ಮೊದಲ ಪಂದ್ಯ ಗೆಲ್ಲುವುದು ಮುಖ್ಯವಲ್ಲ; ಆರ್‌ಸಿಬಿ ಕಾಲೆಳೆದ ರೋಹಿತ್ ಶರ್ಮಾ

Suvarna News   | Asianet News
Published : Apr 10, 2021, 10:51 AM IST
ಮೊದಲ ಪಂದ್ಯ ಗೆಲ್ಲುವುದು ಮುಖ್ಯವಲ್ಲ; ಆರ್‌ಸಿಬಿ ಕಾಲೆಳೆದ ರೋಹಿತ್ ಶರ್ಮಾ

ಸಾರಾಂಶ

ಹಾಲಿ ಐಪಿಎಲ್‌ ಚಾಂಪಿಯನ್‌ ಮುಂಬೈ ಇಂಡಿಯನ್ಸ್‌ ನಾಯಕ ರೋಹಿತ್‌ ಶರ್ಮಾ ಅರ್‌ಸಿಬಿ ವಿರುದ್ದ ಮೊದಲ ಪಂದ್ಯದ ಸೋಲಿನ ಬಳಿಕ ಅಚ್ಚರಿಯ ಹೇಳಿಕೆ ನೀಡಿದ್ದಾರೆ. ಏನದು ಎನ್ನುವ ನಿಮ್ಮ ಕುತೂಹಲಕ್ಕೆ ಇಲ್ಲಿದೆ ನೋಡಿ ಉತ್ತರ.

ಚೆನ್ನೈ(ಏ.10): 14ನೇ ಆವೃತ್ತಿಯ ಐಪಿಎಲ್‌ ಉದ್ಭಾಟನಾ ಪಂದ್ಯದಲ್ಲಿ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ವಿರುದ್ದ ಹಾಲಿ ಚಾಂಪಿಯನ್‌ ಮುಂಬೈ ಇಂಡಿಯನ್ಸ್‌ ಮುಗ್ಗರಿಸುವುದರೊಂದಿಗೆ ಇತಿಹಾಸ ಮರುಕಳಿಸಿದೆ. ಇದರೊಂದಿಗೆ ಸತತ 9ನೇ ವರ್ಷವೂ ಐಪಿಎಲ್‌ನ ಮೊದಲ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್‌ ಸೋಲಿನ ಕಹಿಯೊಂದಿಗೆ ಟೂರ್ನಿ ಆರಂಭಿಸಿದೆ.

ಹೌದು, ಇಲ್ಲಿನ ಎಂ ಎ ಚಿದಂಬರಂ ಸ್ಟೇಡಿಯಂನಲ್ಲಿ ನಡೆದ ಉದ್ಘಾಟನಾ ಪಂದ್ಯದಲ್ಲಿ ರಾಯಲ್‌ ಚಾಲೆಂಜರ್ಸ್ ಬೆಂಗಳೂರು ವಿರುದ್ದ ಮುಂಬೈ ಇಂಡಿಯನ್ಸ್‌ 2 ವಿಕೆಟ್‌ಗಳ ಅಂತರದ ರೋಚಕ ಸೋಲು ಅನುಭವಿಸಿದೆ. ಇದರ ಬೆನ್ನಲ್ಲೇ ಮೊದಲ ಪಂದ್ಯದ ಸೋಲಿನ ಬಗ್ಗೆ ರೋಹಿತ್ ಶರ್ಮಾ ಮೊದಲ ಪಂದ್ಯ ಗೆಲ್ಲುವುದು ಮುಖ್ಯವಲ್ಲ ಬದಲಾಗಿ ಚಾಂಪಿಯನ್‌ ಆಗುವುದು ಮುಖ್ಯ ಎಂದು ಆರ್‌ಸಿಬಿ ಕಾಲೆಳೆದಿದ್ದಾರೆ.

