
ಮುಂಬೈ(ಮೇ.04): IPL 2021 ಕೊರೋನಾ ಕಾರಣದಿಂದ ಅರ್ಧಕ್ಕೆ ಸ್ಥಗಿತಗೊಂಡಿದೆ. ಕೆಕೆಆರ್ ಆಟಗಾರಲ್ಲಿ ಕೊರೋನಾ ಪಾಸಿಟೀವ್ ಕಾರಣ ಕೆಕೆಆರ್ ಹಾಗೂ ಆರ್ಸಿಬಿ ನಡುವಿನ ಪಂದ್ಯ ಮುಂದೂಡಲಾಗಿತ್ತು. ಇದರ ಬೆನ್ನಲ್ಲೇ ಮಹತ್ವದ ಸಭೆ ನಡೆಸಿದ ಬಿಸಿಸಿಐ, ಟೂರ್ನಿ ಸ್ಥಗಿತಗೊಳಿಸಲು ನಿರ್ಧರಿಸಿದೆ. ಪರಿಸ್ಥಿತಿ ಸಹಜ ಸ್ಥಿತಿಗೆ ಮರಳಿದ ಬೆನ್ನಲ್ಲೇ ಐಪಿಎಲ್ ಟೂರ್ನಿ ಮುಂದುವರಿಯಲಿದೆ ಎಂದು ಬಿಸಿಸಿಐ ಹೇಳಿದೆ. ಬಿಸಿಸಿಐ ನಿರ್ಧಾರ ಹೊರಬಿದ್ದ ಬೆನ್ನಲ್ಲೇ ಇದೀಗ ಒಬ್ಬೊಬ್ಬ ಆಟಗಾರರು ಕೊರೋನಾ ಪಾಸಿಟೀವ್ ರಿಪೋರ್ಟ್ ಬಹಿರಂಗ ಪಡಿಸುತ್ತಿದ್ದಾರೆ.
ಐಪಿಎಲ್ ರದ್ದು: ಈ ಸಲ ಕಪ್ ಕೊರೋನಾದ್ದು!
ಸನ್ರೈಸರ್ಸ್ ಹೈದರಾಬಾದ್ ಹಾಗೂ ಮುಂಬೈ ಇಂಡಿಯನ್ಸ್ ತಂಡ ನಿಗದಿಯಂತೆ ಇಂದು ಮುಖಾಮುಖಿಯಾಬೇಕಿತ್ತು. ಆದರೆ ಸಂಪೂರ್ಣ ಐಪಿಎಲ್ ಟೂರ್ನಿ ಮುಂದೂಡಲಾಗಿದೆ. ಆದರೆ ಟೂರ್ನಿ ಸ್ಥಗಿತ ಮಾಡದಿದ್ದರೂ ಇಂದಿನ ಪಂದ್ಯ ಆಯೋಜನೆ ಕಷ್ಟವಾಗಿತ್ತು. ಕಾರಣ ಸನ್ರೈಸರ್ಸ್ ಹೈದರಾಬಾದ್ ಕಂಡದ ವೃದ್ಧಿಮಾನ್ ಸಾಹ ಹಾಗೂ ಡೆಲ್ಲಿ ಕ್ಯಾಪಿಟಲ್ಸ್ ತಂಡದ ಅಮಿತ್ ಮಿಶ್ರಾಗೆ ಕೊರೋನಾ ಪಾಸಿಟೀವ್ ಆಗಿದೆ.
ವೃದ್ಧಿಮಾನ್ ಸಾಹಾ ಹಾಗೂ ಅಮಿತ್ ಮಿಶ್ರಾಗೆ ಐಸೋಲೇಶನ್ಗೆ ಒಳಗಾಗಿದ್ದಾರೆ. ಜೊತೆಗೆ ಚಿಕಿತ್ಸೆ ಮುಂದುವರಿದಿದೆ. ಸೋಮವಾರ ಕೆಕೆಆರ್ ತಂಡದ ವರುಣ್ ಚಕ್ರವರ್ತಿ ಹಾಗೂ ಸಂದೀಪ್ ವಾರಿಯರ್ಗೆ ಕೊರೋನಾ ಅಂಟಿಕೊಂಡಿತ್ತು. ಹೀಗಾಗಿ ಕೆಕೆಆರ್ ಹಾಗೂ ಆರ್ಸಿಬಿ ಪಂದ್ಯ ಮುಂಡಲಾಗಿತ್ತು.
ಇದೀಗ ಹೆಚ್ಚಿನ ಆಟಗಾರಲ್ಲಿ ಕೊರೋನಾ ಕಾಣಿಸಿಕೊಂಡಿರುವದು ಬಹಿರಂಗವಾಗಿದೆ. ಬಯೋಬಬಲ್ ಸರ್ಕಲ್, ಅತ್ಯಂತ ಮುಂಜಾಗ್ರತಾ ಹಾಗೂ ಕಠಿಣ ಕ್ರಮಗಳನ್ನು ಕೈಗೊಂಡಿದ್ದರೂ, ಆಟಗಾರರಲ್ಲಿ ಕೊರೋನಾ ಕಾಣಿಸಿಕೊಂಡಿರುವುದು ಆತಂತಕ್ಕೆ ಕಾರಣವಾಗಿದೆ.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗೂ ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.