಿಎಲ್ 2021: ವಾರ್ನರ್ ತಲೆದಂಡ, ಸನ್‌ರೈಸರ್ಸ್‌ಗೆ ವಿಲಿಯಮ್ಸನ್‌ ಹೊಸ ನಾಯಕ

ಈ ಕುರಿತಂತೆ ಕ್ರಿಕ್‌ಬಜ್‌ ಜತೆ ಮಾತನಾಡಿದ ಸಿಮೊನ್ ಡಲ್, ಸನ್‌ರೈಸರ್ಸ್‌ ಹೈದರಾಬಾದ್‌ ತಂಡದಿಂದ ಮನೀಶ್ ಪಾಂಡೆಯನ್ನು ಕೈಬಿಡುವುದು ನಾಯಕ ವಾರ್ನರ್ ನಿರ್ಧಾರವಾಗಿರಲಿಲ್ಲ. ಈ ಆರೋಪವನ್ನು ಆಯ್ಕೆಗಾರರ ಮೇಲೆ ಹೊರಿಸಿದ್ದಕ್ಕೆ ವಾರ್ನರ್ ಈಗ ಬೆಲೆ ತೆತ್ತಿದ್ದಾರೆ ಎಂದು ಅಭಿಪ್ರಾಯಪಟ್ಟಿದ್ದಾರೆ.

14ನೇ ಆವೃತ್ತಿಯ ಐಪಿಎಲ್ ಟೂರ್ನಿಯಲ್ಲಿ ಸನ್‌ರೈಸರ್ಸ್ ಹೈದರಾಬಾದ್ ತಂಡವು 6 ಪಂದ್ಯಗಳನ್ನಾಡಿ 5ರಲ್ಲಿ ಸೋಲು ಹಾಗೂ ಕೇವಲ ಒಂದು ಪಂದ್ಯದಲ್ಲಿ ಗೆಲುವು ದಾಖಲಿಸುವ ಮೂಲಕ ಅಂಕಪಟ್ಟಿಯಲ್ಲಿ ಕೊನೆಯ ಸ್ಥಾನದಲ್ಲಿದೆ.

ಸನ್‌ರೈಸರ್ಸ್‌ ಹೈದರಾಬಾದ್‌ ತಂಡದ ಅತ್ಯಂತ ಯಶಸ್ವಿ ಬ್ಯಾಟ್ಸ್‌ಮನ್‌ ಎನಿಸಿಕೊಂಡಿರುವ ಡೇವಿಡ್‌ ವಾರ್ನರ್‌, ನಾಯಕನಾಗಿ 2016ರಲ್ಲಿ ಹೈದರಾಬಾದ್‌ ತಂಡಕ್ಕೆ ಚೊಚ್ಚಲ ಐಪಿಎಲ್ ಟ್ರೋಫಿ ಗೆಲ್ಲಿಸಿಕೊಟ್ಟಿದ್ದರು. ಇನ್ನು ವಾರ್ನರ್‌ ಅನುಪಸ್ಥಿತಿಯಲ್ಲಿ 2018ರಲ್ಲಿ ಕೇನ್‌ ವಿಲಿಯಮ್ಸನ್‌ ಸನ್‌ರೈಸರ್ಸ್‌ ಹೈದರಾಬಾದ್ ತಂಡವನ್ನು ಫೈನಲ್‌ಗೆ ಮುನ್ನಡೆಸಿದ್ದರು. 

PREV

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಭಾರತ ಎದುರು ಹೀನಾಯ ಸೋಲಿಗೆ ಅಚ್ಚರಿ ಕಾರಣ ಬಿಚ್ಚಿಟ್ಟ ದಕ್ಷಿಣ ಆಫ್ರಿಕಾ ಕ್ಯಾಪ್ಟನ್ ಮಾರ್ಕ್‌ರಮ್!
IPL 2026: ಮಿನಿ ಹರಾಜಿಗೆ ಒಂದು ದಿನ ಬಾಕಿ ಇರುವಾಗ ಕೊನೆ ಕ್ಷಣದಲ್ಲಿ ಭಾರತದ ಸ್ಟಾರ್ ಕ್ರಿಕೆಟಿಗ 'ವೈಲ್ಡ್ ಕಾರ್ಡ್' ಎಂಟ್ರಿ!