2013ರಿಂದೀಚೆಗೆ ಮುಂಬೈ ಇಂಡಿಯನ್ಸ್‌ ತಂಡ ಸತತ 9ನೇ ಬಾರಿಗೆ ಮೊದಲ ಪಂದ್ಯದಲ್ಲಿ ಸೋಲುಂಡಿದೆ. ಈ ಪೈಕಿ 8 ಪೂರ್ಣ ಆವೃತ್ತಿಗಳನ್ನಾಡಿ 5 ಬಾರಿ ಮುಂಬೈ ಇಂಡಿಯನ್ಸ್‌ ಚಾಂಪಿಯನ್ಸ್‌ ಪಟ್ಟ ಅಲಂಕರಿಸಿದೆ. ಆರ್‌ಸಿಬಿ ವಿರುದ್ದದ ಸೋಲಿನ ಬಗ್ಗೆ ಪ್ರತಿಕ್ರಿಯಿಸಿದ ರೋಹಿತ್ ಶರ್ಮಾ, ಮೊದಲ ಪಂದ್ಯ ಗೆಲ್ಲುವುದಕ್ಕಿಂತ ಚಾಂಪಿಯನ್‌ಶಿಪ್‌ ಗೆಲ್ಲುವುದು ಮುಖ್ಯ ಎಂದು ನನಗನಿಸುತ್ತಿದೆ. ಕೊನೆಯವರೆಗೂ ನಾವು ಒಳ್ಳೆಯ ಹೋರಾಟ ನೀಡಿದೆವು. ಅಷ್ಟು ಸುಲಭವಾಗಿ ನಾವು ಎದುರಾಳಿ ತಂಡ ಗೆಲುವು ಸಾಧಿಸಲು ಬಿಡಲಿಲ್ಲ. ಪಂದ್ಯದಲ್ಲಿ ನಾವು ಕೆಲವೊಂದು ತಪ್ಪುಗಳನ್ನು ಮಾಡಿದೆವು, ಇದೆಲ್ಲಾ ಆಟದಲ್ಲಿ ಸಹಜ. ಮುಂದಿನ ಪಂದ್ಯದಲ್ಲಿ ತಪ್ಪುಗಳನ್ನು ತಿದ್ದಿಕೊಂಡು ಮುನ್ನಡೆಯಬೇಕು ಎಂದು ಹೇಳಿದ್ದಾರೆ.

ಡಿವಿಲಿಯರ್ಸ್ ಅಬ್ಬರಕ್ಕೆ ಮುಂಬೈ ಧೂಳೀಪಟ: 14ನೇ ಆವೃತ್ತಿಯಲ್ಲಿ ಆರ್‌ಸಿಬಿ ಶುಭಾರಂಭ!
 
ಹಾಲಿ ಚಾಂಪಿಯನ್‌ ಮುಂಬೈ ಇಂಡಿಯನ್ಸ್‌ ತಂಡವು ಏಪ್ರಿಲ್ 13ರಂದು ಇದೇ ಚೆನ್ನೈನ ಎಂ ಎ ಚಿದಂಬರಂ ಸ್ಟೇಡಿಯಂನಲ್ಲಿ ಕೋಲ್ಕತ ನೈಟ್‌ ರೈಡರ್ಸ್‌ ತಂಡವನ್ನು ಎದುರಿಸಲಿದೆ. 

PREV

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಐಸಿಸಿಗೆ ಬಿಗ್ ಶಾಕ್ ಕೊಟ್ಟ ಮುಕೇಶ್ ಅಂಬಾನಿ ನೇತೃತ್ವದ ಜಿಯೋ ಹಾಟ್‌ಸ್ಟಾರ್!
ಇಂದಿನಿಂದ ಭಾರತ-ದಕ್ಷಿಣ ಆಫ್ರಿಕಾ ಟಿ20 ಕದನ; ಭಾರತಕ್ಕಿದೆ ಬಿಗ್ ಚಾಲೆಂಜ್!