
ದೆಹಲಿ(ಏ.28): ಆರ್ಸಿಬಿ ವಿರುದ್ಧ ಭರ್ಜರಿ ಗೆಲುವು ಸಾಧಿಸಿ ಆತ್ಮವಿಶ್ವಾಸ ಹೆಚ್ಚಿಸಿಕೊಂಡಿರುವ ಚೆನ್ನೈ ಸೂಪರ್ ಕಿಂಗ್ಸ್ ಇದೀಗ ಸನ್ರೈಸರ್ಸ್ ಹೈದರಾಬಾದ್ ಮಣಿಸುವ ವಿಶ್ವಾಸದಲ್ಲಿದೆ. ಆದರೆ ಆರಂಭದಲ್ಲಿ ಕೊಂಚ ಹಿನ್ನಡೆಯಾಗಿದೆ. ಕಾರಣ ಈ ಮಹತ್ವದ ಪಂದ್ಯದಲ್ಲಿ ಟಾಸ್ ಗೆದ್ದಿರುವ SRH ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದೆ.
ಹೈದರಾಬಾದ್ ತಂಡದಲ್ಲಿ 2 ಬದಲಾವಣೆ ಮಾಡಲಾಗಿದೆ. ಸಂದೀಪ್ ಹಾಗೂ ಮನೀಶ್ ಪಾಂಡೆ ತಂಡ ಸೇರಿಕೊಂಡಿದ್ದಾರೆ. ಚೆನ್ನೈ ತಂಡದಲ್ಲೂ 2 ಬದಲಾವಣೆ ಮಾಡಲಾಗಿದೆ. ಡ್ವೇನ್ ಬ್ರಾವೋ ಹಾಗೂ ಇಮ್ರಾನ್ ತಾಹೀರ್ ತಂಡ ಸೇರಿಕೊಂಡಿದ್ದಾರೆ.
ಚೆನ್ನೈ ಸೂಪರ್ ಕಿಂಗ್ಸ್ ಆಡಿದ 5ರಲ್ಲಿ 4 ಪಂದ್ಯ ಗೆದ್ದುಕೊಂಡಿದೆ. ಈ ಮೂಲಕ ಅಂಕಪಟ್ಟಿಯಲ್ಲಿ ಮೊದಲ ಸ್ಥಾನದಲ್ಲಿದೆ. ಇಂದಿನ ಪಂದ್ಯ ಗೆದ್ದರೆ ಮತ್ತೆ ನಂ.1 ಸ್ಥಾನಕ್ಕೆ ಏರಲಿದೆ. ಇತ್ತ ಹೈದರಾಬಾದ್ 4 ಸೋಲು ಕಾಣೋ ಮೂಲಕ ಅಂಕಪಟ್ಟಿಯಲ್ಲಿ ಕೊನೆಯ ಸ್ಥಾನದಲ್ಲಿದೆ.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗೂ ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.